Homeಕರ್ನಾಟಕಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು...

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

- Advertisement -
- Advertisement -

ಮಂಗಳೂರಿನಲ್ಲಿ ದೊಡ್ಡ ದೊಡ್ಡ ಕೈಗಾಗರಿಕೆಗಳು ಇವೆ. ಆದರೆ ಅಲ್ಲಿ ವರ್ಷದಿಂದ ವರ್ಷಕ್ಕೆ ಉದ್ಯೋಗಗಳು ಇಳಿಯುತ್ತಿವೆ. ಕೈಗಾರಿಗಕೆಗಳು, ಬಂದರು ಮತ್ತು ವಿಮಾನ ನಿಲ್ದಾಣಗಳು ಖಾಸಗೀಕರಕ್ಕೆ ಒಳಗಾಗಿದೆ. ಮಂಗಳೂರು ವಿಮಾನ ನಿಲ್ದಾಣ ಅದಾನಿ ವಶದಲ್ಲಿದೆ, ಅದರ ಬಗ್ಗೆ ನಮ್ಮ ಯುವಜನರು ಮಾತನಾಡಬೇಕಿತ್ತು. ಆದರೆ ಭಾವನಾತ್ಮಕವಾಗಿ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡಲಾಗುತ್ತಿದೆ ಎಂದು ಹೋರಾಟಗಾರ ಮುನೀರ್ ಕಾಟಿಪಳ್ಳ ಗುರುವಾರ ಹೇಳಿದರು. ಅದಾನಿ ವಶದಲ್ಲಿರುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಗುರುವಾರ ‘ಉದ್ಯೋಗ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮಾತನಾಡುತ್ತಿದ್ದರು.

“ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುವುದು ಬಿಟ್ಟು ಉದ್ಯೋಗದ ಪ್ರಮಾಣವನ್ನು ಕಡಿಮೆ ಮಾಡಲಾಗುತ್ತಿದೆ. ಇರುವ 80% ಉದ್ಯೋಗಗಳು ಕೂಡಾ ಗುತ್ತಿಗೆ ಆಧಾರದ ಉದ್ಯೋಗಗಳಾಗಿದ್ದು, ಜೊತೆಗೆ ಸ್ಥಳೀಯರಿಗೆ ಉದ್ಯೊಗ ನೀಡುತ್ತಿಲ್ಲ. ಕೈಗಾರಿಕೆಗಳಲ್ಲಿ ಯುನಿಯನ್‌ಗಳ ಶಕ್ತಿ ಕೂಡಾ ಕಡಿಮೆ ಮಾಡಲಾಗಿದೆ. ಹೊಸ ಉದ್ಯೋಗಗಳಾದ ಸ್ವಿಗ್ಗಿ, ಜೊಮೆಟೊ ರೀತಿಯ ಉದ್ಯೋಗಗಳು ಸೃಷ್ಟಿಯಾದರೂ ವೇತನ ತೀರಾ ಕಡಿಮೆ ನೀಡಲಾಗುತ್ತಿದೆ” ಎಂದು ಅವರು ಹೇಳಿದರು.

ದೊಡ್ಡ ಕಂಪೆನಿಗಳು ಮಾಡುವ ಚಿಲ್ಲರೆ ವ್ಯಾಪಾರದಿಂದಾಗಿ ಸ್ವಯಂ ಉದ್ಯೋಗಗಳು ಇಲ್ಲಾದಾಗಿದೆ. ಕಾರ್ಮಿಕ ಸಂಘಗಳು ಕಟ್ಟಲು ಅವಕಾಶವಿಲ್ಲ. ಯುವಜನರ ಇಡೀ ಜೀವನ ಅಭದ್ರತೆಯಲ್ಲಿ ಕಳಯುವಂತೆ ಆಗಿದೆ ಎಂದು ಅವರು ಹೇಳಿದರು.

“ದೊಡ್ಡ ಕಂಪೆನಿಗಳಲ್ಲಿ ಉದ್ಯೋಗ ಎಂಬ ಕಾರಣಕ್ಕೆ ಯುವಜನರಿಗೆ ಮದುವೆಯಾಗುತ್ತಿದೆ ಎಂಬ ಲಾಭವೊಂದನ್ನು ಬಿಟ್ಟು ಬೇರೇನೂ ಆಗುತ್ತಿಲ್ಲ. ಆದರೆ ಅವರ ವೇತನಗಳು 15 ಸಾವಿರ ಕೂಡಾ ಇರುವುದಿಲ್ಲ. ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ಕೆಲಸ ಮಾಡುವ ಯುವಜನರು ಅಲ್ಲಿ ಕೆಲಸ ಮಾಡಿ ಹೊರಗಡೆ ಕೂಡಾ ಹತ್ತು ಗಂಟೆಯ ವರೆಗೆ ಕೆಲಸ ಮಡುತ್ತಿದ್ದಾರೆ. ಆದರೆ, ಅವರ ಆರೋಗ್ಯದ ಬಗ್ಗೆ ಯಾರು ಹೊಣೆ?” ಎಂದು ಮುನೀರ್ ಕಾಟಿಪಳ್ಳ ಅವರು ಕೇಳಿದರು.

“ಭೂಸ್ವಾಧಿನ ಮಾಡುವಾಗ ಎಸ್‌ಇಝೆಡ್ ಪರವಾಗಿ ಇದ್ದ ಬಜರಂಗದಳ, ಭಾವನಾತ್ಮಕ ವಿಚಾರದಲ್ಲಿ ಮಾತ್ರ ಪ್ರತಿಭಟನೆ ಮಾಡುತ್ತಿದೆ. ಭಾವನಾತ್ಮಕ ವಿಚಾರವಾಗಿ ಪ್ರತಿಭಟನೆ ಮಡುವವರು ಉದ್ಯೊಗದ ಬಗ್ಗೆ ಪ್ರತಿಭಟನೆ ಮಾಡುತ್ತಿಲ್ಲ. ಧರ್ಮ ಎಂಬ ಅಫೀಮನ್ನು ನೀಡಲಾಗಿದೆ. ಉದ್ಯೋಗದ ಬಗ್ಗೆ ಮಾತಾನಾಡದ ಸೂಲಿಬೆಲೆ ಮುಸ್ಲಿಮರ ಹೆಣ್ಣುಗಳನ್ನು ಮದುವೆ ಆಗಿ ಎಂದು ದ್ವೆಷ ಭಾಷಣ ಮಾಡುತ್ತಿದ್ದಾರೆ” ಎಂದು ಹೇಳಿದರು.

“ವಿದೇಶಗಳಲ್ಲಿ ಉದ್ಯೋಗ ನಷ್ಟ ಹೊಂದಿದ ಯುವಕರಿಗೆ ಮರು ಜೀವನ ಕಟ್ಟಿಕೊಳ್ಳಲು ಸರ್ಕಾರ ನೆರವಾಗುತ್ತಿಲ್ಲ. ಕೇರಳದಲ್ಲಿ ಇಂತಹ ಯುವಕರಿಗೆ ಸರ್ಕಾರ ನೆರವು ನೀಡುತ್ತಿದೆ. ಬಜೆಟ್‌ನಲ್ಲಿ ಖಾಸಗಿ ಕಂಪೆನಿಗೆ ಸಾವಿರಾರು ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರ, ಅವರು ಎಷ್ಟು ಖಾಯಂ ಉದ್ಯೋಗ ಎಷ್ಟು ಕೊಡುತ್ತಿದ್ದಾರೆ? ಎಷ್ಟು ವೇತನ ನೀಡುತ್ತಾರೆ ಎಂಬ ಬಗ್ಗೆ ಹೇಳುವುದಿಲ್ಲ” ಎಂದು ಹೇಳಿದರು.

ಸಾರ್ವಜನಿಕ ಆರೋಗ್ಯದ ಬಗ್ಗೆ ಕಾಳಜಿಯಿಲ್ಲದ ಸರ್ಕಾರವನ್ನು ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕು: ಜನಪರ ವೈದ್ಯ ಡಾ. ಅನಿಲ್ ಕುಮಾರ್ ಅವುಲಪ್ಪ

ಕಾರ್ಯಕ್ರಮದಲ್ಲಿ ‘ಜನಾರೋಗ್ಯ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮಾತನಾಡಿದ ಖ್ಯಾತ ಜನಪರ ವೈದ್ಯರಾದ ಡಾ. ಅನಿಲ್ ಕುಮಾರ್ ಅವುಲಪ್ಪ, ಸ್ವಾತಂತ್ಯ್ರ ಬಂದು 78 ವರ್ಷಗಳಾದರೂ ಸಹಜ ಪ್ರಕ್ರಿಯೆಯಾದ ಗರ್ಭದಾರಣೆಯ ಸಮಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

“ಸ್ವಾತಂತ್ರ ನಂತರ ಕೂಡಾ ಕಾಯಿಲೆಗೆ ಬಲಿಯಾಗುವುದು ಹೆಚ್ಚಾಗಿದೆ. 70 ದಶಕಗಳ ಹೊತ್ತಿಗೆ ಸಾಂಕ್ರಮಿಕ ಕಾಯಿಲೆಗೆ ಬಲಿಯಾಗುತ್ತಿದ್ದರೆ, 90ರ ನಂತರ ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾದರು. ಆದರೆ ಈಗ ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾಗುತ್ತಿದ್ದೇವೆ. ಬ್ರಿಟೀಷರ ಕಾಲದಿಂದಲೂ ಟಿಬಿ ಮುಕ್ತ ಎಂದು ಹೇಳುವ ನಾವು ಈಗಲೂ ಅದನ್ನೆ ಹೇಳುತ್ತಲೆ ಇದ್ದೇವೆ” ಎಂದು ಹೇಳಿದರು.

“ಇಂಡಿಯನ್ ಪಬ್ಲಿಕ್ ಹೆಲ್ತ್‌ ಸ್ಟಾಂಡರ್ಡ್‌ ಪ್ರಕಾರ ಆರೋಗ್ಯಕ್ಕೆ ಬಜೆಟ್‌ನ 8% ಮೀಸಲಿಡಬೇಕಿದೆ. ಆದರೆ ನಮ್ಮ ಸರ್ಕಾರ ಕೇವಲ 4% ಅಷ್ಟೆ ಇದೆ. ರಾಜ್ಯದ ಜಿಡಿಪಿಯಲ್ಲಿ 2.5%ರಷ್ಟು ಆರೋಗ್ಯಕ್ಕೆ ಖರ್ಚು ಮಾಡಬೇಕು ಎಂದು ಅದೇ ನಿಯಮ ಹೇಳುತ್ತದೆ. ಆದರೆ ರಾಜ್ಯ ಸರ್ಕಾರ ಯಾವತ್ತೂ ಕೂಡಾ 0.6% ಕ್ಕಿ ಹೆಚ್ಚು ಖರ್ಚು ಮಾಡಿಲ್ಲ. ಕೇಂದ್ರೆ ಸರ್ಕಾರ ತನ್ನ ಭಾರತದ ಜಿಡಿಪಿಯಲ್ಲಿ 1.97% ಮಾತ್ರ ಖರ್ಚು ಮಾಡುತ್ತಿದೆ” ಎಂದು ಅವರು ಹೇಳಿದರು. ಅದಾನಿ ವಶದಲ್ಲಿರುವ

“ಮೂಲಭೂತವಾಗಿ ಜನರ ಆರೋಗ್ಯಕ್ಕಾಗಿ ವೈದ್ಯಕೀಯ ಸಂಸ್ಥೆಗಳು ಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಗುಲ್ಬರ್ಗಾ ವಿಭಾಗಗಳಿವೆ. 2022ರ ವರೆಗೆ ರಾಜ್ಯದ ಗುಲ್ಬರ್ಗಾ ಹೊರತು ಪಡಿಸಿ ರಾಜ್ಯದ ಇತರ ಕಡೆಗಳಲ್ಲಿ ಹೆಚ್ಚೆ ಸಂಸ್ಥೆಗಳು ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಆರೋಗ್ಯ ಕೇಂದ್ರಗಳು ಹೆಚ್ಚಿದ್ದರೂ, ಸಮುದಾಯ ಕೇಂದ್ರಗಳು ರಾಜ್ಯದಾದ್ಯಂತ ಕಡಿಮೆಯಿವೆ. ಅದಾಗ್ಯೂ, ಈ ಎಲ್ಲಾ ಸಂಸ್ಥೆಗಳಿಗೆ ಬೇಕಾದ ಮಾನವ ಸಂಪನ್ಮೂಲಗಳು ಕಡಿಮೆಯಿದೆ.” ಎಂದು ಅವರು ಹೇಳಿದರು.

“ಹುದ್ದೆಗಳು ಖಾಲಿಯಿದ್ದರೂ ಅದಕ್ಕೆ ಸರ್ಕಾರ ನೇಮಿಸುತ್ತಿಲ್ಲ. ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಬಜೆಟ್‌ನಲ್ಲಿ ಯಾವುದೇ ರೀತಿಯ ಘೋಷಣೆಗಳನ್ನು ಮಾಡಿಲ್ಲ. ಸಾರ್ವಜನಿಕ ವೈದ್ಯಕೀಯ ಸಂಸ್ಥೆಗಳ ಹುದ್ದೆಗಳನ್ನು ಭರ್ತಿ ಮಾಡಲು ಬೇಕಾಗುವ ಅನುದಾನ ಘೋಷಿಸದ ಯಾವುದೇ ಸರ್ಕಾರ ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...