Homeಮುಖಪುಟಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

- Advertisement -
- Advertisement -

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯಗಳಿಗೆ ವಿಧಾನಸಭಾ ಚುನಾವಣೆಗೆ ಕೊನೆಗೂ ದಿನಾಂಕ ನಿಗಧಿಯಾಗಿದೆ. ಚುನಾವಣಾ ಆಯೋಗವು ಫೆಬ್ರವರಿ 10 ರಿಂದ ಮಾರ್ಚ್ 07ರವರೆಗೆ 7 ಹಂತಗಳಲ್ಲಿ ಈ ಐದು ರಾಜ್ಯಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಮಾರ್ಚ್ 10 ರಂದು ಫಲಿತಾಂಶ ಘೋಷಿಸಲಾಗುವುದು ಎಂದು ತಿಳಿಸಿದೆ.

ಮೊದಲ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

ಜನವರಿ 14 ರಿಂದ ನಾಮಪತ್ರ ಪಕ್ರಿಯೆ ಆರಂಭ ಚುನಾವಣೆ ಫೆಬ್ರವರಿ 10 ರಂದು.

ಎರಡನೇ ಹಂತ (ಪಂಜಾಬ್, ಉತ್ತರಪ್ರದೇಶ, ಗೋವಾ, ಉತ್ತರಾಖಂಡಗಳಲ್ಲಿ ನಡೆಯಲಿದೆ)

ಜನವರಿ 21 ರಿಂದ ನಾಮಪತ್ರ ಪಕ್ರಿಯೆ ಆರಂಭವಾಗಲಿದ್ದು ಚುನಾವಣೆ ಫೆಬ್ರವರಿ 14 ರಂದು.

ಮೂರನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

25 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 20 ರಂದು.

ನಾಲ್ಕನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

27 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 23 ಫೆಬ್ರವರಿ

5ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

1 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 27 ರಂದು.

6ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

4ನೇ ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಮಾರ್ಚ್ 3 ರಂದು.

7ನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

10 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಮಾರ್ಚ್ 07 ರಂದು.

ಫಲಿತಾಂಶ: 10 ಮಾರ್ಚ್

ಪಂಜಾಬ್, ಗೋವಾ ಉತ್ತರಾಖಂಡ ರಾಜ್ಯಗಳು ಒಂದೇ ಹಂತದಲ್ಲಿ ಅಂದರೆ ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿವೆ. ಮಣಿಪುರ ಎರಡು ಹಂತಗಳಲ್ಲಿ ಮತ್ತು ಉತ್ತರ ಪ್ರದೇಶವು 7 ಹಂತಗಳಲ್ಲಿ ಚುನಾವಣೆ ಎದುರಿಸಲಿದೆ.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಉಲ್ಲಂಘಿಸಿದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೋವಿಡ್ ಕಾರಣಕ್ಕೆ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ನೀಡಲಾಗಿದ್ದು, ಕೋವಿಡ್ ಕಾರಣಕ್ಕೆ ನೇರವಾಗಿ ನಾಮಪತ್ರ ಸಲ್ಲಿಸುವ ಬದಲು ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದರು. ಜೊತೆಗೆ ಚುನಾವಣಾ ರ್ಯಾಲಿಗಳನ್ನು, ಪ್ರಚಾರವನ್ನು ಆದಷ್ಟು ಆನ್‌ಲೈನ್ ಮೂಲಕ ಮಾಡಲು ಮನವಿ ಮಾಡಿದರು.

ರೋಡ್ ಶೋ, ಪಾದಯಾತ್ರೆಗಳನ್ನು, ಸೈಕಲ್ ಬೈಕ್ ರ್ಯಾಲಿಗಳನ್ನು, ಚುನಾವಣಾ ಪ್ರಚಾರ ಸಭೆಗಳನ್ನು ಜನವರಿ 15ರವರೆಗೂ ನಡೆಸಬಾರದು ಎಂದು ಆಯೋಗ ತಾಕೀತು ಮಾಡಿದೆ. ನಂತರ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಮನೆ ಮನೆ ಪ್ರಚಾರಕ್ಕೆ ಕೇವಲ 05 ಜನರಿಗೆ ಮಾತ್ರ ಅವಕಾಶವಿರುತ್ತದೆ. ಫಲಿತಾಂಶದ ನಂತರ ವಿಜಯೋತ್ಸವ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮತ ಎಣಿಕೆ ಕೇಂದ್ರಕ್ಕೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಖ್ಯ ಚುನಾವಣಾಧಿಕಾರಿ ಸುಶೀಲ್ ಚಂದ್ರರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿವು ಜವಾಬ್ದಾರಿಯನ್ನು ಚುನಾವಣಾ ಆಯೋಗಕ್ಕೆ ಸಂವಿಧಾನ ನೀಡಿದೆ. ಕಳೆದ ಎರಡು ವರ್ಷದಿಂದ ಕೋವಿಡ್ ಕಾರಣಕ್ಕೆ ಇದು ಸರಿಯಾಗಿ ನಡೆಸಲಾಗುತ್ತಿಲ್ಲ. ಮುಂದಿನ ಚುನಾವಣೆಗಳಿಗೆ ಸಮರ್ಪಕ ಪ್ರೊಟೋಕಾಲ್ ಅಳವಡಿಸಲಾಗುವುದು” ಎಂದರು.

ಕೋವಿಡ್ ರಕ್ಷಣೆ ಚುನಾವಣೆ, ಮುಕ್ತು ಚುನಾವಣೆ ಅತಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಮಾಡುವುದಕ್ಕಾಗಿ ಕಳೆದ 6 ತಿಂಗಳಿನಿಂದ ಚುನಾವಣಾ ಆಯೋಗ ಕೆಲಸ ಮಾಡಿದ್ದೇವೆ ಎಂದರು. ಎಲ್ಲಾ ರಾಜ್ಯಗಳಿಗೆ ಭೇಟಿ ಮಾಡಿ ರಾಜಕೀಯ ಪಕ್ಷಗಳು ಮತ್ತು ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದಿದ್ದೇವೆ ಎಂದು ತಿಳಿಸಿದರು.

ಗೋವಾದ 40 ಸ್ಥಾನಗಳಿಗೆ, ಮಣಿಪುರದ 60 ಕ್ಷೇತ್ರಗಳಿಗೆ, ಉತ್ತರಾಖಂಡದ 70 ಕ್ಷೇತ್ರಗಳಿಗೆ, ಪಂಜಾಬ್‌ನ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 403 ಸ್ಥಾನಗಳಿಗೆ ಸೇರಿ ಒಟ್ಟು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಒಟ್ಟು 18.34 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಪಂಜಾಬ್, ಉತ್ತರಪ್ರದೇಶ ಮತ್ತು ಉತ್ತರಾಖಂಡದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಗರಿಷ್ಠ 40 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು. ಗೋವಾ ಮತ್ತು ಮಣಿಪುರದ ಅಭ್ಯರ್ಥಿಗಳು ಗರಿಷ್ಠ 28 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು ಎಂದು ಆಯೋಗ ತಿಳಿಸಿದೆ.

ಜನವರ 07ರ ಮಾಹಿತಿಯಂತೆ ಈ ಐದು ರಾಜ್ಯಗಳಲ್ಲಿ 15 ಕೋಟಿ ಜನರು ಮೊದಲ ಡೋಸ್ ಲಸಿಕೆ ಮತ್ತು ಸುಮಾರು 9 ಕೋಟಿ ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.

ಗೋವಾ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದ್ದು, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆಯ ಚುನಾವಣೆಯು ಮಾರ್ಚ್ 23ರವರೆಗೆ ಮತ್ತು ಯುಪಿ ವಿಧಾನಸಭೆಯ ಅಧಿಕಾರಾವಧಿಯು ಮೇ 14 ರವರೆಗೆ ಇರುತ್ತದೆ.

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.


ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಐಐಎಂ ವಿದ್ಯಾರ್ಥಿಗಳು,…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....