Homeಕರ್ನಾಟಕಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

ಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

- Advertisement -
- Advertisement -

“ಕರಾಳ ಯುಎಪಿಎ ವಿರೋಧಿ ಸಮಾನ ಮನಸ್ಕರ ವೇದಿಕೆ” ಆಶ್ರಯದಲ್ಲಿ ಹೋರಾಟಗಾರ ಫಾದರ್‌ ಸ್ಟಾನ್ ಸ್ವಾಮಿಯವರ ಶ್ರದ್ಧಾಂಜಲಿ ಹಾಗೂ ಸಾರ್ವಜನಿಕ ಹಕ್ಕೊತ್ತಾಯದ ಬಹಿರಂಗ ಸಭೆ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಬುಧವಾರ ನಡೆಯಿತು. ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಹಾಗೂ ನೂರಾರು ಮಂದಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಕರಾಳ UAPA, NIA ರದ್ದಾಗಬೇಕು ಮತ್ತು ಬಂಧಿತ ಹೋರಾಟಗಾರರ ಬಿಡುಗಡೆಯಾಗಬೇಕು ಎಂದು ಆಗ್ರಹಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ವಕೀಲ ಕೆ. ಬಾಲನ್, “ಯುಎಪಿಎ ಮತ್ತು ಎನ್‌ಐಎ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿಯೇ ಕಾಯ್ದೆಯಾಗಿ ಬಂದಿತ್ತು. ಅದರೊಳಗೆ ಜಗತ್ತಿನ ಎಲ್ಲೂ ಇಲ್ಲದ ಅತಿ ಕ್ರೂರವೂ, ಮಾನವೀಯತೆಗೆ ವಿರುದ್ಧವೂ ಆದ ಮತ್ತಷ್ಟು ಕಲಂಗಳನ್ನು ಕಾಲಕಾಲಕ್ಕೆ ಸೇರಿಸಿದ್ದಲ್ಲದೆ, ಅದರ ನಿರಾತಂಕ ಜಾರಿಗಾಗಿ ಎನ್‌ಐಎ ತನಿಖಾ ಸಂಸ್ಥೆಯನ್ನೂ ಸ್ಥಾಪಿಸಲಾಯಿತು. ನಂತರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಇವುಗಳ ವ್ಯಾಪ್ತಿ ಮತ್ತು ಅಧಿಕಾರಗಳನ್ನು ಮತ್ತಷ್ಟು ಹಿಗ್ಗಿಸಿ ಇವತ್ತಿನ ಅಕರಾಳ ವಿಕರಾಳ ಸ್ವರೂಪಕ್ಕೆ ತಂದಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

“ಈ ಎಲ್ಲ ಪಕ್ಷಗಳಿಗೂ ನೆಲ-ಜಲ-ಖನಿಜ ಮೊದಲ್ಗೊಂಡು ದೇಶದ ಸಕಲ ಸಂಪತ್ತನ್ನೂ ದೊಡ್ಡ ಬಂಡವಾಳಿಗ ಕಾರ್ಪೊರೇಟ್ ಶಕ್ತಿಗಳಿಗೆ ಬಿಡಿಗಾಸಿಗೆ ಧಾರೆ ಎರೆಯುವುದು ಹಾಗೂ ಅದನ್ನು ವಿರೋಧಿಸುವ ಆದಿವಾಸಿ-ದಲಿತ-ಅಲ್ಪಸಂಖ್ಯಾತ ಮತ್ತಿತರ ಸಮುದಾಯಗಳು ಮತ್ತು ಪ್ರಜಾತಾಂತ್ರಿಕ ಸಂಘಟನೆಗಳನ್ನು ಬಗ್ಗುಬಡಿಯುವುದಕ್ಕಾಗಿ ಇಂತಹ ಘೋರ ಕಾಯಿದೆ ಅಗತ್ಯವಾಗಿದೆ” ಎಂದು ಬಾಲನ್‌ ಹೇಳಿದರು.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಮಾತನಾಡಿ, ‘‘ಸ್ಟಾನ್ ಸ್ವಾಮಿಯಂತಹ ಧೀಮಂತ ಸಂತನ ಕ್ರೂರ ಕೊಲೆಗೆ ಶ್ರದ್ಧಾಂಜಲಿ ಸಲ್ಲಿಸುವುದು ಮತ್ತು ಇಂತಹ ಕಾಯ್ದೆಗಳ ವಿರುದ್ಧ ಮಾತನಾಡುವುದು ಕೂಡ ದೇಶದ್ರೋಹ ಎಂಬ ರೀತಿಯ ಪ್ರಚಾರವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಈಗಾಗಲೇ ಅದರ ವಿವಿಧ ರೂಪಗಳಲ್ಲಿ ರದ್ದಾಗಿರುವ ಯುಎಪಿಎಯನ್ನು ಕೂಡಲೇ ರದ್ದು ಮಾಡುವಂತೆ ನಾವೆಲ್ಲರೂ ನಿರಂತರ ಹೋರಾಟ ಮಾಡದಿದ್ದರೆ ಈ ದೇಶದಲ್ಲಿ ಜನಸಾಮಾನ್ಯರಿಗೆ ಭವಿಷ್ಯವೇ ಇಲ್ಲದಂತಾಗುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಈ ಲಾಭಬಡುಕರು ಏನನ್ನೂ ಉಳಿಸುವುದಿಲ್ಲ. ಯುಎಪಿಎ ಮತ್ತು ಎನ್‌ಐಎ ರದ್ದಾಗಲೇಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಿಯುಸಿಎಲ್‌ನ ಪ್ರೊ.ವೈ.ಜೆ.ರಾಜೇಂದ್ರ ಮಾತನಾಡಿ, “ವಿಚಾರಣೆಯಾಗಲಿ ಜಾಮೀನಾಗಲಿ ಇಲ್ಲದೆ, ಚಿಕಿತ್ಸೆಗೆ ಅವಕಾಶವನ್ನೂ ನೀಡದೆ, ಸ್ಟಾನ್ ಸ್ವಾಮಿ ಅವರನ್ನು ಅಮಾನುಷ ಹಿಂಸೆಗೆ ಈಡುಮಾಡಿ ಕೊಂದಿದ್ದರಲ್ಲಿ, ಎನ್‌ಐಎ ಅಧಿಕಾರಿಗಳು ಮತ್ತು ಸ್ಥಳೀಯ ಕೋರ್ಟುಗಳು ಮಾತ್ರವಲ್ಲ, ಹೈಕೋರ್ಟಿನಂತಹ ಉನ್ನತ ನ್ಯಾಯಾಲಯ ಕೂಡ ಭಾಗೀದಾರನಾಗಿದೆ. ಹೀಗಾಗಿ ಈ ಕುರಿತು ಉನ್ನತ ವಿಚಾರಣೆ ನಡೆದು ಎಲ್ಲ ತಪ್ಪಿತಸ್ಥರಿಗೂ ಶಿಕ್ಷೆಯಾಗಬೇಕು. ಯುಎಪಿಎ ಮತ್ತು ಎನ್‌ಐಎ ರದ್ದಾಗಬೇಕು, ಎಲ್ಲ ರಾಜಕೀಯ ಕೈದಿಗಳನ್ನೂ ಬೇಷರತ್ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ನಮ್ಮ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟ ರಾಜ್ಯದಾದ್ಯಂತ ನಡೆಯಬೇಕಿದೆ. ಅದಕ್ಕಾಗಿ ಇನ್ನೂ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸಿ, ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಸಮಾನ ಮನಸ್ಕ ಸಂಘಟನೆಗಳೂ ಒಗ್ಗೂಡಬೇಕಿದೆ. ಜನಸಾಮಾನ್ಯರೂ ಸ್ವಯಂಪ್ರೇರಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕಿದೆ” ಎಂದು ಹೋರಾಟಗಾರ ಸಿರಿಮನೆ ನಾಗರಾಜ್ ಮನವಿ ಮಾಡಿದರು.

ದಲಿತ ಹಕ್ಕುಗಳ ಹೋರಾಟಗಾರ ಎಸ್. ಗೋಪಾಲ್, ಪ್ರೊ. ಎನ್.ವಿ. ನರಸಿಂಹಯ್ಯ ಮಾತನಾಡಿ ಸ್ಟಾನ್ ಸ್ವಾಮಿಯವರ ಹತ್ಯೆಯನ್ನು ಖಂಡಿಸಿ, ಯುಎಪಿಎ ಮತ್ತು ಎನ್‌ಐಎ ರದ್ದತಿಗಾಗಿ ಒತ್ತಾಯಿಸಿದರು. ಮಾನವ ಹಕ್ಕು ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ಸ್ವಾಗತಿಸಿ ವಂದಿಸಿದರು.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ಶ್ರದ್ಧಾಂಜಲಿ; ವಿಚಾರಣಾಧೀನ ಕೈದಿಯಾಗಿ ಭಾರತರತ್ನವೊಂದರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...