Homeಮುಖಪುಟತಾಲಿಬಾನ್ ಸಚಿವರ ಮುಂದೆ ಪತ್ರಕರ್ತನ ಹತ್ಯೆ ವಿಷಯ ಪ್ರಸ್ತಾಪಿಸುವಂತೆ ಒತ್ತಾಯಿಸಿದ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್

ತಾಲಿಬಾನ್ ಸಚಿವರ ಮುಂದೆ ಪತ್ರಕರ್ತನ ಹತ್ಯೆ ವಿಷಯ ಪ್ರಸ್ತಾಪಿಸುವಂತೆ ಒತ್ತಾಯಿಸಿದ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್

- Advertisement -
- Advertisement -

ಭಾರತಕ್ಕೆ ಭೇಟಿ ನೀಡಿರುವ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಮುಂದೆ, 2021ರಲ್ಲಿ ಅಫ್ಘಾನಿಸ್ತಾನದಲ್ಲಿ ಸಂಘರ್ಷವನ್ನು ವರದಿ ಮಾಡುವಾಗ ನಡೆದ, ಪುಲಿಟ್ಝರ್ ಪ್ರಶಸ್ತಿ ವಿಜೇತ ಭಾರತೀಯ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಅವರ ಹತ್ಯೆ ವಿಷಯವನ್ನು ಪ್ರಸ್ತಾಪಿಸುವಂತೆ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್ ಆಗ್ರಹಿಸಿದೆ. ಸಿದ್ದಿಕಿ ಅವರನ್ನು ಬಂಧಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಫೌಂಡೇಶನ್ ಆರೋಪಿಸಿದೆ.

ಭಾರತ ಸರ್ಕಾರ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಹೊಣೆಗಾರಿಕೆ ಕಾರ್ಯವಿಧಾನಗಳ ಮೂಲಕ ಸಿದ್ದಿಕಿ ಅವರ ಸಾವಿನ ನ್ಯಾಯಕ್ಕಾಗಿ ಒತ್ತಾಯಿಸುವಂತೆ ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸಿದ್ದಿಕಿ ಫೌಂಡೇಶನ್ ಆಗ್ರಹಿಸಿದೆ.

ಮುಲ್ಲಾ ಹಸನ್ ಅಖುಂದ್, ಅಬ್ದುಲ್ ಘನಿ ಬರಾದಾರ್ ಮತ್ತು ಜಬಿಯುಲ್ಲಾ ಮುಜಾಹಿದ್ ಸೇರಿದಂತೆ ಹಿರಿಯ ತಾಲಿಬಾನ್ ನಾಯಕರನ್ನು ಸಿದ್ದಿಕಿ ಹತ್ಯೆಗೆ ಸಂಬಂಧಿಸಿದಂತೆ ಯುದ್ಧಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಹೊಣೆಯಾಗಿಸಿ ಮಾರ್ಚ್ 2022ರಲ್ಲಿ ಸಿದ್ದಿಕಿ ಪೋಷಕರು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯಕ್ಕೆ ಔಪಚಾರಿಕ ದೂರು ಸಲ್ಲಿಸಿದ್ದಾರೆ.

ತಾಲಿಬಾನ್ ವಿದೇಶಾಂಗ ಸಚಿವ ಈಗ ಭಾರತಕ್ಕೆ ಭೇಟಿ ನೀಡಿರುವ ಹಿನ್ನೆಲೆ, ತಾಲಿಬಾನ್‌ಗೆ ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯ ತನ್ನ ಬಾಧ್ಯತೆಗಳನ್ನು ನೆನಪಿಸಲು ಮತ್ತು ಡ್ಯಾನಿಶ್ ಹತ್ಯೆಯ ಸ್ವತಂತ್ರ ತನಿಖೆಗೆ ಸಹಕಾರ ನೀಡುವಂತೆ ಒತ್ತಾಯಿಸಲು ಭಾರತಕ್ಕೆ ಉತ್ತಮ ಅವಕಾಶ ದೊರೆತಿದೆ ಎಂದು ಸಿದ್ದಿಕಿ ಫೌಂಡೇಶನ್ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಫೋಟೋ ಜರ್ನಲಿಸ್ಟ್ ಆಗಿದ್ದ ಡ್ಯಾನಿಶ್ ಸಿದ್ದಿಕಿ ಅವರು ಜುಲೈ 2021ರಲ್ಲಿ ಕಂದಹಾರ್‌ನಲ್ಲಿ ಕರ್ತವ್ಯದಲ್ಲಿದ್ದಾಗ, ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಕಾಳಗದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿದ್ದಿಕಿ ಪಾಕಿಸ್ತಾನ ಗಡಿ ಬಳಿಯ ಸ್ಪಿನ್ ಬೋಲ್ಡಾಕ್‌ನಲ್ಲಿ ಅಫ್ಘಾನ್‌ ವಿಶೇಷ ಪಡೆಗಳ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದರು.

ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ (ಸಿಪಿಜೆ), ರಿಪೋಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್‌) ಸೇರಿದಂತೆ ಸ್ವತಂತ್ರ ಪತ್ರಿಕಾ ಸಂಘಟನೆಗಳು ಡ್ಯಾನಿಶ್ ಸಿದ್ದಿಕಿ ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ. ಅವರ ಮೃತದೇಹದ ಮೇಲೆ ಗಂಭೀರ ಗಾಯಗಳು ಇತ್ತು ಎಂದು ಆರೋಪಿಸಿವೆ. ಆದರೆ, ತಾಲಿಬಾನ್ ಇದನ್ನು ತಳ್ಳಿ ಹಾಕಿವೆ.

ಸಿದ್ದಿಕಿ ಅವರ ಹತ್ಯೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಜಾಗತಿಕ ಪತ್ರಿಕಾ ಮತ್ತು ಮಾನವ ಹಕ್ಕುಗಳ ಸಂಸ್ಥೆಗಳು ಹತ್ಯೆಯನ್ನು ಖಂಡಿಸಿತ್ತು ಮತ್ತು ತಾಲಿಬಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿತ್ತು.

ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟಿನ ಬಗ್ಗೆ ಸಿದ್ದಿಕಿ ಮಾಡಿದ್ದ ವರದಿಗೆ 2018ರ ಪುಲಿಟ್ಝರ್ ಪ್ರಶಸ್ತಿ ಮತ್ತು ಭಾರತದ ಕೋವಿಡ್‌-19 ಕುರಿತ ವರದಿಗಾಗಿ 2022ರಲ್ಲಿ ಮರಣೋತ್ತರ ಪುಲಿಟ್ಝರ್ ಪ್ರಶಸ್ತಿ ಸಿದ್ದಿಕಿ ಅವರಿಗೆ ದೊರೆತಿತ್ತು. ಸಿದ್ದಿಕಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಗುರುತಿಸಲ್ಪಟ್ಟ ಭಾರತೀಯ ಪತ್ರಕರ್ತರಲ್ಲಿ ಒಬ್ಬರಾಗಿದ್ದರು.

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...