Homeಮುಖಪುಟ4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

- Advertisement -
- Advertisement -

ಸೋಮವಾರ ಸರ್ಕಾರ ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ಆರ್ಥಿಕತೆಯು ಈ ವರ್ಷ ಶೇಕಡಾ 7.3 ರಷ್ಟು ಕುಗ್ಗಿದೆ ಎಂದು ತೋರಿಸಿವೆ. ನಾಲ್ಕು ದಶಕಗಳಲ್ಲಿ ಇದು ಕೆಟ್ಟ ಸಾಧನೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

‘2020-21ರ ಆರ್ಥಿಕ ವರ್ಷವು, ನಾಲ್ಕು ದಶಕಗಳಲ್ಲಿ ಆರ್ಥಿಕತೆಯ ಕರಾಳ ವರ್ಷ. ಇದು ದಾಖಲೆಯ ಋಣಾತ್ಮಕ ಬೆಳವಣಿಗೆಗೆ ಕಾರಣವಾಗಿದೆ ಮತ್ತು ಎರಡು ವರ್ಷಗಳ ಹಿಂದೆ ಇದ್ದ ಬಡ ಭಾರತೀಯರಿಗಿಂತ ಹೆಚ್ಚಿನ ಭಾರತೀಯರನ್ನು ಬಡವರನ್ನಾಗಿ ಮಾಡಿದೆ” ಎಂದು ಕಾಂಗ್ರೆಸ್ ಸಂಸದ ಪಿ.ಚಿದಂಬರಂ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ..

ಚಿದಂಬರಂ ಅವರು ಜನರನ್ನು ದಾರಿತಪ್ಪಿಸಿದ್ದಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “2020-21 ನಾಲ್ಕು ದಶಕಗಳಲ್ಲಿ ಆರ್ಥಿಕತೆಯ ಕರಾಳ ವರ್ಷವಾಗಿದೆ. ನಾಲ್ಕು ತ್ರೈಮಾಸಿಕಗಳಲ್ಲಿನ ಸಾಧನೆ ಈ ಕಥೆಯನ್ನು ಹೇಳುತ್ತದೆ. ಮೊದಲ ಎರಡು ತ್ರೈಮಾಸಿಕಗಳು ಆರ್ಥಿಕ ಹಿಂಜರಿತಕ್ಕೆ ಸಾಕ್ಷಿಯಾಗಿವೆ (ಶೇಕಡಾ -24.4 ಮತ್ತು -7.4). ಮೂರನೆಯ ಮತ್ತು ನಾಲ್ಕನೇ ತ್ರೈಮಾಸಿಕಗಳು ಚೇತರಿಕೆಗೆ ಕಾರಣವಾಗಲಿಲ್ಲ” ಎಂದು ಚಿದಂಬರಂ ಹೇಳಿದ್ದಾರೆ.

“ಅಲ್ಪ ಪ್ರಮಾಣದ” ಸಕಾರಾತ್ಮಕ 3ನೇ ತ್ರೈಮಾಸಿಕ ಮತ್ತು 4ನೇ ತ್ರೈಮಾಸಿಕ ದರಗಳನ್ನು (ಶೇ.-0.5 ಮತ್ತು 1.6) ಹಿಂದಿನ ವರ್ಷದ ತ್ರೈಮಾಸಿಕಗಳ ದರಗಳ (ಶೇ.3.3 ಮತ್ತು 3.0) ಹಿನ್ನೆಲೆಯಲ್ಲಿ ನೋಡಬೇಕು’ ಎಂದು ಅವರು ಹೇಳಿದ್ದಾರೆ.

ಸೋಮವಾರ ರಾಷ್ಟ್ರೀಯ ಸಂಖ್ಯಾಶಾಸ್ತ್ರ ಕಚೇರಿ (ಎನ್‌ಎಸ್‌ಎಸ್‌ಒ) ಬಿಡುಗಡೆ ಮಾಡಿದ ಜಿಡಿಪಿ ಸಂಖ್ಯೆಗಳು ಆರ್ಥಿಕತೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 7.3 ರಷ್ಟು ಕುಗ್ಗಿದೆ ಎಂದು ತೋರಿಸಿದೆ. ಇದು 40 ವರ್ಷಗಳ ಅವಧಿಯಲ್ಲಿ ಮಾಡಿದ ಅತಿ ಕೆಟ್ಟ ಸಾಧನೆಯಾಗಿದೆ.

“ಕಳೆದ ವರ್ಷ ಸಾಂಕ್ರಾಮಿಕ ರೋಗದ ಮೊದಲ ಅಲೆ ಕಡಿಮೆಯಾದಾಗ, ಸರ್ಕಾರದ ಹಣಕಾಸು ಸಚಿವರು ಮತ್ತು ಅವರ ಮುಖ್ಯ ಆರ್ಥಿಕ ಸಲಹೆಗಾರ (ಕೆ ಸುಬ್ರಮಣಿಯನ್) ಚೇತರಿಕೆಯ ಕಥೆಯನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ಇದು ಸುಳ್ಳು ಕಥೆ ಮತ್ತು ನಾವು ಇದಕ್ಕೆ ನಮ್ಮ ಬಲವಾದ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೇವೆ, ಚೇತರಿಕೆಯ ಯಾವುದೇ ಲಕ್ಷಣಗಳಿಲ್ಲ ಎಂದು ಆಗಲೇ ಎಚ್ಚರಿಸಿದ್ದೇವೆ. ಬಡವರಿಗೆ ನೇರ ಹಣ ವರ್ಗಾವಣೆ ಸೇರಿದಂತೆ ಆರ್ಥಿಕತೆಗೆ ಬಲವಾದ ಪ್ರಚೋದನೆಯ ಅಗತ್ಯವಿದೆ ಎಂದು ನಾವು ಗಮನ ಸೆಳೆದಿದ್ದೇವೆ. ಉಚಿತ ಪಡಿತರ ವಿತರಣೆ ಮಾಡಬೇಕೆಂದು ಆಗ್ರಹಿಸಿದ್ದೇವೆ. ಆದರೆ ನಮ್ಮ ಮನವಿ ಕಿವುಡ ಸರ್ಕಾರಕ್ಕೆ ಕೇಳಲಿಲ್ಲ ಮತ್ತು ಇದರ ಫಲಿತಾಂಶವು ನಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಅವರು ಹೇಳಿದ್ದಾರೆ.

‘ತಲಾ ಜಿಡಿಪಿ ಕಳೆದ ವರ್ಷಕ್ಕಿಂತ ಶೇಕಡಾ 8.2 ರಷ್ಟು ಕುಸಿತ ಕಂಡಿದೆ. ಇದರಿಂದ ಎರಡು ವರ್ಷಗಳ ಹಿಂದೆ ಇದ್ದುದಕ್ಕಿಂತ ಹೆಚ್ಚಿನ ಭಾರತೀಯರು ಈಗ ಬಡವರಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಚಿದಂಬರಂ ಅವರು ನಿರುದ್ಯೋಗದ ಬಗ್ಗೆ CMIE ವರದಿಯನ್ನು ಎತ್ತಿ ತೋರಿಸಿದ್ದಾರೆ. ಎರಡನೇ ಕೋವಿಡ್ ಅಲೆಯಿಂದಾಗಿ ಒಂದು ಕೋಟಿಗೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳುತ್ತದೆ. ಕಳೆದ ವರ್ಷ ಜನವರಿಯಲ್ಲಿ ಸಾಂಕ್ರಾಮಿಕ ರೋಗವು ಭಾರತವನ್ನು ಅಪ್ಪಳಿಸಿದ ನಂತರ 97 ಪ್ರತಿಶತದಷ್ಟು ಕುಟುಂಬಗಳ ಆದಾಯ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

“ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕತೆಯ ದುಸ್ಥಿತಿ ಸಹಜ. ಆದರೆ ಇದು ಬಿಜೆಪಿ ನೇತೃತ್ವದ ಎನ್‌ಡಿಎಯ ಕೆಟ್ಟ ಆರ್ಥಿಕ ನಿರ್ವಹಣೆಯಿಂದ ಇನ್ನಷ್ಟು ಹೆಚ್ಚಾಗಿದೆ” ಎಂದು ಚಿದಂಬರಂ ಅಭಿಪ್ರಾಯ ಪಟ್ಟಿದ್ದಾರೆ.

‘ಸರ್ಕಾರವು ಎಚ್ಚರಗೊಳ್ಳಬೇಕು, ಅದರ ದೋಷಗಳನ್ನು ಒಪ್ಪಿಕೊಳ್ಳಬೇಕು, ಅದರ ನೀತಿಗಳನ್ನು ಹಿಂಪಡೆಯಬೇಕು ಮತ್ತು ಅರ್ಥಶಾಸ್ತ್ರಜ್ಞರು ಮತ್ತು ಪ್ರತಿಪಕ್ಷಗಳ ಸಲಹೆಯನ್ನು ಗಮನಿಸಬೇಕು” ಎಂದು ಅವರು ಎಚ್ಚರಿಸಿದ್ದಾರೆ.


ಇದನ್ನೂ ಓದಿ: 2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...