Homeಮುಖಪುಟಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

- Advertisement -
- Advertisement -

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯಗಳಿಗೆ ವಿಧಾನಸಭಾ ಚುನಾವಣೆಗೆ ಕೊನೆಗೂ ದಿನಾಂಕ ನಿಗಧಿಯಾಗಿದೆ. ಚುನಾವಣಾ ಆಯೋಗವು ಫೆಬ್ರವರಿ 10 ರಿಂದ ಮಾರ್ಚ್ 07ರವರೆಗೆ 7 ಹಂತಗಳಲ್ಲಿ ಈ ಐದು ರಾಜ್ಯಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಮಾರ್ಚ್ 10 ರಂದು ಫಲಿತಾಂಶ ಘೋಷಿಸಲಾಗುವುದು ಎಂದು ತಿಳಿಸಿದೆ.

ಮೊದಲ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

ಜನವರಿ 14 ರಿಂದ ನಾಮಪತ್ರ ಪಕ್ರಿಯೆ ಆರಂಭ ಚುನಾವಣೆ ಫೆಬ್ರವರಿ 10 ರಂದು.

ಎರಡನೇ ಹಂತ (ಪಂಜಾಬ್, ಉತ್ತರಪ್ರದೇಶ, ಗೋವಾ, ಉತ್ತರಾಖಂಡಗಳಲ್ಲಿ ನಡೆಯಲಿದೆ)

ಜನವರಿ 21 ರಿಂದ ನಾಮಪತ್ರ ಪಕ್ರಿಯೆ ಆರಂಭವಾಗಲಿದ್ದು ಚುನಾವಣೆ ಫೆಬ್ರವರಿ 14 ರಂದು.

ಮೂರನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

25 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 20 ರಂದು.

ನಾಲ್ಕನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

27 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 23 ಫೆಬ್ರವರಿ

5ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

1 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 27 ರಂದು.

6ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

4ನೇ ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಮಾರ್ಚ್ 3 ರಂದು.

7ನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

10 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಮಾರ್ಚ್ 07 ರಂದು.

ಫಲಿತಾಂಶ: 10 ಮಾರ್ಚ್

ಪಂಜಾಬ್, ಗೋವಾ ಉತ್ತರಾಖಂಡ ರಾಜ್ಯಗಳು ಒಂದೇ ಹಂತದಲ್ಲಿ ಅಂದರೆ ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿವೆ. ಮಣಿಪುರ ಎರಡು ಹಂತಗಳಲ್ಲಿ ಮತ್ತು ಉತ್ತರ ಪ್ರದೇಶವು 7 ಹಂತಗಳಲ್ಲಿ ಚುನಾವಣೆ ಎದುರಿಸಲಿದೆ.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಉಲ್ಲಂಘಿಸಿದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೋವಿಡ್ ಕಾರಣಕ್ಕೆ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ನೀಡಲಾಗಿದ್ದು, ಕೋವಿಡ್ ಕಾರಣಕ್ಕೆ ನೇರವಾಗಿ ನಾಮಪತ್ರ ಸಲ್ಲಿಸುವ ಬದಲು ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದರು. ಜೊತೆಗೆ ಚುನಾವಣಾ ರ್ಯಾಲಿಗಳನ್ನು, ಪ್ರಚಾರವನ್ನು ಆದಷ್ಟು ಆನ್‌ಲೈನ್ ಮೂಲಕ ಮಾಡಲು ಮನವಿ ಮಾಡಿದರು.

ರೋಡ್ ಶೋ, ಪಾದಯಾತ್ರೆಗಳನ್ನು, ಸೈಕಲ್ ಬೈಕ್ ರ್ಯಾಲಿಗಳನ್ನು, ಚುನಾವಣಾ ಪ್ರಚಾರ ಸಭೆಗಳನ್ನು ಜನವರಿ 15ರವರೆಗೂ ನಡೆಸಬಾರದು ಎಂದು ಆಯೋಗ ತಾಕೀತು ಮಾಡಿದೆ. ನಂತರ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಮನೆ ಮನೆ ಪ್ರಚಾರಕ್ಕೆ ಕೇವಲ 05 ಜನರಿಗೆ ಮಾತ್ರ ಅವಕಾಶವಿರುತ್ತದೆ. ಫಲಿತಾಂಶದ ನಂತರ ವಿಜಯೋತ್ಸವ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮತ ಎಣಿಕೆ ಕೇಂದ್ರಕ್ಕೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಖ್ಯ ಚುನಾವಣಾಧಿಕಾರಿ ಸುಶೀಲ್ ಚಂದ್ರರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿವು ಜವಾಬ್ದಾರಿಯನ್ನು ಚುನಾವಣಾ ಆಯೋಗಕ್ಕೆ ಸಂವಿಧಾನ ನೀಡಿದೆ. ಕಳೆದ ಎರಡು ವರ್ಷದಿಂದ ಕೋವಿಡ್ ಕಾರಣಕ್ಕೆ ಇದು ಸರಿಯಾಗಿ ನಡೆಸಲಾಗುತ್ತಿಲ್ಲ. ಮುಂದಿನ ಚುನಾವಣೆಗಳಿಗೆ ಸಮರ್ಪಕ ಪ್ರೊಟೋಕಾಲ್ ಅಳವಡಿಸಲಾಗುವುದು” ಎಂದರು.

ಕೋವಿಡ್ ರಕ್ಷಣೆ ಚುನಾವಣೆ, ಮುಕ್ತು ಚುನಾವಣೆ ಅತಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಮಾಡುವುದಕ್ಕಾಗಿ ಕಳೆದ 6 ತಿಂಗಳಿನಿಂದ ಚುನಾವಣಾ ಆಯೋಗ ಕೆಲಸ ಮಾಡಿದ್ದೇವೆ ಎಂದರು. ಎಲ್ಲಾ ರಾಜ್ಯಗಳಿಗೆ ಭೇಟಿ ಮಾಡಿ ರಾಜಕೀಯ ಪಕ್ಷಗಳು ಮತ್ತು ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದಿದ್ದೇವೆ ಎಂದು ತಿಳಿಸಿದರು.

ಗೋವಾದ 40 ಸ್ಥಾನಗಳಿಗೆ, ಮಣಿಪುರದ 60 ಕ್ಷೇತ್ರಗಳಿಗೆ, ಉತ್ತರಾಖಂಡದ 70 ಕ್ಷೇತ್ರಗಳಿಗೆ, ಪಂಜಾಬ್‌ನ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 403 ಸ್ಥಾನಗಳಿಗೆ ಸೇರಿ ಒಟ್ಟು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಒಟ್ಟು 18.34 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಪಂಜಾಬ್, ಉತ್ತರಪ್ರದೇಶ ಮತ್ತು ಉತ್ತರಾಖಂಡದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಗರಿಷ್ಠ 40 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು. ಗೋವಾ ಮತ್ತು ಮಣಿಪುರದ ಅಭ್ಯರ್ಥಿಗಳು ಗರಿಷ್ಠ 28 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು ಎಂದು ಆಯೋಗ ತಿಳಿಸಿದೆ.

ಜನವರ 07ರ ಮಾಹಿತಿಯಂತೆ ಈ ಐದು ರಾಜ್ಯಗಳಲ್ಲಿ 15 ಕೋಟಿ ಜನರು ಮೊದಲ ಡೋಸ್ ಲಸಿಕೆ ಮತ್ತು ಸುಮಾರು 9 ಕೋಟಿ ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.

ಗೋವಾ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದ್ದು, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆಯ ಚುನಾವಣೆಯು ಮಾರ್ಚ್ 23ರವರೆಗೆ ಮತ್ತು ಯುಪಿ ವಿಧಾನಸಭೆಯ ಅಧಿಕಾರಾವಧಿಯು ಮೇ 14 ರವರೆಗೆ ಇರುತ್ತದೆ.

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.


ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಐಐಎಂ ವಿದ್ಯಾರ್ಥಿಗಳು,…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....