Homeಮುಖಪುಟ4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

- Advertisement -
- Advertisement -

ಸೋಮವಾರ ಸರ್ಕಾರ ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ಆರ್ಥಿಕತೆಯು ಈ ವರ್ಷ ಶೇಕಡಾ 7.3 ರಷ್ಟು ಕುಗ್ಗಿದೆ ಎಂದು ತೋರಿಸಿವೆ. ನಾಲ್ಕು ದಶಕಗಳಲ್ಲಿ ಇದು ಕೆಟ್ಟ ಸಾಧನೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

‘2020-21ರ ಆರ್ಥಿಕ ವರ್ಷವು, ನಾಲ್ಕು ದಶಕಗಳಲ್ಲಿ ಆರ್ಥಿಕತೆಯ ಕರಾಳ ವರ್ಷ. ಇದು ದಾಖಲೆಯ ಋಣಾತ್ಮಕ ಬೆಳವಣಿಗೆಗೆ ಕಾರಣವಾಗಿದೆ ಮತ್ತು ಎರಡು ವರ್ಷಗಳ ಹಿಂದೆ ಇದ್ದ ಬಡ ಭಾರತೀಯರಿಗಿಂತ ಹೆಚ್ಚಿನ ಭಾರತೀಯರನ್ನು ಬಡವರನ್ನಾಗಿ ಮಾಡಿದೆ” ಎಂದು ಕಾಂಗ್ರೆಸ್ ಸಂಸದ ಪಿ.ಚಿದಂಬರಂ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ..

ಚಿದಂಬರಂ ಅವರು ಜನರನ್ನು ದಾರಿತಪ್ಪಿಸಿದ್ದಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “2020-21 ನಾಲ್ಕು ದಶಕಗಳಲ್ಲಿ ಆರ್ಥಿಕತೆಯ ಕರಾಳ ವರ್ಷವಾಗಿದೆ. ನಾಲ್ಕು ತ್ರೈಮಾಸಿಕಗಳಲ್ಲಿನ ಸಾಧನೆ ಈ ಕಥೆಯನ್ನು ಹೇಳುತ್ತದೆ. ಮೊದಲ ಎರಡು ತ್ರೈಮಾಸಿಕಗಳು ಆರ್ಥಿಕ ಹಿಂಜರಿತಕ್ಕೆ ಸಾಕ್ಷಿಯಾಗಿವೆ (ಶೇಕಡಾ -24.4 ಮತ್ತು -7.4). ಮೂರನೆಯ ಮತ್ತು ನಾಲ್ಕನೇ ತ್ರೈಮಾಸಿಕಗಳು ಚೇತರಿಕೆಗೆ ಕಾರಣವಾಗಲಿಲ್ಲ” ಎಂದು ಚಿದಂಬರಂ ಹೇಳಿದ್ದಾರೆ.

“ಅಲ್ಪ ಪ್ರಮಾಣದ” ಸಕಾರಾತ್ಮಕ 3ನೇ ತ್ರೈಮಾಸಿಕ ಮತ್ತು 4ನೇ ತ್ರೈಮಾಸಿಕ ದರಗಳನ್ನು (ಶೇ.-0.5 ಮತ್ತು 1.6) ಹಿಂದಿನ ವರ್ಷದ ತ್ರೈಮಾಸಿಕಗಳ ದರಗಳ (ಶೇ.3.3 ಮತ್ತು 3.0) ಹಿನ್ನೆಲೆಯಲ್ಲಿ ನೋಡಬೇಕು’ ಎಂದು ಅವರು ಹೇಳಿದ್ದಾರೆ.

ಸೋಮವಾರ ರಾಷ್ಟ್ರೀಯ ಸಂಖ್ಯಾಶಾಸ್ತ್ರ ಕಚೇರಿ (ಎನ್‌ಎಸ್‌ಎಸ್‌ಒ) ಬಿಡುಗಡೆ ಮಾಡಿದ ಜಿಡಿಪಿ ಸಂಖ್ಯೆಗಳು ಆರ್ಥಿಕತೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 7.3 ರಷ್ಟು ಕುಗ್ಗಿದೆ ಎಂದು ತೋರಿಸಿದೆ. ಇದು 40 ವರ್ಷಗಳ ಅವಧಿಯಲ್ಲಿ ಮಾಡಿದ ಅತಿ ಕೆಟ್ಟ ಸಾಧನೆಯಾಗಿದೆ.

“ಕಳೆದ ವರ್ಷ ಸಾಂಕ್ರಾಮಿಕ ರೋಗದ ಮೊದಲ ಅಲೆ ಕಡಿಮೆಯಾದಾಗ, ಸರ್ಕಾರದ ಹಣಕಾಸು ಸಚಿವರು ಮತ್ತು ಅವರ ಮುಖ್ಯ ಆರ್ಥಿಕ ಸಲಹೆಗಾರ (ಕೆ ಸುಬ್ರಮಣಿಯನ್) ಚೇತರಿಕೆಯ ಕಥೆಯನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ಇದು ಸುಳ್ಳು ಕಥೆ ಮತ್ತು ನಾವು ಇದಕ್ಕೆ ನಮ್ಮ ಬಲವಾದ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೇವೆ, ಚೇತರಿಕೆಯ ಯಾವುದೇ ಲಕ್ಷಣಗಳಿಲ್ಲ ಎಂದು ಆಗಲೇ ಎಚ್ಚರಿಸಿದ್ದೇವೆ. ಬಡವರಿಗೆ ನೇರ ಹಣ ವರ್ಗಾವಣೆ ಸೇರಿದಂತೆ ಆರ್ಥಿಕತೆಗೆ ಬಲವಾದ ಪ್ರಚೋದನೆಯ ಅಗತ್ಯವಿದೆ ಎಂದು ನಾವು ಗಮನ ಸೆಳೆದಿದ್ದೇವೆ. ಉಚಿತ ಪಡಿತರ ವಿತರಣೆ ಮಾಡಬೇಕೆಂದು ಆಗ್ರಹಿಸಿದ್ದೇವೆ. ಆದರೆ ನಮ್ಮ ಮನವಿ ಕಿವುಡ ಸರ್ಕಾರಕ್ಕೆ ಕೇಳಲಿಲ್ಲ ಮತ್ತು ಇದರ ಫಲಿತಾಂಶವು ನಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಅವರು ಹೇಳಿದ್ದಾರೆ.

‘ತಲಾ ಜಿಡಿಪಿ ಕಳೆದ ವರ್ಷಕ್ಕಿಂತ ಶೇಕಡಾ 8.2 ರಷ್ಟು ಕುಸಿತ ಕಂಡಿದೆ. ಇದರಿಂದ ಎರಡು ವರ್ಷಗಳ ಹಿಂದೆ ಇದ್ದುದಕ್ಕಿಂತ ಹೆಚ್ಚಿನ ಭಾರತೀಯರು ಈಗ ಬಡವರಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಚಿದಂಬರಂ ಅವರು ನಿರುದ್ಯೋಗದ ಬಗ್ಗೆ CMIE ವರದಿಯನ್ನು ಎತ್ತಿ ತೋರಿಸಿದ್ದಾರೆ. ಎರಡನೇ ಕೋವಿಡ್ ಅಲೆಯಿಂದಾಗಿ ಒಂದು ಕೋಟಿಗೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳುತ್ತದೆ. ಕಳೆದ ವರ್ಷ ಜನವರಿಯಲ್ಲಿ ಸಾಂಕ್ರಾಮಿಕ ರೋಗವು ಭಾರತವನ್ನು ಅಪ್ಪಳಿಸಿದ ನಂತರ 97 ಪ್ರತಿಶತದಷ್ಟು ಕುಟುಂಬಗಳ ಆದಾಯ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

“ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕತೆಯ ದುಸ್ಥಿತಿ ಸಹಜ. ಆದರೆ ಇದು ಬಿಜೆಪಿ ನೇತೃತ್ವದ ಎನ್‌ಡಿಎಯ ಕೆಟ್ಟ ಆರ್ಥಿಕ ನಿರ್ವಹಣೆಯಿಂದ ಇನ್ನಷ್ಟು ಹೆಚ್ಚಾಗಿದೆ” ಎಂದು ಚಿದಂಬರಂ ಅಭಿಪ್ರಾಯ ಪಟ್ಟಿದ್ದಾರೆ.

‘ಸರ್ಕಾರವು ಎಚ್ಚರಗೊಳ್ಳಬೇಕು, ಅದರ ದೋಷಗಳನ್ನು ಒಪ್ಪಿಕೊಳ್ಳಬೇಕು, ಅದರ ನೀತಿಗಳನ್ನು ಹಿಂಪಡೆಯಬೇಕು ಮತ್ತು ಅರ್ಥಶಾಸ್ತ್ರಜ್ಞರು ಮತ್ತು ಪ್ರತಿಪಕ್ಷಗಳ ಸಲಹೆಯನ್ನು ಗಮನಿಸಬೇಕು” ಎಂದು ಅವರು ಎಚ್ಚರಿಸಿದ್ದಾರೆ.


ಇದನ್ನೂ ಓದಿ: 2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...