Homeಮುಖಪುಟಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

- Advertisement -
- Advertisement -

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯಗಳಿಗೆ ವಿಧಾನಸಭಾ ಚುನಾವಣೆಗೆ ಕೊನೆಗೂ ದಿನಾಂಕ ನಿಗಧಿಯಾಗಿದೆ. ಚುನಾವಣಾ ಆಯೋಗವು ಫೆಬ್ರವರಿ 10 ರಿಂದ ಮಾರ್ಚ್ 07ರವರೆಗೆ 7 ಹಂತಗಳಲ್ಲಿ ಈ ಐದು ರಾಜ್ಯಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಮಾರ್ಚ್ 10 ರಂದು ಫಲಿತಾಂಶ ಘೋಷಿಸಲಾಗುವುದು ಎಂದು ತಿಳಿಸಿದೆ.

ಮೊದಲ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

ಜನವರಿ 14 ರಿಂದ ನಾಮಪತ್ರ ಪಕ್ರಿಯೆ ಆರಂಭ ಚುನಾವಣೆ ಫೆಬ್ರವರಿ 10 ರಂದು.

ಎರಡನೇ ಹಂತ (ಪಂಜಾಬ್, ಉತ್ತರಪ್ರದೇಶ, ಗೋವಾ, ಉತ್ತರಾಖಂಡಗಳಲ್ಲಿ ನಡೆಯಲಿದೆ)

ಜನವರಿ 21 ರಿಂದ ನಾಮಪತ್ರ ಪಕ್ರಿಯೆ ಆರಂಭವಾಗಲಿದ್ದು ಚುನಾವಣೆ ಫೆಬ್ರವರಿ 14 ರಂದು.

ಮೂರನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

25 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 20 ರಂದು.

ನಾಲ್ಕನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

27 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 23 ಫೆಬ್ರವರಿ

5ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

1 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 27 ರಂದು.

6ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

4ನೇ ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಮಾರ್ಚ್ 3 ರಂದು.

7ನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

10 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಮಾರ್ಚ್ 07 ರಂದು.

ಫಲಿತಾಂಶ: 10 ಮಾರ್ಚ್

ಪಂಜಾಬ್, ಗೋವಾ ಉತ್ತರಾಖಂಡ ರಾಜ್ಯಗಳು ಒಂದೇ ಹಂತದಲ್ಲಿ ಅಂದರೆ ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿವೆ. ಮಣಿಪುರ ಎರಡು ಹಂತಗಳಲ್ಲಿ ಮತ್ತು ಉತ್ತರ ಪ್ರದೇಶವು 7 ಹಂತಗಳಲ್ಲಿ ಚುನಾವಣೆ ಎದುರಿಸಲಿದೆ.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಉಲ್ಲಂಘಿಸಿದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೋವಿಡ್ ಕಾರಣಕ್ಕೆ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ನೀಡಲಾಗಿದ್ದು, ಕೋವಿಡ್ ಕಾರಣಕ್ಕೆ ನೇರವಾಗಿ ನಾಮಪತ್ರ ಸಲ್ಲಿಸುವ ಬದಲು ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದರು. ಜೊತೆಗೆ ಚುನಾವಣಾ ರ್ಯಾಲಿಗಳನ್ನು, ಪ್ರಚಾರವನ್ನು ಆದಷ್ಟು ಆನ್‌ಲೈನ್ ಮೂಲಕ ಮಾಡಲು ಮನವಿ ಮಾಡಿದರು.

ರೋಡ್ ಶೋ, ಪಾದಯಾತ್ರೆಗಳನ್ನು, ಸೈಕಲ್ ಬೈಕ್ ರ್ಯಾಲಿಗಳನ್ನು, ಚುನಾವಣಾ ಪ್ರಚಾರ ಸಭೆಗಳನ್ನು ಜನವರಿ 15ರವರೆಗೂ ನಡೆಸಬಾರದು ಎಂದು ಆಯೋಗ ತಾಕೀತು ಮಾಡಿದೆ. ನಂತರ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಮನೆ ಮನೆ ಪ್ರಚಾರಕ್ಕೆ ಕೇವಲ 05 ಜನರಿಗೆ ಮಾತ್ರ ಅವಕಾಶವಿರುತ್ತದೆ. ಫಲಿತಾಂಶದ ನಂತರ ವಿಜಯೋತ್ಸವ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮತ ಎಣಿಕೆ ಕೇಂದ್ರಕ್ಕೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಖ್ಯ ಚುನಾವಣಾಧಿಕಾರಿ ಸುಶೀಲ್ ಚಂದ್ರರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿವು ಜವಾಬ್ದಾರಿಯನ್ನು ಚುನಾವಣಾ ಆಯೋಗಕ್ಕೆ ಸಂವಿಧಾನ ನೀಡಿದೆ. ಕಳೆದ ಎರಡು ವರ್ಷದಿಂದ ಕೋವಿಡ್ ಕಾರಣಕ್ಕೆ ಇದು ಸರಿಯಾಗಿ ನಡೆಸಲಾಗುತ್ತಿಲ್ಲ. ಮುಂದಿನ ಚುನಾವಣೆಗಳಿಗೆ ಸಮರ್ಪಕ ಪ್ರೊಟೋಕಾಲ್ ಅಳವಡಿಸಲಾಗುವುದು” ಎಂದರು.

ಕೋವಿಡ್ ರಕ್ಷಣೆ ಚುನಾವಣೆ, ಮುಕ್ತು ಚುನಾವಣೆ ಅತಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಮಾಡುವುದಕ್ಕಾಗಿ ಕಳೆದ 6 ತಿಂಗಳಿನಿಂದ ಚುನಾವಣಾ ಆಯೋಗ ಕೆಲಸ ಮಾಡಿದ್ದೇವೆ ಎಂದರು. ಎಲ್ಲಾ ರಾಜ್ಯಗಳಿಗೆ ಭೇಟಿ ಮಾಡಿ ರಾಜಕೀಯ ಪಕ್ಷಗಳು ಮತ್ತು ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದಿದ್ದೇವೆ ಎಂದು ತಿಳಿಸಿದರು.

ಗೋವಾದ 40 ಸ್ಥಾನಗಳಿಗೆ, ಮಣಿಪುರದ 60 ಕ್ಷೇತ್ರಗಳಿಗೆ, ಉತ್ತರಾಖಂಡದ 70 ಕ್ಷೇತ್ರಗಳಿಗೆ, ಪಂಜಾಬ್‌ನ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 403 ಸ್ಥಾನಗಳಿಗೆ ಸೇರಿ ಒಟ್ಟು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಒಟ್ಟು 18.34 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಪಂಜಾಬ್, ಉತ್ತರಪ್ರದೇಶ ಮತ್ತು ಉತ್ತರಾಖಂಡದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಗರಿಷ್ಠ 40 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು. ಗೋವಾ ಮತ್ತು ಮಣಿಪುರದ ಅಭ್ಯರ್ಥಿಗಳು ಗರಿಷ್ಠ 28 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು ಎಂದು ಆಯೋಗ ತಿಳಿಸಿದೆ.

ಜನವರ 07ರ ಮಾಹಿತಿಯಂತೆ ಈ ಐದು ರಾಜ್ಯಗಳಲ್ಲಿ 15 ಕೋಟಿ ಜನರು ಮೊದಲ ಡೋಸ್ ಲಸಿಕೆ ಮತ್ತು ಸುಮಾರು 9 ಕೋಟಿ ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.

ಗೋವಾ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದ್ದು, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆಯ ಚುನಾವಣೆಯು ಮಾರ್ಚ್ 23ರವರೆಗೆ ಮತ್ತು ಯುಪಿ ವಿಧಾನಸಭೆಯ ಅಧಿಕಾರಾವಧಿಯು ಮೇ 14 ರವರೆಗೆ ಇರುತ್ತದೆ.

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.


ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಐಐಎಂ ವಿದ್ಯಾರ್ಥಿಗಳು,…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...