Homeಕರ್ನಾಟಕಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು...

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

- Advertisement -
- Advertisement -

ಮಂಗಳೂರಿನಲ್ಲಿ ದೊಡ್ಡ ದೊಡ್ಡ ಕೈಗಾಗರಿಕೆಗಳು ಇವೆ. ಆದರೆ ಅಲ್ಲಿ ವರ್ಷದಿಂದ ವರ್ಷಕ್ಕೆ ಉದ್ಯೋಗಗಳು ಇಳಿಯುತ್ತಿವೆ. ಕೈಗಾರಿಗಕೆಗಳು, ಬಂದರು ಮತ್ತು ವಿಮಾನ ನಿಲ್ದಾಣಗಳು ಖಾಸಗೀಕರಕ್ಕೆ ಒಳಗಾಗಿದೆ. ಮಂಗಳೂರು ವಿಮಾನ ನಿಲ್ದಾಣ ಅದಾನಿ ವಶದಲ್ಲಿದೆ, ಅದರ ಬಗ್ಗೆ ನಮ್ಮ ಯುವಜನರು ಮಾತನಾಡಬೇಕಿತ್ತು. ಆದರೆ ಭಾವನಾತ್ಮಕವಾಗಿ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡಲಾಗುತ್ತಿದೆ ಎಂದು ಹೋರಾಟಗಾರ ಮುನೀರ್ ಕಾಟಿಪಳ್ಳ ಗುರುವಾರ ಹೇಳಿದರು. ಅದಾನಿ ವಶದಲ್ಲಿರುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಗುರುವಾರ ‘ಉದ್ಯೋಗ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮಾತನಾಡುತ್ತಿದ್ದರು.

“ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುವುದು ಬಿಟ್ಟು ಉದ್ಯೋಗದ ಪ್ರಮಾಣವನ್ನು ಕಡಿಮೆ ಮಾಡಲಾಗುತ್ತಿದೆ. ಇರುವ 80% ಉದ್ಯೋಗಗಳು ಕೂಡಾ ಗುತ್ತಿಗೆ ಆಧಾರದ ಉದ್ಯೋಗಗಳಾಗಿದ್ದು, ಜೊತೆಗೆ ಸ್ಥಳೀಯರಿಗೆ ಉದ್ಯೊಗ ನೀಡುತ್ತಿಲ್ಲ. ಕೈಗಾರಿಕೆಗಳಲ್ಲಿ ಯುನಿಯನ್‌ಗಳ ಶಕ್ತಿ ಕೂಡಾ ಕಡಿಮೆ ಮಾಡಲಾಗಿದೆ. ಹೊಸ ಉದ್ಯೋಗಗಳಾದ ಸ್ವಿಗ್ಗಿ, ಜೊಮೆಟೊ ರೀತಿಯ ಉದ್ಯೋಗಗಳು ಸೃಷ್ಟಿಯಾದರೂ ವೇತನ ತೀರಾ ಕಡಿಮೆ ನೀಡಲಾಗುತ್ತಿದೆ” ಎಂದು ಅವರು ಹೇಳಿದರು.

ದೊಡ್ಡ ಕಂಪೆನಿಗಳು ಮಾಡುವ ಚಿಲ್ಲರೆ ವ್ಯಾಪಾರದಿಂದಾಗಿ ಸ್ವಯಂ ಉದ್ಯೋಗಗಳು ಇಲ್ಲಾದಾಗಿದೆ. ಕಾರ್ಮಿಕ ಸಂಘಗಳು ಕಟ್ಟಲು ಅವಕಾಶವಿಲ್ಲ. ಯುವಜನರ ಇಡೀ ಜೀವನ ಅಭದ್ರತೆಯಲ್ಲಿ ಕಳಯುವಂತೆ ಆಗಿದೆ ಎಂದು ಅವರು ಹೇಳಿದರು.

“ದೊಡ್ಡ ಕಂಪೆನಿಗಳಲ್ಲಿ ಉದ್ಯೋಗ ಎಂಬ ಕಾರಣಕ್ಕೆ ಯುವಜನರಿಗೆ ಮದುವೆಯಾಗುತ್ತಿದೆ ಎಂಬ ಲಾಭವೊಂದನ್ನು ಬಿಟ್ಟು ಬೇರೇನೂ ಆಗುತ್ತಿಲ್ಲ. ಆದರೆ ಅವರ ವೇತನಗಳು 15 ಸಾವಿರ ಕೂಡಾ ಇರುವುದಿಲ್ಲ. ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ಕೆಲಸ ಮಾಡುವ ಯುವಜನರು ಅಲ್ಲಿ ಕೆಲಸ ಮಾಡಿ ಹೊರಗಡೆ ಕೂಡಾ ಹತ್ತು ಗಂಟೆಯ ವರೆಗೆ ಕೆಲಸ ಮಡುತ್ತಿದ್ದಾರೆ. ಆದರೆ, ಅವರ ಆರೋಗ್ಯದ ಬಗ್ಗೆ ಯಾರು ಹೊಣೆ?” ಎಂದು ಮುನೀರ್ ಕಾಟಿಪಳ್ಳ ಅವರು ಕೇಳಿದರು.

“ಭೂಸ್ವಾಧಿನ ಮಾಡುವಾಗ ಎಸ್‌ಇಝೆಡ್ ಪರವಾಗಿ ಇದ್ದ ಬಜರಂಗದಳ, ಭಾವನಾತ್ಮಕ ವಿಚಾರದಲ್ಲಿ ಮಾತ್ರ ಪ್ರತಿಭಟನೆ ಮಾಡುತ್ತಿದೆ. ಭಾವನಾತ್ಮಕ ವಿಚಾರವಾಗಿ ಪ್ರತಿಭಟನೆ ಮಡುವವರು ಉದ್ಯೊಗದ ಬಗ್ಗೆ ಪ್ರತಿಭಟನೆ ಮಾಡುತ್ತಿಲ್ಲ. ಧರ್ಮ ಎಂಬ ಅಫೀಮನ್ನು ನೀಡಲಾಗಿದೆ. ಉದ್ಯೋಗದ ಬಗ್ಗೆ ಮಾತಾನಾಡದ ಸೂಲಿಬೆಲೆ ಮುಸ್ಲಿಮರ ಹೆಣ್ಣುಗಳನ್ನು ಮದುವೆ ಆಗಿ ಎಂದು ದ್ವೆಷ ಭಾಷಣ ಮಾಡುತ್ತಿದ್ದಾರೆ” ಎಂದು ಹೇಳಿದರು.

“ವಿದೇಶಗಳಲ್ಲಿ ಉದ್ಯೋಗ ನಷ್ಟ ಹೊಂದಿದ ಯುವಕರಿಗೆ ಮರು ಜೀವನ ಕಟ್ಟಿಕೊಳ್ಳಲು ಸರ್ಕಾರ ನೆರವಾಗುತ್ತಿಲ್ಲ. ಕೇರಳದಲ್ಲಿ ಇಂತಹ ಯುವಕರಿಗೆ ಸರ್ಕಾರ ನೆರವು ನೀಡುತ್ತಿದೆ. ಬಜೆಟ್‌ನಲ್ಲಿ ಖಾಸಗಿ ಕಂಪೆನಿಗೆ ಸಾವಿರಾರು ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರ, ಅವರು ಎಷ್ಟು ಖಾಯಂ ಉದ್ಯೋಗ ಎಷ್ಟು ಕೊಡುತ್ತಿದ್ದಾರೆ? ಎಷ್ಟು ವೇತನ ನೀಡುತ್ತಾರೆ ಎಂಬ ಬಗ್ಗೆ ಹೇಳುವುದಿಲ್ಲ” ಎಂದು ಹೇಳಿದರು.

ಸಾರ್ವಜನಿಕ ಆರೋಗ್ಯದ ಬಗ್ಗೆ ಕಾಳಜಿಯಿಲ್ಲದ ಸರ್ಕಾರವನ್ನು ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕು: ಜನಪರ ವೈದ್ಯ ಡಾ. ಅನಿಲ್ ಕುಮಾರ್ ಅವುಲಪ್ಪ

ಕಾರ್ಯಕ್ರಮದಲ್ಲಿ ‘ಜನಾರೋಗ್ಯ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮಾತನಾಡಿದ ಖ್ಯಾತ ಜನಪರ ವೈದ್ಯರಾದ ಡಾ. ಅನಿಲ್ ಕುಮಾರ್ ಅವುಲಪ್ಪ, ಸ್ವಾತಂತ್ಯ್ರ ಬಂದು 78 ವರ್ಷಗಳಾದರೂ ಸಹಜ ಪ್ರಕ್ರಿಯೆಯಾದ ಗರ್ಭದಾರಣೆಯ ಸಮಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

“ಸ್ವಾತಂತ್ರ ನಂತರ ಕೂಡಾ ಕಾಯಿಲೆಗೆ ಬಲಿಯಾಗುವುದು ಹೆಚ್ಚಾಗಿದೆ. 70 ದಶಕಗಳ ಹೊತ್ತಿಗೆ ಸಾಂಕ್ರಮಿಕ ಕಾಯಿಲೆಗೆ ಬಲಿಯಾಗುತ್ತಿದ್ದರೆ, 90ರ ನಂತರ ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾದರು. ಆದರೆ ಈಗ ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾಗುತ್ತಿದ್ದೇವೆ. ಬ್ರಿಟೀಷರ ಕಾಲದಿಂದಲೂ ಟಿಬಿ ಮುಕ್ತ ಎಂದು ಹೇಳುವ ನಾವು ಈಗಲೂ ಅದನ್ನೆ ಹೇಳುತ್ತಲೆ ಇದ್ದೇವೆ” ಎಂದು ಹೇಳಿದರು.

“ಇಂಡಿಯನ್ ಪಬ್ಲಿಕ್ ಹೆಲ್ತ್‌ ಸ್ಟಾಂಡರ್ಡ್‌ ಪ್ರಕಾರ ಆರೋಗ್ಯಕ್ಕೆ ಬಜೆಟ್‌ನ 8% ಮೀಸಲಿಡಬೇಕಿದೆ. ಆದರೆ ನಮ್ಮ ಸರ್ಕಾರ ಕೇವಲ 4% ಅಷ್ಟೆ ಇದೆ. ರಾಜ್ಯದ ಜಿಡಿಪಿಯಲ್ಲಿ 2.5%ರಷ್ಟು ಆರೋಗ್ಯಕ್ಕೆ ಖರ್ಚು ಮಾಡಬೇಕು ಎಂದು ಅದೇ ನಿಯಮ ಹೇಳುತ್ತದೆ. ಆದರೆ ರಾಜ್ಯ ಸರ್ಕಾರ ಯಾವತ್ತೂ ಕೂಡಾ 0.6% ಕ್ಕಿ ಹೆಚ್ಚು ಖರ್ಚು ಮಾಡಿಲ್ಲ. ಕೇಂದ್ರೆ ಸರ್ಕಾರ ತನ್ನ ಭಾರತದ ಜಿಡಿಪಿಯಲ್ಲಿ 1.97% ಮಾತ್ರ ಖರ್ಚು ಮಾಡುತ್ತಿದೆ” ಎಂದು ಅವರು ಹೇಳಿದರು. ಅದಾನಿ ವಶದಲ್ಲಿರುವ

“ಮೂಲಭೂತವಾಗಿ ಜನರ ಆರೋಗ್ಯಕ್ಕಾಗಿ ವೈದ್ಯಕೀಯ ಸಂಸ್ಥೆಗಳು ಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಗುಲ್ಬರ್ಗಾ ವಿಭಾಗಗಳಿವೆ. 2022ರ ವರೆಗೆ ರಾಜ್ಯದ ಗುಲ್ಬರ್ಗಾ ಹೊರತು ಪಡಿಸಿ ರಾಜ್ಯದ ಇತರ ಕಡೆಗಳಲ್ಲಿ ಹೆಚ್ಚೆ ಸಂಸ್ಥೆಗಳು ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಆರೋಗ್ಯ ಕೇಂದ್ರಗಳು ಹೆಚ್ಚಿದ್ದರೂ, ಸಮುದಾಯ ಕೇಂದ್ರಗಳು ರಾಜ್ಯದಾದ್ಯಂತ ಕಡಿಮೆಯಿವೆ. ಅದಾಗ್ಯೂ, ಈ ಎಲ್ಲಾ ಸಂಸ್ಥೆಗಳಿಗೆ ಬೇಕಾದ ಮಾನವ ಸಂಪನ್ಮೂಲಗಳು ಕಡಿಮೆಯಿದೆ.” ಎಂದು ಅವರು ಹೇಳಿದರು.

“ಹುದ್ದೆಗಳು ಖಾಲಿಯಿದ್ದರೂ ಅದಕ್ಕೆ ಸರ್ಕಾರ ನೇಮಿಸುತ್ತಿಲ್ಲ. ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಬಜೆಟ್‌ನಲ್ಲಿ ಯಾವುದೇ ರೀತಿಯ ಘೋಷಣೆಗಳನ್ನು ಮಾಡಿಲ್ಲ. ಸಾರ್ವಜನಿಕ ವೈದ್ಯಕೀಯ ಸಂಸ್ಥೆಗಳ ಹುದ್ದೆಗಳನ್ನು ಭರ್ತಿ ಮಾಡಲು ಬೇಕಾಗುವ ಅನುದಾನ ಘೋಷಿಸದ ಯಾವುದೇ ಸರ್ಕಾರ ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...