Homeಕರ್ನಾಟಕಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

ಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

- Advertisement -
- Advertisement -

“ಕರಾಳ ಯುಎಪಿಎ ವಿರೋಧಿ ಸಮಾನ ಮನಸ್ಕರ ವೇದಿಕೆ” ಆಶ್ರಯದಲ್ಲಿ ಹೋರಾಟಗಾರ ಫಾದರ್‌ ಸ್ಟಾನ್ ಸ್ವಾಮಿಯವರ ಶ್ರದ್ಧಾಂಜಲಿ ಹಾಗೂ ಸಾರ್ವಜನಿಕ ಹಕ್ಕೊತ್ತಾಯದ ಬಹಿರಂಗ ಸಭೆ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಬುಧವಾರ ನಡೆಯಿತು. ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಹಾಗೂ ನೂರಾರು ಮಂದಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಕರಾಳ UAPA, NIA ರದ್ದಾಗಬೇಕು ಮತ್ತು ಬಂಧಿತ ಹೋರಾಟಗಾರರ ಬಿಡುಗಡೆಯಾಗಬೇಕು ಎಂದು ಆಗ್ರಹಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ವಕೀಲ ಕೆ. ಬಾಲನ್, “ಯುಎಪಿಎ ಮತ್ತು ಎನ್‌ಐಎ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿಯೇ ಕಾಯ್ದೆಯಾಗಿ ಬಂದಿತ್ತು. ಅದರೊಳಗೆ ಜಗತ್ತಿನ ಎಲ್ಲೂ ಇಲ್ಲದ ಅತಿ ಕ್ರೂರವೂ, ಮಾನವೀಯತೆಗೆ ವಿರುದ್ಧವೂ ಆದ ಮತ್ತಷ್ಟು ಕಲಂಗಳನ್ನು ಕಾಲಕಾಲಕ್ಕೆ ಸೇರಿಸಿದ್ದಲ್ಲದೆ, ಅದರ ನಿರಾತಂಕ ಜಾರಿಗಾಗಿ ಎನ್‌ಐಎ ತನಿಖಾ ಸಂಸ್ಥೆಯನ್ನೂ ಸ್ಥಾಪಿಸಲಾಯಿತು. ನಂತರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಇವುಗಳ ವ್ಯಾಪ್ತಿ ಮತ್ತು ಅಧಿಕಾರಗಳನ್ನು ಮತ್ತಷ್ಟು ಹಿಗ್ಗಿಸಿ ಇವತ್ತಿನ ಅಕರಾಳ ವಿಕರಾಳ ಸ್ವರೂಪಕ್ಕೆ ತಂದಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

“ಈ ಎಲ್ಲ ಪಕ್ಷಗಳಿಗೂ ನೆಲ-ಜಲ-ಖನಿಜ ಮೊದಲ್ಗೊಂಡು ದೇಶದ ಸಕಲ ಸಂಪತ್ತನ್ನೂ ದೊಡ್ಡ ಬಂಡವಾಳಿಗ ಕಾರ್ಪೊರೇಟ್ ಶಕ್ತಿಗಳಿಗೆ ಬಿಡಿಗಾಸಿಗೆ ಧಾರೆ ಎರೆಯುವುದು ಹಾಗೂ ಅದನ್ನು ವಿರೋಧಿಸುವ ಆದಿವಾಸಿ-ದಲಿತ-ಅಲ್ಪಸಂಖ್ಯಾತ ಮತ್ತಿತರ ಸಮುದಾಯಗಳು ಮತ್ತು ಪ್ರಜಾತಾಂತ್ರಿಕ ಸಂಘಟನೆಗಳನ್ನು ಬಗ್ಗುಬಡಿಯುವುದಕ್ಕಾಗಿ ಇಂತಹ ಘೋರ ಕಾಯಿದೆ ಅಗತ್ಯವಾಗಿದೆ” ಎಂದು ಬಾಲನ್‌ ಹೇಳಿದರು.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಮಾತನಾಡಿ, ‘‘ಸ್ಟಾನ್ ಸ್ವಾಮಿಯಂತಹ ಧೀಮಂತ ಸಂತನ ಕ್ರೂರ ಕೊಲೆಗೆ ಶ್ರದ್ಧಾಂಜಲಿ ಸಲ್ಲಿಸುವುದು ಮತ್ತು ಇಂತಹ ಕಾಯ್ದೆಗಳ ವಿರುದ್ಧ ಮಾತನಾಡುವುದು ಕೂಡ ದೇಶದ್ರೋಹ ಎಂಬ ರೀತಿಯ ಪ್ರಚಾರವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಈಗಾಗಲೇ ಅದರ ವಿವಿಧ ರೂಪಗಳಲ್ಲಿ ರದ್ದಾಗಿರುವ ಯುಎಪಿಎಯನ್ನು ಕೂಡಲೇ ರದ್ದು ಮಾಡುವಂತೆ ನಾವೆಲ್ಲರೂ ನಿರಂತರ ಹೋರಾಟ ಮಾಡದಿದ್ದರೆ ಈ ದೇಶದಲ್ಲಿ ಜನಸಾಮಾನ್ಯರಿಗೆ ಭವಿಷ್ಯವೇ ಇಲ್ಲದಂತಾಗುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಈ ಲಾಭಬಡುಕರು ಏನನ್ನೂ ಉಳಿಸುವುದಿಲ್ಲ. ಯುಎಪಿಎ ಮತ್ತು ಎನ್‌ಐಎ ರದ್ದಾಗಲೇಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಿಯುಸಿಎಲ್‌ನ ಪ್ರೊ.ವೈ.ಜೆ.ರಾಜೇಂದ್ರ ಮಾತನಾಡಿ, “ವಿಚಾರಣೆಯಾಗಲಿ ಜಾಮೀನಾಗಲಿ ಇಲ್ಲದೆ, ಚಿಕಿತ್ಸೆಗೆ ಅವಕಾಶವನ್ನೂ ನೀಡದೆ, ಸ್ಟಾನ್ ಸ್ವಾಮಿ ಅವರನ್ನು ಅಮಾನುಷ ಹಿಂಸೆಗೆ ಈಡುಮಾಡಿ ಕೊಂದಿದ್ದರಲ್ಲಿ, ಎನ್‌ಐಎ ಅಧಿಕಾರಿಗಳು ಮತ್ತು ಸ್ಥಳೀಯ ಕೋರ್ಟುಗಳು ಮಾತ್ರವಲ್ಲ, ಹೈಕೋರ್ಟಿನಂತಹ ಉನ್ನತ ನ್ಯಾಯಾಲಯ ಕೂಡ ಭಾಗೀದಾರನಾಗಿದೆ. ಹೀಗಾಗಿ ಈ ಕುರಿತು ಉನ್ನತ ವಿಚಾರಣೆ ನಡೆದು ಎಲ್ಲ ತಪ್ಪಿತಸ್ಥರಿಗೂ ಶಿಕ್ಷೆಯಾಗಬೇಕು. ಯುಎಪಿಎ ಮತ್ತು ಎನ್‌ಐಎ ರದ್ದಾಗಬೇಕು, ಎಲ್ಲ ರಾಜಕೀಯ ಕೈದಿಗಳನ್ನೂ ಬೇಷರತ್ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ನಮ್ಮ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟ ರಾಜ್ಯದಾದ್ಯಂತ ನಡೆಯಬೇಕಿದೆ. ಅದಕ್ಕಾಗಿ ಇನ್ನೂ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸಿ, ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಸಮಾನ ಮನಸ್ಕ ಸಂಘಟನೆಗಳೂ ಒಗ್ಗೂಡಬೇಕಿದೆ. ಜನಸಾಮಾನ್ಯರೂ ಸ್ವಯಂಪ್ರೇರಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕಿದೆ” ಎಂದು ಹೋರಾಟಗಾರ ಸಿರಿಮನೆ ನಾಗರಾಜ್ ಮನವಿ ಮಾಡಿದರು.

ದಲಿತ ಹಕ್ಕುಗಳ ಹೋರಾಟಗಾರ ಎಸ್. ಗೋಪಾಲ್, ಪ್ರೊ. ಎನ್.ವಿ. ನರಸಿಂಹಯ್ಯ ಮಾತನಾಡಿ ಸ್ಟಾನ್ ಸ್ವಾಮಿಯವರ ಹತ್ಯೆಯನ್ನು ಖಂಡಿಸಿ, ಯುಎಪಿಎ ಮತ್ತು ಎನ್‌ಐಎ ರದ್ದತಿಗಾಗಿ ಒತ್ತಾಯಿಸಿದರು. ಮಾನವ ಹಕ್ಕು ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ಸ್ವಾಗತಿಸಿ ವಂದಿಸಿದರು.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ಶ್ರದ್ಧಾಂಜಲಿ; ವಿಚಾರಣಾಧೀನ ಕೈದಿಯಾಗಿ ಭಾರತರತ್ನವೊಂದರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...