Homeಮುಖಪುಟಬಿಜೆಪಿ ಸಂಸದನ ಅಸಂಸದೀಯ ಭಾಷೆ ಖಂಡಿಸಬೇಕು, ಸೂಕ್ತ ಭದ್ರತೆ ನೀಡಬೇಕು: ಪ್ರಧಾನಿ ಮೋದಿಗೆ ಡ್ಯಾನಿಶ್ ಅಲಿ...

ಬಿಜೆಪಿ ಸಂಸದನ ಅಸಂಸದೀಯ ಭಾಷೆ ಖಂಡಿಸಬೇಕು, ಸೂಕ್ತ ಭದ್ರತೆ ನೀಡಬೇಕು: ಪ್ರಧಾನಿ ಮೋದಿಗೆ ಡ್ಯಾನಿಶ್ ಅಲಿ ಪತ್ರ

- Advertisement -
- Advertisement -

ಬಿಎಸ್‌ಪಿ ನಾಯಕ ಕುನ್ವರ್ ಡ್ಯಾನಿಶ್ ಅಲಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸಂಸತ್ತಿನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ಅಸಂಸದೀಯ ಮತ್ತು ನಿಂದನೀಯ ಭಾಷೆಯನ್ನು ಸಾರ್ವಜನಿಕವಾಗಿ ಖಂಡಿಸುವಂತೆ ಒತ್ತಾಯಿಸಿದ್ದಾರೆ.

ಸೆಪ್ಟೆಂಬರ್ 21ರಂದು ಲೋಕಸಭೆಯಲ್ಲಿ ಭಾರತದ ಚಂದ್ರಯಾನ-3 ಚಂದ್ರಯಾನ ಕಾರ್ಯಾಚರಣೆಯ ಯಶಸ್ಸಿನ ಚರ್ಚೆಯ ಸಂದರ್ಭದಲ್ಲಿ, ಬಿಧುರಿ ಅವರು ಅಲಿಯವರನ್ನು “ಮುಲ್ಲಾ ಭಯೋತ್ಪಾದಕ”, “ಪಿಂಪ್” ಮತ್ತು “ಕತ್ವಾ” ಎಂದು ನಿಂದಿಸಿದ್ದಾರೆ, ಇದು ಸುನ್ನತಿ ಪಡೆದ ಮುಸ್ಲಿಮರಿಗೆ ಬಳಸಲ್ಪಡುತ್ತದೆ.

ಶುಕ್ರವಾರ, ಅಲಿ ಅವರು ಮೋದಿಯವರಿಗೆ ಬರೆದ ಪತ್ರದಲ್ಲಿ ಬಿಧುರಿಯವರ ಹೇಳಿಕೆಗಳು ”ಪ್ರಜಾಪ್ರಭುತ್ವದ ಮೂಲಭೂತತೆ” ಮೇಲಿನ ದಾಳಿಯಾಗಿದೆ ಮತ್ತು ಸದನದ ನಾಯಕರಾಗಿ ಅದನ್ನು ಗಮನಿಸಬೇಕೆಂದು ಒತ್ತಾಯಿಸಿದರು.

”ಬಿಧುರಿಯ ನಡವಳಿಕೆಯನ್ನು ಖಂಡಿಸಬೇಕು ಮತ್ತು ಸದನದಲ್ಲಿ ಯಾರೂ ಅಂತಹ ವರ್ತನೆ ತೋರದಂತೆ ಅವರಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ನಾನು ವಿನಂತಿಸುತ್ತೇನೆ” ಎಂದು ಅಲಿ ಬರೆದಿದ್ದಾರೆ.

”ಅವರು ಮೌಖಿಕ ನನಗೆ ಬೆದರಿಕೆ ಹಾಕಿದ್ದಾರೆ ಮತ್ತು ಸಂಸತ್ತಿನ ಹೊರಗೆ ನನ್ನನ್ನು ಎದುರಿಸುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ ಹಾಗಾಗಿ ನನಗೆ ಹೆಚ್ಚಿನ ಭದ್ರತೆಯನ್ನು ನೀಡಬೇಕು” ಎಂದು ಅಲಿ ಅವರು ಪ್ರಧಾನಿ ಅವರನ್ನು ಕೋರಿದ್ದಾರೆ.

”ಬಿಧುರಿಯವರು ಸಂಸತ್ತಿನಲ್ಲೇ ಬೆದರಿಕೆಯೊಡ್ಡಿದ್ದಾರೆ ಮತ್ತು ನಂತರದ ವಿವಿಧ ಮೂಲಗಳಿಂದ ಬೆದರಿಕೆಗಳ ಸುರಿಮಳೆ ಬರುತ್ತಿವೆ. ಇದೆಲ್ಲಾ ಗಮನಿಸಿದರೆ, ನನ್ನ ಸುತ್ತಲಿನ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ” ಎಂದು ಬಿಎಸ್‌ಪಿ ನಾಯಕ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ‘ಮುಲ್ಲಾ ಭಯೋತ್ಪಾದಕ’: ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...