Homeಮುಖಪುಟ4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

- Advertisement -
- Advertisement -

ಸೋಮವಾರ ಸರ್ಕಾರ ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ಆರ್ಥಿಕತೆಯು ಈ ವರ್ಷ ಶೇಕಡಾ 7.3 ರಷ್ಟು ಕುಗ್ಗಿದೆ ಎಂದು ತೋರಿಸಿವೆ. ನಾಲ್ಕು ದಶಕಗಳಲ್ಲಿ ಇದು ಕೆಟ್ಟ ಸಾಧನೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

‘2020-21ರ ಆರ್ಥಿಕ ವರ್ಷವು, ನಾಲ್ಕು ದಶಕಗಳಲ್ಲಿ ಆರ್ಥಿಕತೆಯ ಕರಾಳ ವರ್ಷ. ಇದು ದಾಖಲೆಯ ಋಣಾತ್ಮಕ ಬೆಳವಣಿಗೆಗೆ ಕಾರಣವಾಗಿದೆ ಮತ್ತು ಎರಡು ವರ್ಷಗಳ ಹಿಂದೆ ಇದ್ದ ಬಡ ಭಾರತೀಯರಿಗಿಂತ ಹೆಚ್ಚಿನ ಭಾರತೀಯರನ್ನು ಬಡವರನ್ನಾಗಿ ಮಾಡಿದೆ” ಎಂದು ಕಾಂಗ್ರೆಸ್ ಸಂಸದ ಪಿ.ಚಿದಂಬರಂ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ..

ಚಿದಂಬರಂ ಅವರು ಜನರನ್ನು ದಾರಿತಪ್ಪಿಸಿದ್ದಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “2020-21 ನಾಲ್ಕು ದಶಕಗಳಲ್ಲಿ ಆರ್ಥಿಕತೆಯ ಕರಾಳ ವರ್ಷವಾಗಿದೆ. ನಾಲ್ಕು ತ್ರೈಮಾಸಿಕಗಳಲ್ಲಿನ ಸಾಧನೆ ಈ ಕಥೆಯನ್ನು ಹೇಳುತ್ತದೆ. ಮೊದಲ ಎರಡು ತ್ರೈಮಾಸಿಕಗಳು ಆರ್ಥಿಕ ಹಿಂಜರಿತಕ್ಕೆ ಸಾಕ್ಷಿಯಾಗಿವೆ (ಶೇಕಡಾ -24.4 ಮತ್ತು -7.4). ಮೂರನೆಯ ಮತ್ತು ನಾಲ್ಕನೇ ತ್ರೈಮಾಸಿಕಗಳು ಚೇತರಿಕೆಗೆ ಕಾರಣವಾಗಲಿಲ್ಲ” ಎಂದು ಚಿದಂಬರಂ ಹೇಳಿದ್ದಾರೆ.

“ಅಲ್ಪ ಪ್ರಮಾಣದ” ಸಕಾರಾತ್ಮಕ 3ನೇ ತ್ರೈಮಾಸಿಕ ಮತ್ತು 4ನೇ ತ್ರೈಮಾಸಿಕ ದರಗಳನ್ನು (ಶೇ.-0.5 ಮತ್ತು 1.6) ಹಿಂದಿನ ವರ್ಷದ ತ್ರೈಮಾಸಿಕಗಳ ದರಗಳ (ಶೇ.3.3 ಮತ್ತು 3.0) ಹಿನ್ನೆಲೆಯಲ್ಲಿ ನೋಡಬೇಕು’ ಎಂದು ಅವರು ಹೇಳಿದ್ದಾರೆ.

ಸೋಮವಾರ ರಾಷ್ಟ್ರೀಯ ಸಂಖ್ಯಾಶಾಸ್ತ್ರ ಕಚೇರಿ (ಎನ್‌ಎಸ್‌ಎಸ್‌ಒ) ಬಿಡುಗಡೆ ಮಾಡಿದ ಜಿಡಿಪಿ ಸಂಖ್ಯೆಗಳು ಆರ್ಥಿಕತೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 7.3 ರಷ್ಟು ಕುಗ್ಗಿದೆ ಎಂದು ತೋರಿಸಿದೆ. ಇದು 40 ವರ್ಷಗಳ ಅವಧಿಯಲ್ಲಿ ಮಾಡಿದ ಅತಿ ಕೆಟ್ಟ ಸಾಧನೆಯಾಗಿದೆ.

“ಕಳೆದ ವರ್ಷ ಸಾಂಕ್ರಾಮಿಕ ರೋಗದ ಮೊದಲ ಅಲೆ ಕಡಿಮೆಯಾದಾಗ, ಸರ್ಕಾರದ ಹಣಕಾಸು ಸಚಿವರು ಮತ್ತು ಅವರ ಮುಖ್ಯ ಆರ್ಥಿಕ ಸಲಹೆಗಾರ (ಕೆ ಸುಬ್ರಮಣಿಯನ್) ಚೇತರಿಕೆಯ ಕಥೆಯನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ಇದು ಸುಳ್ಳು ಕಥೆ ಮತ್ತು ನಾವು ಇದಕ್ಕೆ ನಮ್ಮ ಬಲವಾದ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೇವೆ, ಚೇತರಿಕೆಯ ಯಾವುದೇ ಲಕ್ಷಣಗಳಿಲ್ಲ ಎಂದು ಆಗಲೇ ಎಚ್ಚರಿಸಿದ್ದೇವೆ. ಬಡವರಿಗೆ ನೇರ ಹಣ ವರ್ಗಾವಣೆ ಸೇರಿದಂತೆ ಆರ್ಥಿಕತೆಗೆ ಬಲವಾದ ಪ್ರಚೋದನೆಯ ಅಗತ್ಯವಿದೆ ಎಂದು ನಾವು ಗಮನ ಸೆಳೆದಿದ್ದೇವೆ. ಉಚಿತ ಪಡಿತರ ವಿತರಣೆ ಮಾಡಬೇಕೆಂದು ಆಗ್ರಹಿಸಿದ್ದೇವೆ. ಆದರೆ ನಮ್ಮ ಮನವಿ ಕಿವುಡ ಸರ್ಕಾರಕ್ಕೆ ಕೇಳಲಿಲ್ಲ ಮತ್ತು ಇದರ ಫಲಿತಾಂಶವು ನಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಅವರು ಹೇಳಿದ್ದಾರೆ.

‘ತಲಾ ಜಿಡಿಪಿ ಕಳೆದ ವರ್ಷಕ್ಕಿಂತ ಶೇಕಡಾ 8.2 ರಷ್ಟು ಕುಸಿತ ಕಂಡಿದೆ. ಇದರಿಂದ ಎರಡು ವರ್ಷಗಳ ಹಿಂದೆ ಇದ್ದುದಕ್ಕಿಂತ ಹೆಚ್ಚಿನ ಭಾರತೀಯರು ಈಗ ಬಡವರಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಚಿದಂಬರಂ ಅವರು ನಿರುದ್ಯೋಗದ ಬಗ್ಗೆ CMIE ವರದಿಯನ್ನು ಎತ್ತಿ ತೋರಿಸಿದ್ದಾರೆ. ಎರಡನೇ ಕೋವಿಡ್ ಅಲೆಯಿಂದಾಗಿ ಒಂದು ಕೋಟಿಗೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳುತ್ತದೆ. ಕಳೆದ ವರ್ಷ ಜನವರಿಯಲ್ಲಿ ಸಾಂಕ್ರಾಮಿಕ ರೋಗವು ಭಾರತವನ್ನು ಅಪ್ಪಳಿಸಿದ ನಂತರ 97 ಪ್ರತಿಶತದಷ್ಟು ಕುಟುಂಬಗಳ ಆದಾಯ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

“ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕತೆಯ ದುಸ್ಥಿತಿ ಸಹಜ. ಆದರೆ ಇದು ಬಿಜೆಪಿ ನೇತೃತ್ವದ ಎನ್‌ಡಿಎಯ ಕೆಟ್ಟ ಆರ್ಥಿಕ ನಿರ್ವಹಣೆಯಿಂದ ಇನ್ನಷ್ಟು ಹೆಚ್ಚಾಗಿದೆ” ಎಂದು ಚಿದಂಬರಂ ಅಭಿಪ್ರಾಯ ಪಟ್ಟಿದ್ದಾರೆ.

‘ಸರ್ಕಾರವು ಎಚ್ಚರಗೊಳ್ಳಬೇಕು, ಅದರ ದೋಷಗಳನ್ನು ಒಪ್ಪಿಕೊಳ್ಳಬೇಕು, ಅದರ ನೀತಿಗಳನ್ನು ಹಿಂಪಡೆಯಬೇಕು ಮತ್ತು ಅರ್ಥಶಾಸ್ತ್ರಜ್ಞರು ಮತ್ತು ಪ್ರತಿಪಕ್ಷಗಳ ಸಲಹೆಯನ್ನು ಗಮನಿಸಬೇಕು” ಎಂದು ಅವರು ಎಚ್ಚರಿಸಿದ್ದಾರೆ.


ಇದನ್ನೂ ಓದಿ: 2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...