Homeಮುಖಪುಟಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

- Advertisement -
- Advertisement -

ಪತ್ರಿಕೋದ್ಯಮ, ಪುಸ್ತಕ, ನಾಟಕ ಮತ್ತು ಸಂಗೀತಕ್ಕೆ ಸಂಬಂಧಿಸಿದಂತೆ 2022ರ ಪುಲಿಟ್ಝರ್‌‌ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಖ್ಯಾತ ಫೋಟೋ ಜರ್ನಲಿಸ್ಟ್‌ ದಾನಿಶ್‌ ಸಿದ್ದಿಕಿ ಅವರಿಗೆ ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಭಾರತದ ಪರಿಸ್ಥಿತಿಯನ್ನು ತೆರೆದಿಟ್ಟ ಫೋಟೋ ಜರ್ನಲಿಸಂಗಾಗಿ ಭಾರತೀಯರಾದ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ತಾಲಿಬಾನ್‌ನ ಸಂಘರ್ಷದ ವೇಳೆ ಕೊಲ್ಲಲ್ಪಟ್ಟ ರಾಯಿಟರ್ಸ್ ಫೋಟೋ ಜರ್ನಲಿಸ್ಟ್‌ ದಾನಿಶ್ ಸಿದ್ದಿಕಿ ಅವರಿಗೆ ಪುಲಿಡ್ಜರ್‌ ಪ್ರಶಸ್ತಿ ನೀಡಲಾಗುತ್ತಿದೆ.

ಅಬಿದಿ ಅವರಿಗೆ ಮೂರನೇ ಬಾರಿಗೆ ಪುಲಿಡ್ಝರ್‌ ಸಂದಿದ್ದರೆ, ಈ ಹಿಂದೆ 2018ರಲ್ಲಿ ಸಿದ್ದಿಕಿ ಕೂಡ ಪ್ರಶಸ್ತಿ ಪಡೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಕ್ರೇನ್‌ನ ಪತ್ರಕರ್ತರನ್ನು 2022ರ ಪುಲಿಟ್ಜರ್‌‌ ಪ್ರಶಸ್ತಿಯಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್‌ ಮೇಲೆ ಆದ ದಾಳಿ, ಅಫಫಾನಿಸ್ತಾನದ ಬಿಕ್ಕಟ್ಟು ಮತ್ತು ಫ್ಲೋರಿಡಾದಲ್ಲಿ ಸರ್ಫ್‌ಸೈಡ್ ಕಾಂಡೋಮಿನಿಯಂ ಕುಸಿತದ ಕುರಿತ ವರದಿಗಳನ್ನು ತೀರ್ಪುಗಾರರು ಗುರುತಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ವಿಭಾಗದಲ್ಲಿ ಪ್ರಶಸ್ತಿ ಪಡೆದವರು

ಸಾರ್ವಜನಿಕ ಸೇವೆ: ಜನವರಿ 6, 2021ರಂದು ವಾಷಿಂಗ್ಟನ್ ಮೇಲಿನ ದಾಳಿಯ ಕುರಿತ ವರದಿಗಾಗಿ ವಾಷಿಂಗ್ಟನ್ ಪೋಸ್ಟ್‌ಗೆ ಪ್ರಶಸ್ತಿ.

ಬ್ರೇಕಿಂಗ್ ನ್ಯೂಸ್ ವರದಿ: ಫ್ಲೋರಿಡಾದಲ್ಲಿ ಸೀಸೈಡ್ ಅಪಾರ್ಟ್‌ಮೆಂಟ್ ಟವರ್‌ಗಳ ಕುಸಿತದ ವರದಿಗಾಗಿ ಮಿಯಾಮಿ ಹೆರಾಲ್ಡ್‌ನ ಸಿಬ್ಬಂದಿಗೆ ಪ್ರಶಸ್ತಿ.

ತನಿಖಾ ವರದಿ: ಟ್ಯಾಂಪಾ ಬೇ ಟೈಮ್ಸ್‌ನ ಕೋರಿ ಜಿ. ಜಾನ್ಸನ್, ರೆಬೆಕಾ ವೂಲಿಂಗ್‌ಟನ್ ಮತ್ತು ಎಲಿ ಮುರ್ರೆ ಅವರು ಫ್ಲೋರಿಡಾದ ಏಕೈಕ ಬ್ಯಾಟರಿ ಮರುಬಳಕೆ ಘಟಕದೊಳಗಿನ ವಿಷಕಾರಿ ಅಪಾಯಗಳನ್ನು ಬಹಿರಂಗಪಡಿಸಿದರು. ಈ ವರದಿಯು ಕಾರ್ಮಿಕರು ಮತ್ತು ಸುತ್ತಲಿನ ನಿವಾಸಿಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿತು.

ವಿವರಣಾತ್ಮಕ ವರದಿ: ವೆಬ್ ಸ್ಪೇಸ್ ಟೆಲಿಸ್ಕೋಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ವರದಿ ಮಾಡಿದ್ದಕ್ಕಾಗಿ ಕ್ವಾಂಟಾ ಮ್ಯಾಗಜೀನ್‌ನ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಗಿದೆ. ನಟಾಲಿ ವೋಲ್ಚೋವರ್ ಅವರನ್ನು ವಿಶೇಷವಾಗಿ ಗುರುತಿಸಲಾಗಿದೆ.

ಸ್ಥಳೀಯ ವರದಿ: ಬೆಟರ್ ಗವರ್ನಮೆಂಟ್ ಅಸೋಸಿಯೇಷನ್‌ನ ಮ್ಯಾಡಿಸನ್ ಹಾಪ್ಕಿನ್ಸ್ ಮತ್ತು ಚಿಕಾಗೋ ಟ್ರಿಬ್ಯೂನ್‌ನ ಸಿಸಿಲಿಯಾ ರೆಯೆಸ್ ಅವರು ಅಗ್ನಿಶಾಮಕ ಸುರಕ್ಷತೆಯ ಕುರಿತು ವರದಿ ಮಾಡಿದ್ದರು.

ರಾಷ್ಟ್ರೀಯ ವರದಿ: ಟ್ರಾಫಿಕ್ ಸ್ಟಾಪ್‌ಗಳ ಗೊಂದಲದ ಮಾದರಿಯ ಕುರಿತ ವರದಿಗಾಗಿ ದಿ ನ್ಯೂಯಾರ್ಕ್ ಟೈಮ್ಸ್‌ನ ಸಿಬ್ಬಂದಿಗೆ ಪ್ರಶಸ್ತಿ.

ಇದನ್ನೂ ಓದಿರಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಅಂತರಾಷ್ಟ್ರೀಯ ವರದಿ: ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಅಮೇರಿಕನ್ ಮಿಲಿಟರಿ ತೊಡಗಿಸಿಕೊಂಡಿರುವ ವೈಮಾನಿಕ ದಾಳಿಗಳ ಕುರಿತ ವರದಿಗಾಗಿ ನ್ಯೂಯಾರ್ಕ್ ಟೈಮ್ಸ್‌ ಸಿಬ್ಬಂದಿಗೆ ಪ್ರಶಸ್ತಿ.

ಫೀಚರ್‌ ಬರವಣಿಗೆ: ಕುಟುಂಬಗಳ ನಷ್ಟದ ಲೆಕ್ಕಾಚಾರದ ಚಿತ್ರಣಕ್ಕಾಗಿ ದಿ ಅಟ್ಲಾಂಟಿಕ್‌ನ ಜೆನ್ನಿಫರ್ ಸೀನಿಯರ್‌ಗೆ ಪ್ರಶಸ್ತಿ.

ಕಾಮೆಂಟರಿ ವಿಭಾಗದಲ್ಲಿ ಕಾನ್ಸಾಸ್ ಸಿಟಿ ಸ್ಟಾರ್‌ನ ಮೆಲಿಂಡಾ ಹೆನ್ನೆಬರ್ಗರ್, ವಿಮರ್ಶೆಯ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್‌ನ ಸಲಾಮಿಶಾ ಟಿಲೆಟ್, ಸಂಪಾದಕೀಯ ಬರವಣಿಗೆ ವಿಭಾಗದಲ್ಲಿ ಹೂಸ್ಟನ್ ಕ್ರಾನಿಕಲ್‌ನ ಲಿಸಾ ಫಾಲ್ಕೆನ್‌ಬರ್ಗ್, ಮೈಕೆಲ್ ಲಿಂಡೆನ್‌ಬರ್ಗರ್, ಜೋ ಹೋಲಿ ಮತ್ತು ಲೂಯಿಸ್ ಕರಾಸ್ಕೊಗೆ ನೀಡಲಾಗುತ್ತಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...