Homeಕರ್ನಾಟಕಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು...

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

- Advertisement -
- Advertisement -

ಮಂಗಳೂರಿನಲ್ಲಿ ದೊಡ್ಡ ದೊಡ್ಡ ಕೈಗಾಗರಿಕೆಗಳು ಇವೆ. ಆದರೆ ಅಲ್ಲಿ ವರ್ಷದಿಂದ ವರ್ಷಕ್ಕೆ ಉದ್ಯೋಗಗಳು ಇಳಿಯುತ್ತಿವೆ. ಕೈಗಾರಿಗಕೆಗಳು, ಬಂದರು ಮತ್ತು ವಿಮಾನ ನಿಲ್ದಾಣಗಳು ಖಾಸಗೀಕರಕ್ಕೆ ಒಳಗಾಗಿದೆ. ಮಂಗಳೂರು ವಿಮಾನ ನಿಲ್ದಾಣ ಅದಾನಿ ವಶದಲ್ಲಿದೆ, ಅದರ ಬಗ್ಗೆ ನಮ್ಮ ಯುವಜನರು ಮಾತನಾಡಬೇಕಿತ್ತು. ಆದರೆ ಭಾವನಾತ್ಮಕವಾಗಿ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡಲಾಗುತ್ತಿದೆ ಎಂದು ಹೋರಾಟಗಾರ ಮುನೀರ್ ಕಾಟಿಪಳ್ಳ ಗುರುವಾರ ಹೇಳಿದರು. ಅದಾನಿ ವಶದಲ್ಲಿರುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಗುರುವಾರ ‘ಉದ್ಯೋಗ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮಾತನಾಡುತ್ತಿದ್ದರು.

“ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುವುದು ಬಿಟ್ಟು ಉದ್ಯೋಗದ ಪ್ರಮಾಣವನ್ನು ಕಡಿಮೆ ಮಾಡಲಾಗುತ್ತಿದೆ. ಇರುವ 80% ಉದ್ಯೋಗಗಳು ಕೂಡಾ ಗುತ್ತಿಗೆ ಆಧಾರದ ಉದ್ಯೋಗಗಳಾಗಿದ್ದು, ಜೊತೆಗೆ ಸ್ಥಳೀಯರಿಗೆ ಉದ್ಯೊಗ ನೀಡುತ್ತಿಲ್ಲ. ಕೈಗಾರಿಕೆಗಳಲ್ಲಿ ಯುನಿಯನ್‌ಗಳ ಶಕ್ತಿ ಕೂಡಾ ಕಡಿಮೆ ಮಾಡಲಾಗಿದೆ. ಹೊಸ ಉದ್ಯೋಗಗಳಾದ ಸ್ವಿಗ್ಗಿ, ಜೊಮೆಟೊ ರೀತಿಯ ಉದ್ಯೋಗಗಳು ಸೃಷ್ಟಿಯಾದರೂ ವೇತನ ತೀರಾ ಕಡಿಮೆ ನೀಡಲಾಗುತ್ತಿದೆ” ಎಂದು ಅವರು ಹೇಳಿದರು.

ದೊಡ್ಡ ಕಂಪೆನಿಗಳು ಮಾಡುವ ಚಿಲ್ಲರೆ ವ್ಯಾಪಾರದಿಂದಾಗಿ ಸ್ವಯಂ ಉದ್ಯೋಗಗಳು ಇಲ್ಲಾದಾಗಿದೆ. ಕಾರ್ಮಿಕ ಸಂಘಗಳು ಕಟ್ಟಲು ಅವಕಾಶವಿಲ್ಲ. ಯುವಜನರ ಇಡೀ ಜೀವನ ಅಭದ್ರತೆಯಲ್ಲಿ ಕಳಯುವಂತೆ ಆಗಿದೆ ಎಂದು ಅವರು ಹೇಳಿದರು.

“ದೊಡ್ಡ ಕಂಪೆನಿಗಳಲ್ಲಿ ಉದ್ಯೋಗ ಎಂಬ ಕಾರಣಕ್ಕೆ ಯುವಜನರಿಗೆ ಮದುವೆಯಾಗುತ್ತಿದೆ ಎಂಬ ಲಾಭವೊಂದನ್ನು ಬಿಟ್ಟು ಬೇರೇನೂ ಆಗುತ್ತಿಲ್ಲ. ಆದರೆ ಅವರ ವೇತನಗಳು 15 ಸಾವಿರ ಕೂಡಾ ಇರುವುದಿಲ್ಲ. ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ಕೆಲಸ ಮಾಡುವ ಯುವಜನರು ಅಲ್ಲಿ ಕೆಲಸ ಮಾಡಿ ಹೊರಗಡೆ ಕೂಡಾ ಹತ್ತು ಗಂಟೆಯ ವರೆಗೆ ಕೆಲಸ ಮಡುತ್ತಿದ್ದಾರೆ. ಆದರೆ, ಅವರ ಆರೋಗ್ಯದ ಬಗ್ಗೆ ಯಾರು ಹೊಣೆ?” ಎಂದು ಮುನೀರ್ ಕಾಟಿಪಳ್ಳ ಅವರು ಕೇಳಿದರು.

“ಭೂಸ್ವಾಧಿನ ಮಾಡುವಾಗ ಎಸ್‌ಇಝೆಡ್ ಪರವಾಗಿ ಇದ್ದ ಬಜರಂಗದಳ, ಭಾವನಾತ್ಮಕ ವಿಚಾರದಲ್ಲಿ ಮಾತ್ರ ಪ್ರತಿಭಟನೆ ಮಾಡುತ್ತಿದೆ. ಭಾವನಾತ್ಮಕ ವಿಚಾರವಾಗಿ ಪ್ರತಿಭಟನೆ ಮಡುವವರು ಉದ್ಯೊಗದ ಬಗ್ಗೆ ಪ್ರತಿಭಟನೆ ಮಾಡುತ್ತಿಲ್ಲ. ಧರ್ಮ ಎಂಬ ಅಫೀಮನ್ನು ನೀಡಲಾಗಿದೆ. ಉದ್ಯೋಗದ ಬಗ್ಗೆ ಮಾತಾನಾಡದ ಸೂಲಿಬೆಲೆ ಮುಸ್ಲಿಮರ ಹೆಣ್ಣುಗಳನ್ನು ಮದುವೆ ಆಗಿ ಎಂದು ದ್ವೆಷ ಭಾಷಣ ಮಾಡುತ್ತಿದ್ದಾರೆ” ಎಂದು ಹೇಳಿದರು.

“ವಿದೇಶಗಳಲ್ಲಿ ಉದ್ಯೋಗ ನಷ್ಟ ಹೊಂದಿದ ಯುವಕರಿಗೆ ಮರು ಜೀವನ ಕಟ್ಟಿಕೊಳ್ಳಲು ಸರ್ಕಾರ ನೆರವಾಗುತ್ತಿಲ್ಲ. ಕೇರಳದಲ್ಲಿ ಇಂತಹ ಯುವಕರಿಗೆ ಸರ್ಕಾರ ನೆರವು ನೀಡುತ್ತಿದೆ. ಬಜೆಟ್‌ನಲ್ಲಿ ಖಾಸಗಿ ಕಂಪೆನಿಗೆ ಸಾವಿರಾರು ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರ, ಅವರು ಎಷ್ಟು ಖಾಯಂ ಉದ್ಯೋಗ ಎಷ್ಟು ಕೊಡುತ್ತಿದ್ದಾರೆ? ಎಷ್ಟು ವೇತನ ನೀಡುತ್ತಾರೆ ಎಂಬ ಬಗ್ಗೆ ಹೇಳುವುದಿಲ್ಲ” ಎಂದು ಹೇಳಿದರು.

ಸಾರ್ವಜನಿಕ ಆರೋಗ್ಯದ ಬಗ್ಗೆ ಕಾಳಜಿಯಿಲ್ಲದ ಸರ್ಕಾರವನ್ನು ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕು: ಜನಪರ ವೈದ್ಯ ಡಾ. ಅನಿಲ್ ಕುಮಾರ್ ಅವುಲಪ್ಪ

ಕಾರ್ಯಕ್ರಮದಲ್ಲಿ ‘ಜನಾರೋಗ್ಯ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮಾತನಾಡಿದ ಖ್ಯಾತ ಜನಪರ ವೈದ್ಯರಾದ ಡಾ. ಅನಿಲ್ ಕುಮಾರ್ ಅವುಲಪ್ಪ, ಸ್ವಾತಂತ್ಯ್ರ ಬಂದು 78 ವರ್ಷಗಳಾದರೂ ಸಹಜ ಪ್ರಕ್ರಿಯೆಯಾದ ಗರ್ಭದಾರಣೆಯ ಸಮಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

“ಸ್ವಾತಂತ್ರ ನಂತರ ಕೂಡಾ ಕಾಯಿಲೆಗೆ ಬಲಿಯಾಗುವುದು ಹೆಚ್ಚಾಗಿದೆ. 70 ದಶಕಗಳ ಹೊತ್ತಿಗೆ ಸಾಂಕ್ರಮಿಕ ಕಾಯಿಲೆಗೆ ಬಲಿಯಾಗುತ್ತಿದ್ದರೆ, 90ರ ನಂತರ ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾದರು. ಆದರೆ ಈಗ ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾಗುತ್ತಿದ್ದೇವೆ. ಬ್ರಿಟೀಷರ ಕಾಲದಿಂದಲೂ ಟಿಬಿ ಮುಕ್ತ ಎಂದು ಹೇಳುವ ನಾವು ಈಗಲೂ ಅದನ್ನೆ ಹೇಳುತ್ತಲೆ ಇದ್ದೇವೆ” ಎಂದು ಹೇಳಿದರು.

“ಇಂಡಿಯನ್ ಪಬ್ಲಿಕ್ ಹೆಲ್ತ್‌ ಸ್ಟಾಂಡರ್ಡ್‌ ಪ್ರಕಾರ ಆರೋಗ್ಯಕ್ಕೆ ಬಜೆಟ್‌ನ 8% ಮೀಸಲಿಡಬೇಕಿದೆ. ಆದರೆ ನಮ್ಮ ಸರ್ಕಾರ ಕೇವಲ 4% ಅಷ್ಟೆ ಇದೆ. ರಾಜ್ಯದ ಜಿಡಿಪಿಯಲ್ಲಿ 2.5%ರಷ್ಟು ಆರೋಗ್ಯಕ್ಕೆ ಖರ್ಚು ಮಾಡಬೇಕು ಎಂದು ಅದೇ ನಿಯಮ ಹೇಳುತ್ತದೆ. ಆದರೆ ರಾಜ್ಯ ಸರ್ಕಾರ ಯಾವತ್ತೂ ಕೂಡಾ 0.6% ಕ್ಕಿ ಹೆಚ್ಚು ಖರ್ಚು ಮಾಡಿಲ್ಲ. ಕೇಂದ್ರೆ ಸರ್ಕಾರ ತನ್ನ ಭಾರತದ ಜಿಡಿಪಿಯಲ್ಲಿ 1.97% ಮಾತ್ರ ಖರ್ಚು ಮಾಡುತ್ತಿದೆ” ಎಂದು ಅವರು ಹೇಳಿದರು. ಅದಾನಿ ವಶದಲ್ಲಿರುವ

“ಮೂಲಭೂತವಾಗಿ ಜನರ ಆರೋಗ್ಯಕ್ಕಾಗಿ ವೈದ್ಯಕೀಯ ಸಂಸ್ಥೆಗಳು ಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಗುಲ್ಬರ್ಗಾ ವಿಭಾಗಗಳಿವೆ. 2022ರ ವರೆಗೆ ರಾಜ್ಯದ ಗುಲ್ಬರ್ಗಾ ಹೊರತು ಪಡಿಸಿ ರಾಜ್ಯದ ಇತರ ಕಡೆಗಳಲ್ಲಿ ಹೆಚ್ಚೆ ಸಂಸ್ಥೆಗಳು ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಆರೋಗ್ಯ ಕೇಂದ್ರಗಳು ಹೆಚ್ಚಿದ್ದರೂ, ಸಮುದಾಯ ಕೇಂದ್ರಗಳು ರಾಜ್ಯದಾದ್ಯಂತ ಕಡಿಮೆಯಿವೆ. ಅದಾಗ್ಯೂ, ಈ ಎಲ್ಲಾ ಸಂಸ್ಥೆಗಳಿಗೆ ಬೇಕಾದ ಮಾನವ ಸಂಪನ್ಮೂಲಗಳು ಕಡಿಮೆಯಿದೆ.” ಎಂದು ಅವರು ಹೇಳಿದರು.

“ಹುದ್ದೆಗಳು ಖಾಲಿಯಿದ್ದರೂ ಅದಕ್ಕೆ ಸರ್ಕಾರ ನೇಮಿಸುತ್ತಿಲ್ಲ. ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಬಜೆಟ್‌ನಲ್ಲಿ ಯಾವುದೇ ರೀತಿಯ ಘೋಷಣೆಗಳನ್ನು ಮಾಡಿಲ್ಲ. ಸಾರ್ವಜನಿಕ ವೈದ್ಯಕೀಯ ಸಂಸ್ಥೆಗಳ ಹುದ್ದೆಗಳನ್ನು ಭರ್ತಿ ಮಾಡಲು ಬೇಕಾಗುವ ಅನುದಾನ ಘೋಷಿಸದ ಯಾವುದೇ ಸರ್ಕಾರ ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...