Homeಮುಖಪುಟಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

- Advertisement -
- Advertisement -

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯಗಳಿಗೆ ವಿಧಾನಸಭಾ ಚುನಾವಣೆಗೆ ಕೊನೆಗೂ ದಿನಾಂಕ ನಿಗಧಿಯಾಗಿದೆ. ಚುನಾವಣಾ ಆಯೋಗವು ಫೆಬ್ರವರಿ 10 ರಿಂದ ಮಾರ್ಚ್ 07ರವರೆಗೆ 7 ಹಂತಗಳಲ್ಲಿ ಈ ಐದು ರಾಜ್ಯಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಮಾರ್ಚ್ 10 ರಂದು ಫಲಿತಾಂಶ ಘೋಷಿಸಲಾಗುವುದು ಎಂದು ತಿಳಿಸಿದೆ.

ಮೊದಲ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

ಜನವರಿ 14 ರಿಂದ ನಾಮಪತ್ರ ಪಕ್ರಿಯೆ ಆರಂಭ ಚುನಾವಣೆ ಫೆಬ್ರವರಿ 10 ರಂದು.

ಎರಡನೇ ಹಂತ (ಪಂಜಾಬ್, ಉತ್ತರಪ್ರದೇಶ, ಗೋವಾ, ಉತ್ತರಾಖಂಡಗಳಲ್ಲಿ ನಡೆಯಲಿದೆ)

ಜನವರಿ 21 ರಿಂದ ನಾಮಪತ್ರ ಪಕ್ರಿಯೆ ಆರಂಭವಾಗಲಿದ್ದು ಚುನಾವಣೆ ಫೆಬ್ರವರಿ 14 ರಂದು.

ಮೂರನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

25 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 20 ರಂದು.

ನಾಲ್ಕನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

27 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 23 ಫೆಬ್ರವರಿ

5ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

1 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 27 ರಂದು.

6ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

4ನೇ ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಮಾರ್ಚ್ 3 ರಂದು.

7ನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

10 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಮಾರ್ಚ್ 07 ರಂದು.

ಫಲಿತಾಂಶ: 10 ಮಾರ್ಚ್

ಪಂಜಾಬ್, ಗೋವಾ ಉತ್ತರಾಖಂಡ ರಾಜ್ಯಗಳು ಒಂದೇ ಹಂತದಲ್ಲಿ ಅಂದರೆ ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿವೆ. ಮಣಿಪುರ ಎರಡು ಹಂತಗಳಲ್ಲಿ ಮತ್ತು ಉತ್ತರ ಪ್ರದೇಶವು 7 ಹಂತಗಳಲ್ಲಿ ಚುನಾವಣೆ ಎದುರಿಸಲಿದೆ.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಉಲ್ಲಂಘಿಸಿದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೋವಿಡ್ ಕಾರಣಕ್ಕೆ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ನೀಡಲಾಗಿದ್ದು, ಕೋವಿಡ್ ಕಾರಣಕ್ಕೆ ನೇರವಾಗಿ ನಾಮಪತ್ರ ಸಲ್ಲಿಸುವ ಬದಲು ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದರು. ಜೊತೆಗೆ ಚುನಾವಣಾ ರ್ಯಾಲಿಗಳನ್ನು, ಪ್ರಚಾರವನ್ನು ಆದಷ್ಟು ಆನ್‌ಲೈನ್ ಮೂಲಕ ಮಾಡಲು ಮನವಿ ಮಾಡಿದರು.

ರೋಡ್ ಶೋ, ಪಾದಯಾತ್ರೆಗಳನ್ನು, ಸೈಕಲ್ ಬೈಕ್ ರ್ಯಾಲಿಗಳನ್ನು, ಚುನಾವಣಾ ಪ್ರಚಾರ ಸಭೆಗಳನ್ನು ಜನವರಿ 15ರವರೆಗೂ ನಡೆಸಬಾರದು ಎಂದು ಆಯೋಗ ತಾಕೀತು ಮಾಡಿದೆ. ನಂತರ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಮನೆ ಮನೆ ಪ್ರಚಾರಕ್ಕೆ ಕೇವಲ 05 ಜನರಿಗೆ ಮಾತ್ರ ಅವಕಾಶವಿರುತ್ತದೆ. ಫಲಿತಾಂಶದ ನಂತರ ವಿಜಯೋತ್ಸವ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮತ ಎಣಿಕೆ ಕೇಂದ್ರಕ್ಕೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಖ್ಯ ಚುನಾವಣಾಧಿಕಾರಿ ಸುಶೀಲ್ ಚಂದ್ರರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿವು ಜವಾಬ್ದಾರಿಯನ್ನು ಚುನಾವಣಾ ಆಯೋಗಕ್ಕೆ ಸಂವಿಧಾನ ನೀಡಿದೆ. ಕಳೆದ ಎರಡು ವರ್ಷದಿಂದ ಕೋವಿಡ್ ಕಾರಣಕ್ಕೆ ಇದು ಸರಿಯಾಗಿ ನಡೆಸಲಾಗುತ್ತಿಲ್ಲ. ಮುಂದಿನ ಚುನಾವಣೆಗಳಿಗೆ ಸಮರ್ಪಕ ಪ್ರೊಟೋಕಾಲ್ ಅಳವಡಿಸಲಾಗುವುದು” ಎಂದರು.

ಕೋವಿಡ್ ರಕ್ಷಣೆ ಚುನಾವಣೆ, ಮುಕ್ತು ಚುನಾವಣೆ ಅತಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಮಾಡುವುದಕ್ಕಾಗಿ ಕಳೆದ 6 ತಿಂಗಳಿನಿಂದ ಚುನಾವಣಾ ಆಯೋಗ ಕೆಲಸ ಮಾಡಿದ್ದೇವೆ ಎಂದರು. ಎಲ್ಲಾ ರಾಜ್ಯಗಳಿಗೆ ಭೇಟಿ ಮಾಡಿ ರಾಜಕೀಯ ಪಕ್ಷಗಳು ಮತ್ತು ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದಿದ್ದೇವೆ ಎಂದು ತಿಳಿಸಿದರು.

ಗೋವಾದ 40 ಸ್ಥಾನಗಳಿಗೆ, ಮಣಿಪುರದ 60 ಕ್ಷೇತ್ರಗಳಿಗೆ, ಉತ್ತರಾಖಂಡದ 70 ಕ್ಷೇತ್ರಗಳಿಗೆ, ಪಂಜಾಬ್‌ನ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 403 ಸ್ಥಾನಗಳಿಗೆ ಸೇರಿ ಒಟ್ಟು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಒಟ್ಟು 18.34 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಪಂಜಾಬ್, ಉತ್ತರಪ್ರದೇಶ ಮತ್ತು ಉತ್ತರಾಖಂಡದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಗರಿಷ್ಠ 40 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು. ಗೋವಾ ಮತ್ತು ಮಣಿಪುರದ ಅಭ್ಯರ್ಥಿಗಳು ಗರಿಷ್ಠ 28 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು ಎಂದು ಆಯೋಗ ತಿಳಿಸಿದೆ.

ಜನವರ 07ರ ಮಾಹಿತಿಯಂತೆ ಈ ಐದು ರಾಜ್ಯಗಳಲ್ಲಿ 15 ಕೋಟಿ ಜನರು ಮೊದಲ ಡೋಸ್ ಲಸಿಕೆ ಮತ್ತು ಸುಮಾರು 9 ಕೋಟಿ ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.

ಗೋವಾ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದ್ದು, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆಯ ಚುನಾವಣೆಯು ಮಾರ್ಚ್ 23ರವರೆಗೆ ಮತ್ತು ಯುಪಿ ವಿಧಾನಸಭೆಯ ಅಧಿಕಾರಾವಧಿಯು ಮೇ 14 ರವರೆಗೆ ಇರುತ್ತದೆ.

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.


ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಐಐಎಂ ವಿದ್ಯಾರ್ಥಿಗಳು,…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...