Homeಮುಖಪುಟಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

- Advertisement -
- Advertisement -

ಪತ್ರಿಕೋದ್ಯಮ, ಪುಸ್ತಕ, ನಾಟಕ ಮತ್ತು ಸಂಗೀತಕ್ಕೆ ಸಂಬಂಧಿಸಿದಂತೆ 2022ರ ಪುಲಿಟ್ಝರ್‌‌ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಖ್ಯಾತ ಫೋಟೋ ಜರ್ನಲಿಸ್ಟ್‌ ದಾನಿಶ್‌ ಸಿದ್ದಿಕಿ ಅವರಿಗೆ ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಭಾರತದ ಪರಿಸ್ಥಿತಿಯನ್ನು ತೆರೆದಿಟ್ಟ ಫೋಟೋ ಜರ್ನಲಿಸಂಗಾಗಿ ಭಾರತೀಯರಾದ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ತಾಲಿಬಾನ್‌ನ ಸಂಘರ್ಷದ ವೇಳೆ ಕೊಲ್ಲಲ್ಪಟ್ಟ ರಾಯಿಟರ್ಸ್ ಫೋಟೋ ಜರ್ನಲಿಸ್ಟ್‌ ದಾನಿಶ್ ಸಿದ್ದಿಕಿ ಅವರಿಗೆ ಪುಲಿಡ್ಜರ್‌ ಪ್ರಶಸ್ತಿ ನೀಡಲಾಗುತ್ತಿದೆ.

ಅಬಿದಿ ಅವರಿಗೆ ಮೂರನೇ ಬಾರಿಗೆ ಪುಲಿಡ್ಝರ್‌ ಸಂದಿದ್ದರೆ, ಈ ಹಿಂದೆ 2018ರಲ್ಲಿ ಸಿದ್ದಿಕಿ ಕೂಡ ಪ್ರಶಸ್ತಿ ಪಡೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಕ್ರೇನ್‌ನ ಪತ್ರಕರ್ತರನ್ನು 2022ರ ಪುಲಿಟ್ಜರ್‌‌ ಪ್ರಶಸ್ತಿಯಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್‌ ಮೇಲೆ ಆದ ದಾಳಿ, ಅಫಫಾನಿಸ್ತಾನದ ಬಿಕ್ಕಟ್ಟು ಮತ್ತು ಫ್ಲೋರಿಡಾದಲ್ಲಿ ಸರ್ಫ್‌ಸೈಡ್ ಕಾಂಡೋಮಿನಿಯಂ ಕುಸಿತದ ಕುರಿತ ವರದಿಗಳನ್ನು ತೀರ್ಪುಗಾರರು ಗುರುತಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ವಿಭಾಗದಲ್ಲಿ ಪ್ರಶಸ್ತಿ ಪಡೆದವರು

ಸಾರ್ವಜನಿಕ ಸೇವೆ: ಜನವರಿ 6, 2021ರಂದು ವಾಷಿಂಗ್ಟನ್ ಮೇಲಿನ ದಾಳಿಯ ಕುರಿತ ವರದಿಗಾಗಿ ವಾಷಿಂಗ್ಟನ್ ಪೋಸ್ಟ್‌ಗೆ ಪ್ರಶಸ್ತಿ.

ಬ್ರೇಕಿಂಗ್ ನ್ಯೂಸ್ ವರದಿ: ಫ್ಲೋರಿಡಾದಲ್ಲಿ ಸೀಸೈಡ್ ಅಪಾರ್ಟ್‌ಮೆಂಟ್ ಟವರ್‌ಗಳ ಕುಸಿತದ ವರದಿಗಾಗಿ ಮಿಯಾಮಿ ಹೆರಾಲ್ಡ್‌ನ ಸಿಬ್ಬಂದಿಗೆ ಪ್ರಶಸ್ತಿ.

ತನಿಖಾ ವರದಿ: ಟ್ಯಾಂಪಾ ಬೇ ಟೈಮ್ಸ್‌ನ ಕೋರಿ ಜಿ. ಜಾನ್ಸನ್, ರೆಬೆಕಾ ವೂಲಿಂಗ್‌ಟನ್ ಮತ್ತು ಎಲಿ ಮುರ್ರೆ ಅವರು ಫ್ಲೋರಿಡಾದ ಏಕೈಕ ಬ್ಯಾಟರಿ ಮರುಬಳಕೆ ಘಟಕದೊಳಗಿನ ವಿಷಕಾರಿ ಅಪಾಯಗಳನ್ನು ಬಹಿರಂಗಪಡಿಸಿದರು. ಈ ವರದಿಯು ಕಾರ್ಮಿಕರು ಮತ್ತು ಸುತ್ತಲಿನ ನಿವಾಸಿಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿತು.

ವಿವರಣಾತ್ಮಕ ವರದಿ: ವೆಬ್ ಸ್ಪೇಸ್ ಟೆಲಿಸ್ಕೋಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ವರದಿ ಮಾಡಿದ್ದಕ್ಕಾಗಿ ಕ್ವಾಂಟಾ ಮ್ಯಾಗಜೀನ್‌ನ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಗಿದೆ. ನಟಾಲಿ ವೋಲ್ಚೋವರ್ ಅವರನ್ನು ವಿಶೇಷವಾಗಿ ಗುರುತಿಸಲಾಗಿದೆ.

ಸ್ಥಳೀಯ ವರದಿ: ಬೆಟರ್ ಗವರ್ನಮೆಂಟ್ ಅಸೋಸಿಯೇಷನ್‌ನ ಮ್ಯಾಡಿಸನ್ ಹಾಪ್ಕಿನ್ಸ್ ಮತ್ತು ಚಿಕಾಗೋ ಟ್ರಿಬ್ಯೂನ್‌ನ ಸಿಸಿಲಿಯಾ ರೆಯೆಸ್ ಅವರು ಅಗ್ನಿಶಾಮಕ ಸುರಕ್ಷತೆಯ ಕುರಿತು ವರದಿ ಮಾಡಿದ್ದರು.

ರಾಷ್ಟ್ರೀಯ ವರದಿ: ಟ್ರಾಫಿಕ್ ಸ್ಟಾಪ್‌ಗಳ ಗೊಂದಲದ ಮಾದರಿಯ ಕುರಿತ ವರದಿಗಾಗಿ ದಿ ನ್ಯೂಯಾರ್ಕ್ ಟೈಮ್ಸ್‌ನ ಸಿಬ್ಬಂದಿಗೆ ಪ್ರಶಸ್ತಿ.

ಇದನ್ನೂ ಓದಿರಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಅಂತರಾಷ್ಟ್ರೀಯ ವರದಿ: ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಅಮೇರಿಕನ್ ಮಿಲಿಟರಿ ತೊಡಗಿಸಿಕೊಂಡಿರುವ ವೈಮಾನಿಕ ದಾಳಿಗಳ ಕುರಿತ ವರದಿಗಾಗಿ ನ್ಯೂಯಾರ್ಕ್ ಟೈಮ್ಸ್‌ ಸಿಬ್ಬಂದಿಗೆ ಪ್ರಶಸ್ತಿ.

ಫೀಚರ್‌ ಬರವಣಿಗೆ: ಕುಟುಂಬಗಳ ನಷ್ಟದ ಲೆಕ್ಕಾಚಾರದ ಚಿತ್ರಣಕ್ಕಾಗಿ ದಿ ಅಟ್ಲಾಂಟಿಕ್‌ನ ಜೆನ್ನಿಫರ್ ಸೀನಿಯರ್‌ಗೆ ಪ್ರಶಸ್ತಿ.

ಕಾಮೆಂಟರಿ ವಿಭಾಗದಲ್ಲಿ ಕಾನ್ಸಾಸ್ ಸಿಟಿ ಸ್ಟಾರ್‌ನ ಮೆಲಿಂಡಾ ಹೆನ್ನೆಬರ್ಗರ್, ವಿಮರ್ಶೆಯ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್‌ನ ಸಲಾಮಿಶಾ ಟಿಲೆಟ್, ಸಂಪಾದಕೀಯ ಬರವಣಿಗೆ ವಿಭಾಗದಲ್ಲಿ ಹೂಸ್ಟನ್ ಕ್ರಾನಿಕಲ್‌ನ ಲಿಸಾ ಫಾಲ್ಕೆನ್‌ಬರ್ಗ್, ಮೈಕೆಲ್ ಲಿಂಡೆನ್‌ಬರ್ಗರ್, ಜೋ ಹೋಲಿ ಮತ್ತು ಲೂಯಿಸ್ ಕರಾಸ್ಕೊಗೆ ನೀಡಲಾಗುತ್ತಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...