Homeಮುಖಪುಟಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

- Advertisement -
- Advertisement -

ಪತ್ರಿಕೋದ್ಯಮ, ಪುಸ್ತಕ, ನಾಟಕ ಮತ್ತು ಸಂಗೀತಕ್ಕೆ ಸಂಬಂಧಿಸಿದಂತೆ 2022ರ ಪುಲಿಟ್ಝರ್‌‌ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಖ್ಯಾತ ಫೋಟೋ ಜರ್ನಲಿಸ್ಟ್‌ ದಾನಿಶ್‌ ಸಿದ್ದಿಕಿ ಅವರಿಗೆ ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಭಾರತದ ಪರಿಸ್ಥಿತಿಯನ್ನು ತೆರೆದಿಟ್ಟ ಫೋಟೋ ಜರ್ನಲಿಸಂಗಾಗಿ ಭಾರತೀಯರಾದ ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ತಾಲಿಬಾನ್‌ನ ಸಂಘರ್ಷದ ವೇಳೆ ಕೊಲ್ಲಲ್ಪಟ್ಟ ರಾಯಿಟರ್ಸ್ ಫೋಟೋ ಜರ್ನಲಿಸ್ಟ್‌ ದಾನಿಶ್ ಸಿದ್ದಿಕಿ ಅವರಿಗೆ ಪುಲಿಡ್ಜರ್‌ ಪ್ರಶಸ್ತಿ ನೀಡಲಾಗುತ್ತಿದೆ.

ಅಬಿದಿ ಅವರಿಗೆ ಮೂರನೇ ಬಾರಿಗೆ ಪುಲಿಡ್ಝರ್‌ ಸಂದಿದ್ದರೆ, ಈ ಹಿಂದೆ 2018ರಲ್ಲಿ ಸಿದ್ದಿಕಿ ಕೂಡ ಪ್ರಶಸ್ತಿ ಪಡೆದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಕ್ರೇನ್‌ನ ಪತ್ರಕರ್ತರನ್ನು 2022ರ ಪುಲಿಟ್ಜರ್‌‌ ಪ್ರಶಸ್ತಿಯಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ಜನವರಿ 6ರಂದು ಅಮೆರಿಕ ಸಂಸತ್‌ ಮೇಲೆ ಆದ ದಾಳಿ, ಅಫಫಾನಿಸ್ತಾನದ ಬಿಕ್ಕಟ್ಟು ಮತ್ತು ಫ್ಲೋರಿಡಾದಲ್ಲಿ ಸರ್ಫ್‌ಸೈಡ್ ಕಾಂಡೋಮಿನಿಯಂ ಕುಸಿತದ ಕುರಿತ ವರದಿಗಳನ್ನು ತೀರ್ಪುಗಾರರು ಗುರುತಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ವಿಭಾಗದಲ್ಲಿ ಪ್ರಶಸ್ತಿ ಪಡೆದವರು

ಸಾರ್ವಜನಿಕ ಸೇವೆ: ಜನವರಿ 6, 2021ರಂದು ವಾಷಿಂಗ್ಟನ್ ಮೇಲಿನ ದಾಳಿಯ ಕುರಿತ ವರದಿಗಾಗಿ ವಾಷಿಂಗ್ಟನ್ ಪೋಸ್ಟ್‌ಗೆ ಪ್ರಶಸ್ತಿ.

ಬ್ರೇಕಿಂಗ್ ನ್ಯೂಸ್ ವರದಿ: ಫ್ಲೋರಿಡಾದಲ್ಲಿ ಸೀಸೈಡ್ ಅಪಾರ್ಟ್‌ಮೆಂಟ್ ಟವರ್‌ಗಳ ಕುಸಿತದ ವರದಿಗಾಗಿ ಮಿಯಾಮಿ ಹೆರಾಲ್ಡ್‌ನ ಸಿಬ್ಬಂದಿಗೆ ಪ್ರಶಸ್ತಿ.

ತನಿಖಾ ವರದಿ: ಟ್ಯಾಂಪಾ ಬೇ ಟೈಮ್ಸ್‌ನ ಕೋರಿ ಜಿ. ಜಾನ್ಸನ್, ರೆಬೆಕಾ ವೂಲಿಂಗ್‌ಟನ್ ಮತ್ತು ಎಲಿ ಮುರ್ರೆ ಅವರು ಫ್ಲೋರಿಡಾದ ಏಕೈಕ ಬ್ಯಾಟರಿ ಮರುಬಳಕೆ ಘಟಕದೊಳಗಿನ ವಿಷಕಾರಿ ಅಪಾಯಗಳನ್ನು ಬಹಿರಂಗಪಡಿಸಿದರು. ಈ ವರದಿಯು ಕಾರ್ಮಿಕರು ಮತ್ತು ಸುತ್ತಲಿನ ನಿವಾಸಿಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿತು.

ವಿವರಣಾತ್ಮಕ ವರದಿ: ವೆಬ್ ಸ್ಪೇಸ್ ಟೆಲಿಸ್ಕೋಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕುರಿತು ವರದಿ ಮಾಡಿದ್ದಕ್ಕಾಗಿ ಕ್ವಾಂಟಾ ಮ್ಯಾಗಜೀನ್‌ನ ಸಿಬ್ಬಂದಿಗೆ ಪ್ರಶಸ್ತಿ ನೀಡಲಾಗಿದೆ. ನಟಾಲಿ ವೋಲ್ಚೋವರ್ ಅವರನ್ನು ವಿಶೇಷವಾಗಿ ಗುರುತಿಸಲಾಗಿದೆ.

ಸ್ಥಳೀಯ ವರದಿ: ಬೆಟರ್ ಗವರ್ನಮೆಂಟ್ ಅಸೋಸಿಯೇಷನ್‌ನ ಮ್ಯಾಡಿಸನ್ ಹಾಪ್ಕಿನ್ಸ್ ಮತ್ತು ಚಿಕಾಗೋ ಟ್ರಿಬ್ಯೂನ್‌ನ ಸಿಸಿಲಿಯಾ ರೆಯೆಸ್ ಅವರು ಅಗ್ನಿಶಾಮಕ ಸುರಕ್ಷತೆಯ ಕುರಿತು ವರದಿ ಮಾಡಿದ್ದರು.

ರಾಷ್ಟ್ರೀಯ ವರದಿ: ಟ್ರಾಫಿಕ್ ಸ್ಟಾಪ್‌ಗಳ ಗೊಂದಲದ ಮಾದರಿಯ ಕುರಿತ ವರದಿಗಾಗಿ ದಿ ನ್ಯೂಯಾರ್ಕ್ ಟೈಮ್ಸ್‌ನ ಸಿಬ್ಬಂದಿಗೆ ಪ್ರಶಸ್ತಿ.

ಇದನ್ನೂ ಓದಿರಿ: ತೀವ್ರವಾದ ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಅಂತರಾಷ್ಟ್ರೀಯ ವರದಿ: ಇರಾಕ್, ಸಿರಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಅಮೇರಿಕನ್ ಮಿಲಿಟರಿ ತೊಡಗಿಸಿಕೊಂಡಿರುವ ವೈಮಾನಿಕ ದಾಳಿಗಳ ಕುರಿತ ವರದಿಗಾಗಿ ನ್ಯೂಯಾರ್ಕ್ ಟೈಮ್ಸ್‌ ಸಿಬ್ಬಂದಿಗೆ ಪ್ರಶಸ್ತಿ.

ಫೀಚರ್‌ ಬರವಣಿಗೆ: ಕುಟುಂಬಗಳ ನಷ್ಟದ ಲೆಕ್ಕಾಚಾರದ ಚಿತ್ರಣಕ್ಕಾಗಿ ದಿ ಅಟ್ಲಾಂಟಿಕ್‌ನ ಜೆನ್ನಿಫರ್ ಸೀನಿಯರ್‌ಗೆ ಪ್ರಶಸ್ತಿ.

ಕಾಮೆಂಟರಿ ವಿಭಾಗದಲ್ಲಿ ಕಾನ್ಸಾಸ್ ಸಿಟಿ ಸ್ಟಾರ್‌ನ ಮೆಲಿಂಡಾ ಹೆನ್ನೆಬರ್ಗರ್, ವಿಮರ್ಶೆಯ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್‌ನ ಸಲಾಮಿಶಾ ಟಿಲೆಟ್, ಸಂಪಾದಕೀಯ ಬರವಣಿಗೆ ವಿಭಾಗದಲ್ಲಿ ಹೂಸ್ಟನ್ ಕ್ರಾನಿಕಲ್‌ನ ಲಿಸಾ ಫಾಲ್ಕೆನ್‌ಬರ್ಗ್, ಮೈಕೆಲ್ ಲಿಂಡೆನ್‌ಬರ್ಗರ್, ಜೋ ಹೋಲಿ ಮತ್ತು ಲೂಯಿಸ್ ಕರಾಸ್ಕೊಗೆ ನೀಡಲಾಗುತ್ತಿದೆ. ಜೊತೆಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...