Homeಮುಖಪುಟಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

- Advertisement -
- Advertisement -

ಪತ್ರಿಕೋದ್ಯಮ, ಪುಸ್ತಕ, ನಾಟಕ ಮತ್ತು ಸಂಗೀತಕ್ಕೆ ಸಂಬಂಧಿಸಿದಂತೆ 2022ರ ಪುಲಿಟ್ಝರ್‌‌ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಖ್ಯಾತ ಫೋಟೋ ಜರ್ನಲಿಸ್ಟ್‌ ದಾನಿಶ್‌ ಸಿದ್ದಿಕಿ ಅವರಿಗೆ ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಭಾರತದ ಪರಿಸ್ಥಿತಿಯನ್ನು ತೆರೆದಿಟ್ಟ ಫೋಟೋ ಜರ್ನಲಿಸಂಗಾಗಿ ಭಾರತೀಯರಾದ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ತಾಲಿಬಾನ್‌ನ ಸಂಘರ್ಷದ ವೇಳೆ ಕೊಲ್ಲಲ್ಪಟ್ಟ ರಾಯಿಟರ್ಸ್ ಫೋಟೋ ಜರ್ನಲಿಸ್ಟ್‌ ದಾನಿಶ್ ಸಿದ್ದಿಕಿ ಅವರಿಗೆ ಪುಲಿಡ್ಜರ್‌ ಪ್ರಶಸ್ತಿ ನೀಡಲಾಗುತ್ತಿದೆ.

ಅಬಿದಿ ಅವರಿಗೆ ಮೂರನೇ ಬಾರಿಗೆ ಪುಲಿಡ್ಝರ್‌ ಸಂದಿದ್ದರೆ, ಈ ಹಿಂದೆ 2018ರಲ್ಲಿ ಸಿದ್ದಿಕಿ ಕೂಡ ಪ್ರಶಸ್ತಿ ಪಡೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಕ್ರೇನ್‌ನ ಪತ್ರಕರ್ತರನ್ನು 2022ರ ಪುಲಿಟ್ಜರ್‌‌ ಪ್ರಶಸ್ತಿಯಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್‌ ಮೇಲೆ ಆದ ದಾಳಿ, ಅಫಫಾನಿಸ್ತಾನದ ಬಿಕ್ಕಟ್ಟು ಮತ್ತು ಫ್ಲೋರಿಡಾದಲ್ಲಿ ಸರ್ಫ್‌ಸೈಡ್ ಕಾಂಡೋಮಿನಿಯಂ ಕುಸಿತದ ಕುರಿತ ವರದಿಗಳನ್ನು ತೀರ್ಪುಗಾರರು ಗುರುತಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ವಿಭಾಗದಲ್ಲಿ ಪ್ರಶಸ್ತಿ ಪಡೆದವರು

ಸಾರ್ವಜನಿಕ ಸೇವೆ: ಜನವರಿ 6, 2021ರಂದು ವಾಷಿಂಗ್ಟನ್ ಮೇಲಿನ ದಾಳಿಯ ಕುರಿತ ವರದಿಗಾಗಿ ವಾಷಿಂಗ್ಟನ್ ಪೋಸ್ಟ್‌ಗೆ ಪ್ರಶಸ್ತಿ.

ಬ್ರೇಕಿಂಗ್ ನ್ಯೂಸ್ ವರದಿ: ಫ್ಲೋರಿಡಾದಲ್ಲಿ ಸೀಸೈಡ್ ಅಪಾರ್ಟ್‌ಮೆಂಟ್ ಟವರ್‌ಗಳ ಕುಸಿತದ ವರದಿಗಾಗಿ ಮಿಯಾಮಿ ಹೆರಾಲ್ಡ್‌ನ ಸಿಬ್ಬಂದಿಗೆ ಪ್ರಶಸ್ತಿ.

ತನಿಖಾ ವರದಿ: ಟ್ಯಾಂಪಾ ಬೇ ಟೈಮ್ಸ್‌ನ ಕೋರಿ ಜಿ. ಜಾನ್ಸನ್, ರೆಬೆಕಾ ವೂಲಿಂಗ್‌ಟನ್ ಮತ್ತು ಎಲಿ ಮುರ್ರೆ ಅವರು ಫ್ಲೋರಿಡಾದ ಏಕೈಕ ಬ್ಯಾಟರಿ ಮರುಬಳಕೆ ಘಟಕದೊಳಗಿನ ವಿಷಕಾರಿ ಅಪಾಯಗಳನ್ನು ಬಹಿರಂಗಪಡಿಸಿದರು. ಈ ವರದಿಯು ಕಾರ್ಮಿಕರು ಮತ್ತು ಸುತ್ತಲಿನ ನಿವಾಸಿಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿತು.

ವಿವರಣಾತ್ಮಕ ವರದಿ: ವೆಬ್ ಸ್ಪೇಸ್ ಟೆಲಿಸ್ಕೋಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ವರದಿ ಮಾಡಿದ್ದಕ್ಕಾಗಿ ಕ್ವಾಂಟಾ ಮ್ಯಾಗಜೀನ್‌ನ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಗಿದೆ. ನಟಾಲಿ ವೋಲ್ಚೋವರ್ ಅವರನ್ನು ವಿಶೇಷವಾಗಿ ಗುರುತಿಸಲಾಗಿದೆ.

ಸ್ಥಳೀಯ ವರದಿ: ಬೆಟರ್ ಗವರ್ನಮೆಂಟ್ ಅಸೋಸಿಯೇಷನ್‌ನ ಮ್ಯಾಡಿಸನ್ ಹಾಪ್ಕಿನ್ಸ್ ಮತ್ತು ಚಿಕಾಗೋ ಟ್ರಿಬ್ಯೂನ್‌ನ ಸಿಸಿಲಿಯಾ ರೆಯೆಸ್ ಅವರು ಅಗ್ನಿಶಾಮಕ ಸುರಕ್ಷತೆಯ ಕುರಿತು ವರದಿ ಮಾಡಿದ್ದರು.

ರಾಷ್ಟ್ರೀಯ ವರದಿ: ಟ್ರಾಫಿಕ್ ಸ್ಟಾಪ್‌ಗಳ ಗೊಂದಲದ ಮಾದರಿಯ ಕುರಿತ ವರದಿಗಾಗಿ ದಿ ನ್ಯೂಯಾರ್ಕ್ ಟೈಮ್ಸ್‌ನ ಸಿಬ್ಬಂದಿಗೆ ಪ್ರಶಸ್ತಿ.

ಇದನ್ನೂ ಓದಿರಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಅಂತರಾಷ್ಟ್ರೀಯ ವರದಿ: ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಅಮೇರಿಕನ್ ಮಿಲಿಟರಿ ತೊಡಗಿಸಿಕೊಂಡಿರುವ ವೈಮಾನಿಕ ದಾಳಿಗಳ ಕುರಿತ ವರದಿಗಾಗಿ ನ್ಯೂಯಾರ್ಕ್ ಟೈಮ್ಸ್‌ ಸಿಬ್ಬಂದಿಗೆ ಪ್ರಶಸ್ತಿ.

ಫೀಚರ್‌ ಬರವಣಿಗೆ: ಕುಟುಂಬಗಳ ನಷ್ಟದ ಲೆಕ್ಕಾಚಾರದ ಚಿತ್ರಣಕ್ಕಾಗಿ ದಿ ಅಟ್ಲಾಂಟಿಕ್‌ನ ಜೆನ್ನಿಫರ್ ಸೀನಿಯರ್‌ಗೆ ಪ್ರಶಸ್ತಿ.

ಕಾಮೆಂಟರಿ ವಿಭಾಗದಲ್ಲಿ ಕಾನ್ಸಾಸ್ ಸಿಟಿ ಸ್ಟಾರ್‌ನ ಮೆಲಿಂಡಾ ಹೆನ್ನೆಬರ್ಗರ್, ವಿಮರ್ಶೆಯ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್‌ನ ಸಲಾಮಿಶಾ ಟಿಲೆಟ್, ಸಂಪಾದಕೀಯ ಬರವಣಿಗೆ ವಿಭಾಗದಲ್ಲಿ ಹೂಸ್ಟನ್ ಕ್ರಾನಿಕಲ್‌ನ ಲಿಸಾ ಫಾಲ್ಕೆನ್‌ಬರ್ಗ್, ಮೈಕೆಲ್ ಲಿಂಡೆನ್‌ಬರ್ಗರ್, ಜೋ ಹೋಲಿ ಮತ್ತು ಲೂಯಿಸ್ ಕರಾಸ್ಕೊಗೆ ನೀಡಲಾಗುತ್ತಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...