Homeದಲಿತ್ ಫೈಲ್ಸ್ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

“ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ” ಎಂದು ಮಹಾರಾಷ್ಟ್ರ ಸಿಎಂಗೆ ದರ್ಶನ್‌ ಸೋಲಂಕಿಯವರ ಕುಟುಂಬ ಪತ್ರ ಬರೆದಿದೆ

- Advertisement -
- Advertisement -

ಬಾಂಬೆ ಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್‌ ಸೋಲಂಕಿ ಅವರ ಕುಟುಂಬ ಮತ್ತಷ್ಟು ಸಮಸ್ಯೆಗಳಿಗೆ ಎದುರಾಗಿದೆ. “ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಐಐಟಿ ಬಾಂಬೆಯಲ್ಲಿ ದರ್ಶನ್‌ ಜಾತಿ ತಾರತಮ್ಯವನ್ನು ಎದುರಿಸುತ್ತಿದ್ದರು ಎಂದು ಅವರ ಕುಟುಂಬ ಹೇಳಿಕೊಂಡಿತ್ತು. ಆದಾಗ್ಯೂ, ಐಐಟಿ-ಬಾಂಬೆ ಸ್ಥಾಪಿಸಿದ ತನಿಖಾ ಸಮಿತಿಯು ಈ ಆರೋಪವನ್ನು ನಿರಾಕರಿಸಿದೆ. ಸೋಲಂಕಿಯವರು ಶೈಕ್ಷಣಿಕವಾಗಿ ಹಿಂದುಳಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಸಮಿತಿ ಹೇಳಿಕೊಂಡಿದೆ.

ಈ ಎಲ್ಲ ಬೆಳವಣಿಗೆಗಳ ನಂತರ ಮತ್ತೊಂದು ಸಂಗತಿ ಹೊರಬಿದ್ದಿತ್ತು. ಸೋಲಂಕಿಯವರ ಜೊತೆಯಲ್ಲಿ ಈ ಹಿಂದೆ ಮಾತನಾಡಿದ್ದ ಹಿರಿಯ ವಿದ್ಯಾರ್ಥಿಯೊಬ್ಬರ ಆಡಿಯೊ ಕುರಿತು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು. ತಮ್ಮ ಹಾಸ್ಟೆಲ್ ರೂಮ್‌ ಬದಲಿಸಬೇಕೆಂದು, ರೂಮ್‌ಮೇಟ್‌ ಜಾತಿ ತಾರತಮ್ಯ ಎಸಗುತ್ತಿದ್ದಾನೆಂದು ಸೋಲಂಕಿ ಹೇಳಿಕೊಂಡಿದ್ದಾಗಿ ಆ ಆಡಿಯೊ ಸಂಭಾಷಣೆ ಬಹಿರಂಗಪಡಿಸಿತ್ತು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದಾರೆ.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದು, “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ದಲಿತ ವಿದ್ಯಾರ್ಥಿಯ ಕೊಠಡಿಯಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಸೋಲಂಕಿ ಅವರ ಸಹಪಾಠಿಯೊಬ್ಬರನ್ನು ಅದರಲ್ಲಿ ಹೆಸರಿಸಲಾಗಿದೆ ಎಂದು ಸೋಮವಾರ ಎಸ್‌ಐಟಿ ಹೇಳಿಕೊಂಡಿತ್ತು.

ಸೋಲಂಕಿ ಅವರ ಉತ್ತರ ಪತ್ರಿಕೆಗಳು ಮತ್ತು ಅವರ ಕೆಲವು ಹಳೆಯ ನೋಟ್‌ಬುಕ್‌ಗಳನ್ನು ವಶಕ್ಕೆ ಪಡೆದು ಸೂಸೈಡ್ ನೋಟ್‌ನಲ್ಲಿನ ಕೈಬರಹವನ್ನು ಹೋಲಿಕೆ ಮಾಡಲು ಎಸ್‌ಐಟಿ ಮುಂದಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...