Homeಮುಖಪುಟಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

- Advertisement -
- Advertisement -

ಪತ್ರಿಕೋದ್ಯಮ, ಪುಸ್ತಕ, ನಾಟಕ ಮತ್ತು ಸಂಗೀತಕ್ಕೆ ಸಂಬಂಧಿಸಿದಂತೆ 2022ರ ಪುಲಿಟ್ಝರ್‌‌ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಖ್ಯಾತ ಫೋಟೋ ಜರ್ನಲಿಸ್ಟ್‌ ದಾನಿಶ್‌ ಸಿದ್ದಿಕಿ ಅವರಿಗೆ ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಭಾರತದ ಪರಿಸ್ಥಿತಿಯನ್ನು ತೆರೆದಿಟ್ಟ ಫೋಟೋ ಜರ್ನಲಿಸಂಗಾಗಿ ಭಾರತೀಯರಾದ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ತಾಲಿಬಾನ್‌ನ ಸಂಘರ್ಷದ ವೇಳೆ ಕೊಲ್ಲಲ್ಪಟ್ಟ ರಾಯಿಟರ್ಸ್ ಫೋಟೋ ಜರ್ನಲಿಸ್ಟ್‌ ದಾನಿಶ್ ಸಿದ್ದಿಕಿ ಅವರಿಗೆ ಪುಲಿಡ್ಜರ್‌ ಪ್ರಶಸ್ತಿ ನೀಡಲಾಗುತ್ತಿದೆ.

ಅಬಿದಿ ಅವರಿಗೆ ಮೂರನೇ ಬಾರಿಗೆ ಪುಲಿಡ್ಝರ್‌ ಸಂದಿದ್ದರೆ, ಈ ಹಿಂದೆ 2018ರಲ್ಲಿ ಸಿದ್ದಿಕಿ ಕೂಡ ಪ್ರಶಸ್ತಿ ಪಡೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಕ್ರೇನ್‌ನ ಪತ್ರಕರ್ತರನ್ನು 2022ರ ಪುಲಿಟ್ಜರ್‌‌ ಪ್ರಶಸ್ತಿಯಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್‌ ಮೇಲೆ ಆದ ದಾಳಿ, ಅಫಫಾನಿಸ್ತಾನದ ಬಿಕ್ಕಟ್ಟು ಮತ್ತು ಫ್ಲೋರಿಡಾದಲ್ಲಿ ಸರ್ಫ್‌ಸೈಡ್ ಕಾಂಡೋಮಿನಿಯಂ ಕುಸಿತದ ಕುರಿತ ವರದಿಗಳನ್ನು ತೀರ್ಪುಗಾರರು ಗುರುತಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ವಿಭಾಗದಲ್ಲಿ ಪ್ರಶಸ್ತಿ ಪಡೆದವರು

ಸಾರ್ವಜನಿಕ ಸೇವೆ: ಜನವರಿ 6, 2021ರಂದು ವಾಷಿಂಗ್ಟನ್ ಮೇಲಿನ ದಾಳಿಯ ಕುರಿತ ವರದಿಗಾಗಿ ವಾಷಿಂಗ್ಟನ್ ಪೋಸ್ಟ್‌ಗೆ ಪ್ರಶಸ್ತಿ.

ಬ್ರೇಕಿಂಗ್ ನ್ಯೂಸ್ ವರದಿ: ಫ್ಲೋರಿಡಾದಲ್ಲಿ ಸೀಸೈಡ್ ಅಪಾರ್ಟ್‌ಮೆಂಟ್ ಟವರ್‌ಗಳ ಕುಸಿತದ ವರದಿಗಾಗಿ ಮಿಯಾಮಿ ಹೆರಾಲ್ಡ್‌ನ ಸಿಬ್ಬಂದಿಗೆ ಪ್ರಶಸ್ತಿ.

ತನಿಖಾ ವರದಿ: ಟ್ಯಾಂಪಾ ಬೇ ಟೈಮ್ಸ್‌ನ ಕೋರಿ ಜಿ. ಜಾನ್ಸನ್, ರೆಬೆಕಾ ವೂಲಿಂಗ್‌ಟನ್ ಮತ್ತು ಎಲಿ ಮುರ್ರೆ ಅವರು ಫ್ಲೋರಿಡಾದ ಏಕೈಕ ಬ್ಯಾಟರಿ ಮರುಬಳಕೆ ಘಟಕದೊಳಗಿನ ವಿಷಕಾರಿ ಅಪಾಯಗಳನ್ನು ಬಹಿರಂಗಪಡಿಸಿದರು. ಈ ವರದಿಯು ಕಾರ್ಮಿಕರು ಮತ್ತು ಸುತ್ತಲಿನ ನಿವಾಸಿಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿತು.

ವಿವರಣಾತ್ಮಕ ವರದಿ: ವೆಬ್ ಸ್ಪೇಸ್ ಟೆಲಿಸ್ಕೋಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ವರದಿ ಮಾಡಿದ್ದಕ್ಕಾಗಿ ಕ್ವಾಂಟಾ ಮ್ಯಾಗಜೀನ್‌ನ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಗಿದೆ. ನಟಾಲಿ ವೋಲ್ಚೋವರ್ ಅವರನ್ನು ವಿಶೇಷವಾಗಿ ಗುರುತಿಸಲಾಗಿದೆ.

ಸ್ಥಳೀಯ ವರದಿ: ಬೆಟರ್ ಗವರ್ನಮೆಂಟ್ ಅಸೋಸಿಯೇಷನ್‌ನ ಮ್ಯಾಡಿಸನ್ ಹಾಪ್ಕಿನ್ಸ್ ಮತ್ತು ಚಿಕಾಗೋ ಟ್ರಿಬ್ಯೂನ್‌ನ ಸಿಸಿಲಿಯಾ ರೆಯೆಸ್ ಅವರು ಅಗ್ನಿಶಾಮಕ ಸುರಕ್ಷತೆಯ ಕುರಿತು ವರದಿ ಮಾಡಿದ್ದರು.

ರಾಷ್ಟ್ರೀಯ ವರದಿ: ಟ್ರಾಫಿಕ್ ಸ್ಟಾಪ್‌ಗಳ ಗೊಂದಲದ ಮಾದರಿಯ ಕುರಿತ ವರದಿಗಾಗಿ ದಿ ನ್ಯೂಯಾರ್ಕ್ ಟೈಮ್ಸ್‌ನ ಸಿಬ್ಬಂದಿಗೆ ಪ್ರಶಸ್ತಿ.

ಇದನ್ನೂ ಓದಿರಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಅಂತರಾಷ್ಟ್ರೀಯ ವರದಿ: ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಅಮೇರಿಕನ್ ಮಿಲಿಟರಿ ತೊಡಗಿಸಿಕೊಂಡಿರುವ ವೈಮಾನಿಕ ದಾಳಿಗಳ ಕುರಿತ ವರದಿಗಾಗಿ ನ್ಯೂಯಾರ್ಕ್ ಟೈಮ್ಸ್‌ ಸಿಬ್ಬಂದಿಗೆ ಪ್ರಶಸ್ತಿ.

ಫೀಚರ್‌ ಬರವಣಿಗೆ: ಕುಟುಂಬಗಳ ನಷ್ಟದ ಲೆಕ್ಕಾಚಾರದ ಚಿತ್ರಣಕ್ಕಾಗಿ ದಿ ಅಟ್ಲಾಂಟಿಕ್‌ನ ಜೆನ್ನಿಫರ್ ಸೀನಿಯರ್‌ಗೆ ಪ್ರಶಸ್ತಿ.

ಕಾಮೆಂಟರಿ ವಿಭಾಗದಲ್ಲಿ ಕಾನ್ಸಾಸ್ ಸಿಟಿ ಸ್ಟಾರ್‌ನ ಮೆಲಿಂಡಾ ಹೆನ್ನೆಬರ್ಗರ್, ವಿಮರ್ಶೆಯ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್‌ನ ಸಲಾಮಿಶಾ ಟಿಲೆಟ್, ಸಂಪಾದಕೀಯ ಬರವಣಿಗೆ ವಿಭಾಗದಲ್ಲಿ ಹೂಸ್ಟನ್ ಕ್ರಾನಿಕಲ್‌ನ ಲಿಸಾ ಫಾಲ್ಕೆನ್‌ಬರ್ಗ್, ಮೈಕೆಲ್ ಲಿಂಡೆನ್‌ಬರ್ಗರ್, ಜೋ ಹೋಲಿ ಮತ್ತು ಲೂಯಿಸ್ ಕರಾಸ್ಕೊಗೆ ನೀಡಲಾಗುತ್ತಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...