Homeಕರ್ನಾಟಕಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು...

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

- Advertisement -
- Advertisement -

ಮಂಗಳೂರಿನಲ್ಲಿ ದೊಡ್ಡ ದೊಡ್ಡ ಕೈಗಾಗರಿಕೆಗಳು ಇವೆ. ಆದರೆ ಅಲ್ಲಿ ವರ್ಷದಿಂದ ವರ್ಷಕ್ಕೆ ಉದ್ಯೋಗಗಳು ಇಳಿಯುತ್ತಿವೆ. ಕೈಗಾರಿಗಕೆಗಳು, ಬಂದರು ಮತ್ತು ವಿಮಾನ ನಿಲ್ದಾಣಗಳು ಖಾಸಗೀಕರಕ್ಕೆ ಒಳಗಾಗಿದೆ. ಮಂಗಳೂರು ವಿಮಾನ ನಿಲ್ದಾಣ ಅದಾನಿ ವಶದಲ್ಲಿದೆ, ಅದರ ಬಗ್ಗೆ ನಮ್ಮ ಯುವಜನರು ಮಾತನಾಡಬೇಕಿತ್ತು. ಆದರೆ ಭಾವನಾತ್ಮಕವಾಗಿ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡಲಾಗುತ್ತಿದೆ ಎಂದು ಹೋರಾಟಗಾರ ಮುನೀರ್ ಕಾಟಿಪಳ್ಳ ಗುರುವಾರ ಹೇಳಿದರು. ಅದಾನಿ ವಶದಲ್ಲಿರುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಗುರುವಾರ ‘ಉದ್ಯೋಗ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮಾತನಾಡುತ್ತಿದ್ದರು.

“ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುವುದು ಬಿಟ್ಟು ಉದ್ಯೋಗದ ಪ್ರಮಾಣವನ್ನು ಕಡಿಮೆ ಮಾಡಲಾಗುತ್ತಿದೆ. ಇರುವ 80% ಉದ್ಯೋಗಗಳು ಕೂಡಾ ಗುತ್ತಿಗೆ ಆಧಾರದ ಉದ್ಯೋಗಗಳಾಗಿದ್ದು, ಜೊತೆಗೆ ಸ್ಥಳೀಯರಿಗೆ ಉದ್ಯೊಗ ನೀಡುತ್ತಿಲ್ಲ. ಕೈಗಾರಿಕೆಗಳಲ್ಲಿ ಯುನಿಯನ್‌ಗಳ ಶಕ್ತಿ ಕೂಡಾ ಕಡಿಮೆ ಮಾಡಲಾಗಿದೆ. ಹೊಸ ಉದ್ಯೋಗಗಳಾದ ಸ್ವಿಗ್ಗಿ, ಜೊಮೆಟೊ ರೀತಿಯ ಉದ್ಯೋಗಗಳು ಸೃಷ್ಟಿಯಾದರೂ ವೇತನ ತೀರಾ ಕಡಿಮೆ ನೀಡಲಾಗುತ್ತಿದೆ” ಎಂದು ಅವರು ಹೇಳಿದರು.

ದೊಡ್ಡ ಕಂಪೆನಿಗಳು ಮಾಡುವ ಚಿಲ್ಲರೆ ವ್ಯಾಪಾರದಿಂದಾಗಿ ಸ್ವಯಂ ಉದ್ಯೋಗಗಳು ಇಲ್ಲಾದಾಗಿದೆ. ಕಾರ್ಮಿಕ ಸಂಘಗಳು ಕಟ್ಟಲು ಅವಕಾಶವಿಲ್ಲ. ಯುವಜನರ ಇಡೀ ಜೀವನ ಅಭದ್ರತೆಯಲ್ಲಿ ಕಳಯುವಂತೆ ಆಗಿದೆ ಎಂದು ಅವರು ಹೇಳಿದರು.

“ದೊಡ್ಡ ಕಂಪೆನಿಗಳಲ್ಲಿ ಉದ್ಯೋಗ ಎಂಬ ಕಾರಣಕ್ಕೆ ಯುವಜನರಿಗೆ ಮದುವೆಯಾಗುತ್ತಿದೆ ಎಂಬ ಲಾಭವೊಂದನ್ನು ಬಿಟ್ಟು ಬೇರೇನೂ ಆಗುತ್ತಿಲ್ಲ. ಆದರೆ ಅವರ ವೇತನಗಳು 15 ಸಾವಿರ ಕೂಡಾ ಇರುವುದಿಲ್ಲ. ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ಕೆಲಸ ಮಾಡುವ ಯುವಜನರು ಅಲ್ಲಿ ಕೆಲಸ ಮಾಡಿ ಹೊರಗಡೆ ಕೂಡಾ ಹತ್ತು ಗಂಟೆಯ ವರೆಗೆ ಕೆಲಸ ಮಡುತ್ತಿದ್ದಾರೆ. ಆದರೆ, ಅವರ ಆರೋಗ್ಯದ ಬಗ್ಗೆ ಯಾರು ಹೊಣೆ?” ಎಂದು ಮುನೀರ್ ಕಾಟಿಪಳ್ಳ ಅವರು ಕೇಳಿದರು.

“ಭೂಸ್ವಾಧಿನ ಮಾಡುವಾಗ ಎಸ್‌ಇಝೆಡ್ ಪರವಾಗಿ ಇದ್ದ ಬಜರಂಗದಳ, ಭಾವನಾತ್ಮಕ ವಿಚಾರದಲ್ಲಿ ಮಾತ್ರ ಪ್ರತಿಭಟನೆ ಮಾಡುತ್ತಿದೆ. ಭಾವನಾತ್ಮಕ ವಿಚಾರವಾಗಿ ಪ್ರತಿಭಟನೆ ಮಡುವವರು ಉದ್ಯೊಗದ ಬಗ್ಗೆ ಪ್ರತಿಭಟನೆ ಮಾಡುತ್ತಿಲ್ಲ. ಧರ್ಮ ಎಂಬ ಅಫೀಮನ್ನು ನೀಡಲಾಗಿದೆ. ಉದ್ಯೋಗದ ಬಗ್ಗೆ ಮಾತಾನಾಡದ ಸೂಲಿಬೆಲೆ ಮುಸ್ಲಿಮರ ಹೆಣ್ಣುಗಳನ್ನು ಮದುವೆ ಆಗಿ ಎಂದು ದ್ವೆಷ ಭಾಷಣ ಮಾಡುತ್ತಿದ್ದಾರೆ” ಎಂದು ಹೇಳಿದರು.

“ವಿದೇಶಗಳಲ್ಲಿ ಉದ್ಯೋಗ ನಷ್ಟ ಹೊಂದಿದ ಯುವಕರಿಗೆ ಮರು ಜೀವನ ಕಟ್ಟಿಕೊಳ್ಳಲು ಸರ್ಕಾರ ನೆರವಾಗುತ್ತಿಲ್ಲ. ಕೇರಳದಲ್ಲಿ ಇಂತಹ ಯುವಕರಿಗೆ ಸರ್ಕಾರ ನೆರವು ನೀಡುತ್ತಿದೆ. ಬಜೆಟ್‌ನಲ್ಲಿ ಖಾಸಗಿ ಕಂಪೆನಿಗೆ ಸಾವಿರಾರು ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರ, ಅವರು ಎಷ್ಟು ಖಾಯಂ ಉದ್ಯೋಗ ಎಷ್ಟು ಕೊಡುತ್ತಿದ್ದಾರೆ? ಎಷ್ಟು ವೇತನ ನೀಡುತ್ತಾರೆ ಎಂಬ ಬಗ್ಗೆ ಹೇಳುವುದಿಲ್ಲ” ಎಂದು ಹೇಳಿದರು.

ಸಾರ್ವಜನಿಕ ಆರೋಗ್ಯದ ಬಗ್ಗೆ ಕಾಳಜಿಯಿಲ್ಲದ ಸರ್ಕಾರವನ್ನು ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕು: ಜನಪರ ವೈದ್ಯ ಡಾ. ಅನಿಲ್ ಕುಮಾರ್ ಅವುಲಪ್ಪ

ಕಾರ್ಯಕ್ರಮದಲ್ಲಿ ‘ಜನಾರೋಗ್ಯ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮಾತನಾಡಿದ ಖ್ಯಾತ ಜನಪರ ವೈದ್ಯರಾದ ಡಾ. ಅನಿಲ್ ಕುಮಾರ್ ಅವುಲಪ್ಪ, ಸ್ವಾತಂತ್ಯ್ರ ಬಂದು 78 ವರ್ಷಗಳಾದರೂ ಸಹಜ ಪ್ರಕ್ರಿಯೆಯಾದ ಗರ್ಭದಾರಣೆಯ ಸಮಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

“ಸ್ವಾತಂತ್ರ ನಂತರ ಕೂಡಾ ಕಾಯಿಲೆಗೆ ಬಲಿಯಾಗುವುದು ಹೆಚ್ಚಾಗಿದೆ. 70 ದಶಕಗಳ ಹೊತ್ತಿಗೆ ಸಾಂಕ್ರಮಿಕ ಕಾಯಿಲೆಗೆ ಬಲಿಯಾಗುತ್ತಿದ್ದರೆ, 90ರ ನಂತರ ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾದರು. ಆದರೆ ಈಗ ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾಗುತ್ತಿದ್ದೇವೆ. ಬ್ರಿಟೀಷರ ಕಾಲದಿಂದಲೂ ಟಿಬಿ ಮುಕ್ತ ಎಂದು ಹೇಳುವ ನಾವು ಈಗಲೂ ಅದನ್ನೆ ಹೇಳುತ್ತಲೆ ಇದ್ದೇವೆ” ಎಂದು ಹೇಳಿದರು.

“ಇಂಡಿಯನ್ ಪಬ್ಲಿಕ್ ಹೆಲ್ತ್‌ ಸ್ಟಾಂಡರ್ಡ್‌ ಪ್ರಕಾರ ಆರೋಗ್ಯಕ್ಕೆ ಬಜೆಟ್‌ನ 8% ಮೀಸಲಿಡಬೇಕಿದೆ. ಆದರೆ ನಮ್ಮ ಸರ್ಕಾರ ಕೇವಲ 4% ಅಷ್ಟೆ ಇದೆ. ರಾಜ್ಯದ ಜಿಡಿಪಿಯಲ್ಲಿ 2.5%ರಷ್ಟು ಆರೋಗ್ಯಕ್ಕೆ ಖರ್ಚು ಮಾಡಬೇಕು ಎಂದು ಅದೇ ನಿಯಮ ಹೇಳುತ್ತದೆ. ಆದರೆ ರಾಜ್ಯ ಸರ್ಕಾರ ಯಾವತ್ತೂ ಕೂಡಾ 0.6% ಕ್ಕಿ ಹೆಚ್ಚು ಖರ್ಚು ಮಾಡಿಲ್ಲ. ಕೇಂದ್ರೆ ಸರ್ಕಾರ ತನ್ನ ಭಾರತದ ಜಿಡಿಪಿಯಲ್ಲಿ 1.97% ಮಾತ್ರ ಖರ್ಚು ಮಾಡುತ್ತಿದೆ” ಎಂದು ಅವರು ಹೇಳಿದರು. ಅದಾನಿ ವಶದಲ್ಲಿರುವ

“ಮೂಲಭೂತವಾಗಿ ಜನರ ಆರೋಗ್ಯಕ್ಕಾಗಿ ವೈದ್ಯಕೀಯ ಸಂಸ್ಥೆಗಳು ಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಗುಲ್ಬರ್ಗಾ ವಿಭಾಗಗಳಿವೆ. 2022ರ ವರೆಗೆ ರಾಜ್ಯದ ಗುಲ್ಬರ್ಗಾ ಹೊರತು ಪಡಿಸಿ ರಾಜ್ಯದ ಇತರ ಕಡೆಗಳಲ್ಲಿ ಹೆಚ್ಚೆ ಸಂಸ್ಥೆಗಳು ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಆರೋಗ್ಯ ಕೇಂದ್ರಗಳು ಹೆಚ್ಚಿದ್ದರೂ, ಸಮುದಾಯ ಕೇಂದ್ರಗಳು ರಾಜ್ಯದಾದ್ಯಂತ ಕಡಿಮೆಯಿವೆ. ಅದಾಗ್ಯೂ, ಈ ಎಲ್ಲಾ ಸಂಸ್ಥೆಗಳಿಗೆ ಬೇಕಾದ ಮಾನವ ಸಂಪನ್ಮೂಲಗಳು ಕಡಿಮೆಯಿದೆ.” ಎಂದು ಅವರು ಹೇಳಿದರು.

“ಹುದ್ದೆಗಳು ಖಾಲಿಯಿದ್ದರೂ ಅದಕ್ಕೆ ಸರ್ಕಾರ ನೇಮಿಸುತ್ತಿಲ್ಲ. ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಬಜೆಟ್‌ನಲ್ಲಿ ಯಾವುದೇ ರೀತಿಯ ಘೋಷಣೆಗಳನ್ನು ಮಾಡಿಲ್ಲ. ಸಾರ್ವಜನಿಕ ವೈದ್ಯಕೀಯ ಸಂಸ್ಥೆಗಳ ಹುದ್ದೆಗಳನ್ನು ಭರ್ತಿ ಮಾಡಲು ಬೇಕಾಗುವ ಅನುದಾನ ಘೋಷಿಸದ ಯಾವುದೇ ಸರ್ಕಾರ ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...