Homeಮುಖಪುಟಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

- Advertisement -
- Advertisement -

ಪತ್ರಿಕೋದ್ಯಮ, ಪುಸ್ತಕ, ನಾಟಕ ಮತ್ತು ಸಂಗೀತಕ್ಕೆ ಸಂಬಂಧಿಸಿದಂತೆ 2022ರ ಪುಲಿಟ್ಝರ್‌‌ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಖ್ಯಾತ ಫೋಟೋ ಜರ್ನಲಿಸ್ಟ್‌ ದಾನಿಶ್‌ ಸಿದ್ದಿಕಿ ಅವರಿಗೆ ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಭಾರತದ ಪರಿಸ್ಥಿತಿಯನ್ನು ತೆರೆದಿಟ್ಟ ಫೋಟೋ ಜರ್ನಲಿಸಂಗಾಗಿ ಭಾರತೀಯರಾದ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ತಾಲಿಬಾನ್‌ನ ಸಂಘರ್ಷದ ವೇಳೆ ಕೊಲ್ಲಲ್ಪಟ್ಟ ರಾಯಿಟರ್ಸ್ ಫೋಟೋ ಜರ್ನಲಿಸ್ಟ್‌ ದಾನಿಶ್ ಸಿದ್ದಿಕಿ ಅವರಿಗೆ ಪುಲಿಡ್ಜರ್‌ ಪ್ರಶಸ್ತಿ ನೀಡಲಾಗುತ್ತಿದೆ.

ಅಬಿದಿ ಅವರಿಗೆ ಮೂರನೇ ಬಾರಿಗೆ ಪುಲಿಡ್ಝರ್‌ ಸಂದಿದ್ದರೆ, ಈ ಹಿಂದೆ 2018ರಲ್ಲಿ ಸಿದ್ದಿಕಿ ಕೂಡ ಪ್ರಶಸ್ತಿ ಪಡೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಕ್ರೇನ್‌ನ ಪತ್ರಕರ್ತರನ್ನು 2022ರ ಪುಲಿಟ್ಜರ್‌‌ ಪ್ರಶಸ್ತಿಯಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್‌ ಮೇಲೆ ಆದ ದಾಳಿ, ಅಫಫಾನಿಸ್ತಾನದ ಬಿಕ್ಕಟ್ಟು ಮತ್ತು ಫ್ಲೋರಿಡಾದಲ್ಲಿ ಸರ್ಫ್‌ಸೈಡ್ ಕಾಂಡೋಮಿನಿಯಂ ಕುಸಿತದ ಕುರಿತ ವರದಿಗಳನ್ನು ತೀರ್ಪುಗಾರರು ಗುರುತಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ವಿಭಾಗದಲ್ಲಿ ಪ್ರಶಸ್ತಿ ಪಡೆದವರು

ಸಾರ್ವಜನಿಕ ಸೇವೆ: ಜನವರಿ 6, 2021ರಂದು ವಾಷಿಂಗ್ಟನ್ ಮೇಲಿನ ದಾಳಿಯ ಕುರಿತ ವರದಿಗಾಗಿ ವಾಷಿಂಗ್ಟನ್ ಪೋಸ್ಟ್‌ಗೆ ಪ್ರಶಸ್ತಿ.

ಬ್ರೇಕಿಂಗ್ ನ್ಯೂಸ್ ವರದಿ: ಫ್ಲೋರಿಡಾದಲ್ಲಿ ಸೀಸೈಡ್ ಅಪಾರ್ಟ್‌ಮೆಂಟ್ ಟವರ್‌ಗಳ ಕುಸಿತದ ವರದಿಗಾಗಿ ಮಿಯಾಮಿ ಹೆರಾಲ್ಡ್‌ನ ಸಿಬ್ಬಂದಿಗೆ ಪ್ರಶಸ್ತಿ.

ತನಿಖಾ ವರದಿ: ಟ್ಯಾಂಪಾ ಬೇ ಟೈಮ್ಸ್‌ನ ಕೋರಿ ಜಿ. ಜಾನ್ಸನ್, ರೆಬೆಕಾ ವೂಲಿಂಗ್‌ಟನ್ ಮತ್ತು ಎಲಿ ಮುರ್ರೆ ಅವರು ಫ್ಲೋರಿಡಾದ ಏಕೈಕ ಬ್ಯಾಟರಿ ಮರುಬಳಕೆ ಘಟಕದೊಳಗಿನ ವಿಷಕಾರಿ ಅಪಾಯಗಳನ್ನು ಬಹಿರಂಗಪಡಿಸಿದರು. ಈ ವರದಿಯು ಕಾರ್ಮಿಕರು ಮತ್ತು ಸುತ್ತಲಿನ ನಿವಾಸಿಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿತು.

ವಿವರಣಾತ್ಮಕ ವರದಿ: ವೆಬ್ ಸ್ಪೇಸ್ ಟೆಲಿಸ್ಕೋಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ವರದಿ ಮಾಡಿದ್ದಕ್ಕಾಗಿ ಕ್ವಾಂಟಾ ಮ್ಯಾಗಜೀನ್‌ನ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಗಿದೆ. ನಟಾಲಿ ವೋಲ್ಚೋವರ್ ಅವರನ್ನು ವಿಶೇಷವಾಗಿ ಗುರುತಿಸಲಾಗಿದೆ.

ಸ್ಥಳೀಯ ವರದಿ: ಬೆಟರ್ ಗವರ್ನಮೆಂಟ್ ಅಸೋಸಿಯೇಷನ್‌ನ ಮ್ಯಾಡಿಸನ್ ಹಾಪ್ಕಿನ್ಸ್ ಮತ್ತು ಚಿಕಾಗೋ ಟ್ರಿಬ್ಯೂನ್‌ನ ಸಿಸಿಲಿಯಾ ರೆಯೆಸ್ ಅವರು ಅಗ್ನಿಶಾಮಕ ಸುರಕ್ಷತೆಯ ಕುರಿತು ವರದಿ ಮಾಡಿದ್ದರು.

ರಾಷ್ಟ್ರೀಯ ವರದಿ: ಟ್ರಾಫಿಕ್ ಸ್ಟಾಪ್‌ಗಳ ಗೊಂದಲದ ಮಾದರಿಯ ಕುರಿತ ವರದಿಗಾಗಿ ದಿ ನ್ಯೂಯಾರ್ಕ್ ಟೈಮ್ಸ್‌ನ ಸಿಬ್ಬಂದಿಗೆ ಪ್ರಶಸ್ತಿ.

ಇದನ್ನೂ ಓದಿರಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಅಂತರಾಷ್ಟ್ರೀಯ ವರದಿ: ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಅಮೇರಿಕನ್ ಮಿಲಿಟರಿ ತೊಡಗಿಸಿಕೊಂಡಿರುವ ವೈಮಾನಿಕ ದಾಳಿಗಳ ಕುರಿತ ವರದಿಗಾಗಿ ನ್ಯೂಯಾರ್ಕ್ ಟೈಮ್ಸ್‌ ಸಿಬ್ಬಂದಿಗೆ ಪ್ರಶಸ್ತಿ.

ಫೀಚರ್‌ ಬರವಣಿಗೆ: ಕುಟುಂಬಗಳ ನಷ್ಟದ ಲೆಕ್ಕಾಚಾರದ ಚಿತ್ರಣಕ್ಕಾಗಿ ದಿ ಅಟ್ಲಾಂಟಿಕ್‌ನ ಜೆನ್ನಿಫರ್ ಸೀನಿಯರ್‌ಗೆ ಪ್ರಶಸ್ತಿ.

ಕಾಮೆಂಟರಿ ವಿಭಾಗದಲ್ಲಿ ಕಾನ್ಸಾಸ್ ಸಿಟಿ ಸ್ಟಾರ್‌ನ ಮೆಲಿಂಡಾ ಹೆನ್ನೆಬರ್ಗರ್, ವಿಮರ್ಶೆಯ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್‌ನ ಸಲಾಮಿಶಾ ಟಿಲೆಟ್, ಸಂಪಾದಕೀಯ ಬರವಣಿಗೆ ವಿಭಾಗದಲ್ಲಿ ಹೂಸ್ಟನ್ ಕ್ರಾನಿಕಲ್‌ನ ಲಿಸಾ ಫಾಲ್ಕೆನ್‌ಬರ್ಗ್, ಮೈಕೆಲ್ ಲಿಂಡೆನ್‌ಬರ್ಗರ್, ಜೋ ಹೋಲಿ ಮತ್ತು ಲೂಯಿಸ್ ಕರಾಸ್ಕೊಗೆ ನೀಡಲಾಗುತ್ತಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...