Homeಮುಖಪುಟಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

- Advertisement -
- Advertisement -

ಪತ್ರಿಕೋದ್ಯಮ, ಪುಸ್ತಕ, ನಾಟಕ ಮತ್ತು ಸಂಗೀತಕ್ಕೆ ಸಂಬಂಧಿಸಿದಂತೆ 2022ರ ಪುಲಿಟ್ಝರ್‌‌ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಖ್ಯಾತ ಫೋಟೋ ಜರ್ನಲಿಸ್ಟ್‌ ದಾನಿಶ್‌ ಸಿದ್ದಿಕಿ ಅವರಿಗೆ ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಭಾರತದ ಪರಿಸ್ಥಿತಿಯನ್ನು ತೆರೆದಿಟ್ಟ ಫೋಟೋ ಜರ್ನಲಿಸಂಗಾಗಿ ಭಾರತೀಯರಾದ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ತಾಲಿಬಾನ್‌ನ ಸಂಘರ್ಷದ ವೇಳೆ ಕೊಲ್ಲಲ್ಪಟ್ಟ ರಾಯಿಟರ್ಸ್ ಫೋಟೋ ಜರ್ನಲಿಸ್ಟ್‌ ದಾನಿಶ್ ಸಿದ್ದಿಕಿ ಅವರಿಗೆ ಪುಲಿಡ್ಜರ್‌ ಪ್ರಶಸ್ತಿ ನೀಡಲಾಗುತ್ತಿದೆ.

ಅಬಿದಿ ಅವರಿಗೆ ಮೂರನೇ ಬಾರಿಗೆ ಪುಲಿಡ್ಝರ್‌ ಸಂದಿದ್ದರೆ, ಈ ಹಿಂದೆ 2018ರಲ್ಲಿ ಸಿದ್ದಿಕಿ ಕೂಡ ಪ್ರಶಸ್ತಿ ಪಡೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಕ್ರೇನ್‌ನ ಪತ್ರಕರ್ತರನ್ನು 2022ರ ಪುಲಿಟ್ಜರ್‌‌ ಪ್ರಶಸ್ತಿಯಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್‌ ಮೇಲೆ ಆದ ದಾಳಿ, ಅಫಫಾನಿಸ್ತಾನದ ಬಿಕ್ಕಟ್ಟು ಮತ್ತು ಫ್ಲೋರಿಡಾದಲ್ಲಿ ಸರ್ಫ್‌ಸೈಡ್ ಕಾಂಡೋಮಿನಿಯಂ ಕುಸಿತದ ಕುರಿತ ವರದಿಗಳನ್ನು ತೀರ್ಪುಗಾರರು ಗುರುತಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ವಿಭಾಗದಲ್ಲಿ ಪ್ರಶಸ್ತಿ ಪಡೆದವರು

ಸಾರ್ವಜನಿಕ ಸೇವೆ: ಜನವರಿ 6, 2021ರಂದು ವಾಷಿಂಗ್ಟನ್ ಮೇಲಿನ ದಾಳಿಯ ಕುರಿತ ವರದಿಗಾಗಿ ವಾಷಿಂಗ್ಟನ್ ಪೋಸ್ಟ್‌ಗೆ ಪ್ರಶಸ್ತಿ.

ಬ್ರೇಕಿಂಗ್ ನ್ಯೂಸ್ ವರದಿ: ಫ್ಲೋರಿಡಾದಲ್ಲಿ ಸೀಸೈಡ್ ಅಪಾರ್ಟ್‌ಮೆಂಟ್ ಟವರ್‌ಗಳ ಕುಸಿತದ ವರದಿಗಾಗಿ ಮಿಯಾಮಿ ಹೆರಾಲ್ಡ್‌ನ ಸಿಬ್ಬಂದಿಗೆ ಪ್ರಶಸ್ತಿ.

ತನಿಖಾ ವರದಿ: ಟ್ಯಾಂಪಾ ಬೇ ಟೈಮ್ಸ್‌ನ ಕೋರಿ ಜಿ. ಜಾನ್ಸನ್, ರೆಬೆಕಾ ವೂಲಿಂಗ್‌ಟನ್ ಮತ್ತು ಎಲಿ ಮುರ್ರೆ ಅವರು ಫ್ಲೋರಿಡಾದ ಏಕೈಕ ಬ್ಯಾಟರಿ ಮರುಬಳಕೆ ಘಟಕದೊಳಗಿನ ವಿಷಕಾರಿ ಅಪಾಯಗಳನ್ನು ಬಹಿರಂಗಪಡಿಸಿದರು. ಈ ವರದಿಯು ಕಾರ್ಮಿಕರು ಮತ್ತು ಸುತ್ತಲಿನ ನಿವಾಸಿಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿತು.

ವಿವರಣಾತ್ಮಕ ವರದಿ: ವೆಬ್ ಸ್ಪೇಸ್ ಟೆಲಿಸ್ಕೋಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ವರದಿ ಮಾಡಿದ್ದಕ್ಕಾಗಿ ಕ್ವಾಂಟಾ ಮ್ಯಾಗಜೀನ್‌ನ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಗಿದೆ. ನಟಾಲಿ ವೋಲ್ಚೋವರ್ ಅವರನ್ನು ವಿಶೇಷವಾಗಿ ಗುರುತಿಸಲಾಗಿದೆ.

ಸ್ಥಳೀಯ ವರದಿ: ಬೆಟರ್ ಗವರ್ನಮೆಂಟ್ ಅಸೋಸಿಯೇಷನ್‌ನ ಮ್ಯಾಡಿಸನ್ ಹಾಪ್ಕಿನ್ಸ್ ಮತ್ತು ಚಿಕಾಗೋ ಟ್ರಿಬ್ಯೂನ್‌ನ ಸಿಸಿಲಿಯಾ ರೆಯೆಸ್ ಅವರು ಅಗ್ನಿಶಾಮಕ ಸುರಕ್ಷತೆಯ ಕುರಿತು ವರದಿ ಮಾಡಿದ್ದರು.

ರಾಷ್ಟ್ರೀಯ ವರದಿ: ಟ್ರಾಫಿಕ್ ಸ್ಟಾಪ್‌ಗಳ ಗೊಂದಲದ ಮಾದರಿಯ ಕುರಿತ ವರದಿಗಾಗಿ ದಿ ನ್ಯೂಯಾರ್ಕ್ ಟೈಮ್ಸ್‌ನ ಸಿಬ್ಬಂದಿಗೆ ಪ್ರಶಸ್ತಿ.

ಇದನ್ನೂ ಓದಿರಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಅಂತರಾಷ್ಟ್ರೀಯ ವರದಿ: ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಅಮೇರಿಕನ್ ಮಿಲಿಟರಿ ತೊಡಗಿಸಿಕೊಂಡಿರುವ ವೈಮಾನಿಕ ದಾಳಿಗಳ ಕುರಿತ ವರದಿಗಾಗಿ ನ್ಯೂಯಾರ್ಕ್ ಟೈಮ್ಸ್‌ ಸಿಬ್ಬಂದಿಗೆ ಪ್ರಶಸ್ತಿ.

ಫೀಚರ್‌ ಬರವಣಿಗೆ: ಕುಟುಂಬಗಳ ನಷ್ಟದ ಲೆಕ್ಕಾಚಾರದ ಚಿತ್ರಣಕ್ಕಾಗಿ ದಿ ಅಟ್ಲಾಂಟಿಕ್‌ನ ಜೆನ್ನಿಫರ್ ಸೀನಿಯರ್‌ಗೆ ಪ್ರಶಸ್ತಿ.

ಕಾಮೆಂಟರಿ ವಿಭಾಗದಲ್ಲಿ ಕಾನ್ಸಾಸ್ ಸಿಟಿ ಸ್ಟಾರ್‌ನ ಮೆಲಿಂಡಾ ಹೆನ್ನೆಬರ್ಗರ್, ವಿಮರ್ಶೆಯ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್‌ನ ಸಲಾಮಿಶಾ ಟಿಲೆಟ್, ಸಂಪಾದಕೀಯ ಬರವಣಿಗೆ ವಿಭಾಗದಲ್ಲಿ ಹೂಸ್ಟನ್ ಕ್ರಾನಿಕಲ್‌ನ ಲಿಸಾ ಫಾಲ್ಕೆನ್‌ಬರ್ಗ್, ಮೈಕೆಲ್ ಲಿಂಡೆನ್‌ಬರ್ಗರ್, ಜೋ ಹೋಲಿ ಮತ್ತು ಲೂಯಿಸ್ ಕರಾಸ್ಕೊಗೆ ನೀಡಲಾಗುತ್ತಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...