Homeದಲಿತ್ ಫೈಲ್ಸ್ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

“ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ” ಎಂದು ಮಹಾರಾಷ್ಟ್ರ ಸಿಎಂಗೆ ದರ್ಶನ್‌ ಸೋಲಂಕಿಯವರ ಕುಟುಂಬ ಪತ್ರ ಬರೆದಿದೆ

- Advertisement -
- Advertisement -

ಬಾಂಬೆ ಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್‌ ಸೋಲಂಕಿ ಅವರ ಕುಟುಂಬ ಮತ್ತಷ್ಟು ಸಮಸ್ಯೆಗಳಿಗೆ ಎದುರಾಗಿದೆ. “ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಐಐಟಿ ಬಾಂಬೆಯಲ್ಲಿ ದರ್ಶನ್‌ ಜಾತಿ ತಾರತಮ್ಯವನ್ನು ಎದುರಿಸುತ್ತಿದ್ದರು ಎಂದು ಅವರ ಕುಟುಂಬ ಹೇಳಿಕೊಂಡಿತ್ತು. ಆದಾಗ್ಯೂ, ಐಐಟಿ-ಬಾಂಬೆ ಸ್ಥಾಪಿಸಿದ ತನಿಖಾ ಸಮಿತಿಯು ಈ ಆರೋಪವನ್ನು ನಿರಾಕರಿಸಿದೆ. ಸೋಲಂಕಿಯವರು ಶೈಕ್ಷಣಿಕವಾಗಿ ಹಿಂದುಳಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಸಮಿತಿ ಹೇಳಿಕೊಂಡಿದೆ.

ಈ ಎಲ್ಲ ಬೆಳವಣಿಗೆಗಳ ನಂತರ ಮತ್ತೊಂದು ಸಂಗತಿ ಹೊರಬಿದ್ದಿತ್ತು. ಸೋಲಂಕಿಯವರ ಜೊತೆಯಲ್ಲಿ ಈ ಹಿಂದೆ ಮಾತನಾಡಿದ್ದ ಹಿರಿಯ ವಿದ್ಯಾರ್ಥಿಯೊಬ್ಬರ ಆಡಿಯೊ ಕುರಿತು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು. ತಮ್ಮ ಹಾಸ್ಟೆಲ್ ರೂಮ್‌ ಬದಲಿಸಬೇಕೆಂದು, ರೂಮ್‌ಮೇಟ್‌ ಜಾತಿ ತಾರತಮ್ಯ ಎಸಗುತ್ತಿದ್ದಾನೆಂದು ಸೋಲಂಕಿ ಹೇಳಿಕೊಂಡಿದ್ದಾಗಿ ಆ ಆಡಿಯೊ ಸಂಭಾಷಣೆ ಬಹಿರಂಗಪಡಿಸಿತ್ತು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದಾರೆ.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದು, “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ದಲಿತ ವಿದ್ಯಾರ್ಥಿಯ ಕೊಠಡಿಯಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಸೋಲಂಕಿ ಅವರ ಸಹಪಾಠಿಯೊಬ್ಬರನ್ನು ಅದರಲ್ಲಿ ಹೆಸರಿಸಲಾಗಿದೆ ಎಂದು ಸೋಮವಾರ ಎಸ್‌ಐಟಿ ಹೇಳಿಕೊಂಡಿತ್ತು.

ಸೋಲಂಕಿ ಅವರ ಉತ್ತರ ಪತ್ರಿಕೆಗಳು ಮತ್ತು ಅವರ ಕೆಲವು ಹಳೆಯ ನೋಟ್‌ಬುಕ್‌ಗಳನ್ನು ವಶಕ್ಕೆ ಪಡೆದು ಸೂಸೈಡ್ ನೋಟ್‌ನಲ್ಲಿನ ಕೈಬರಹವನ್ನು ಹೋಲಿಕೆ ಮಾಡಲು ಎಸ್‌ಐಟಿ ಮುಂದಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...