Homeಮುಖಪುಟ'ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ' ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

- Advertisement -
- Advertisement -

ಆನ್‌ಲೈನ್ ಮೂಲಕ ನಡೆಯುವ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ. ಆದರೆ, ಅಂತಹ ಒಂದು ವಂಚನೆಯ ಪ್ರಯತ್ನವು ಮಹಿಳೆಯ ಜೀವವನ್ನು ಕಳೆದುಕೊಳ್ಳುವುದಕ್ಕೆ ಕಾರಣವಾಗಿದೆ.

ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಎಂದು ಹೇಳಲಾದ ವ್ಯಕ್ತಿಯಿಂದ ಸೋಮವಾರ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ಕಾಲೇಜಿಗೆ ಹೋಗುತ್ತಿರುವ ನಿಮ್ಮ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ವ್ಯಕ್ತಿ ಶಿಕ್ಷಕಿಗೆ ತಿಳಿಸಿದ್ದು, ಹಣ ನೀಡಿದರೆ ಮನೆಗೆ ಕಳುಹಿಸುವುದಾಗಿ ತಿಳಿಸಿದ್ದಾನೆ.

ಮೃತ ಮಹಿಳೆ ವರ್ಮಾ ಅವರ ಮಗ ದೀಪಾಂಶು ಮಾತನಾಡಿ, “ಮಧ್ಯಾಹ್ನದ ವೇಳೆಗೆ ತಾಯಿಗೆ ಕರೆ ಬಂದಿದ್ದು, ಮಗಳು ಸುರಕ್ಷಿತವಾಗಿ ಮನೆಗೆ ಬರುವುದನ್ನು ಖಚಿತಪಡಿಸಿಕೊಳ್ಳಲು ₹1 ಲಕ್ಷವನ್ನು ನಿರ್ದಿಷ್ಟ ಖಾತೆಗೆ ಜಮಾ ಮಾಡುವಂತೆ ಆ ವ್ಯಕ್ತಿ ಕೇಳಿದ್ದಾನೆ. ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಹೇಳಿದ್ದಾರೆ.

“ನಿಮ್ಮ ಮಗಳು ಸೆಕ್ಸ್ ರಾಕೆಟ್ ಸಂಬಂಧಿತ ಪ್ರಕರಣದಲ್ಲಿ ಸಿಲುಕಿರುವ ವಿಚಾರದಿಂದ ಕುಟುಂಬ ಆಘಾತಕ್ಕೆ ಒಳಗಾಗಬಾರು ಎಂಬ ಕಾರಣಕ್ಕೆ ನಾನು ನಿಮಗೆ ಕರೆ ಮಾಡುತ್ತಿದ್ದೇನೆ” ಎಂದು ಆ ವ್ಯಕ್ತಿ ಎಂಎಸ್ ವರ್ಮಾಗೆ ತಿಳಿಸಿದ್ದಾನೆ.

“ನನ್ನ ತಾಯಿ ಆಗ್ರಾದ ಅಚ್ನೇರಾದಲ್ಲಿರುವ ಸರ್ಕಾರಿ ಬಾಲಕಿಯರ ಜೂನಿಯರ್ ಹೈಸ್ಕೂಲ್‌ನಲ್ಲಿ ಪಾಠ ಮಾಡುತ್ತಿದ್ದರು. ಆ ವ್ಯಕ್ತಿಯಿಂದ ಕರೆ ಬಂದ ನಂತರ ಅವರು ಗಾಬರಿಗೊಂಡು ನನಗೆ ಕರೆ ಮಾಡಿದರು. ಅವರು ಕರೆ ಸ್ವೀಕರಿಸಿದ ಸಂಖ್ಯೆಯನ್ನು ನಾನು ಕೇಳಿದೆ. ನಾನು ಸಂಖ್ಯೆಯನ್ನು ಪರಿಶೀಲಿಸಿದಾಗ , ಇದು +92 ಕೋಡ್ ಹೊಂದಿದೆ ಎಂದು ನಾನು ಕಂಡುಕೊಂಡೆ. ನನ್ನ ತಾಯಿ ತುಂಬಾ ಆತಂಕದಲ್ಲಿದ್ದರು. ಸಾಕಷ್ಟು ಅಸ್ವಸ್ಥರಾಗಿದ್ದರು” ಎಂದು ದೀಪಾಂಶು ಹೇಳಿದರು.

“ನಾನು ಸಹೋದರಿಯೊಂದಿಗೆ ಮಾತನಾಡಿದ್ದು, ಆಕೆ ಕಾಲೇಜಿನಲ್ಲಿ ಸುರಕ್ಷಿತವಾಗಿದ್ದಾಳೆ ಎಂದು ನಾನು ತಾಯಿಯನ್ನು ಸಮಾಧಾನಪಡಿಸಿದೆ. ಆದರೂ ಅವರ ಆರೋಗ್ಯ ಹದಗೆಡುತ್ತಲೇ ಇತ್ತು. ಆಕೆ ಶಾಲೆಯಿಂದ ಹಿಂತಿರುಗಿದಾಗ, ಎದೆಯಲ್ಲಿ ಸ್ವಲ್ಪ ನೋವು ಅನುಭವಿಸುತ್ತಿರುವುದಾಗಿ ಹೇಳಿದರು. ನಾವು ಆಕೆಗೆ ಕುಡಿಯಲು ನೀರು ಕೊಟ್ಟ ನಂತರ ಆಕೆಯ ಆರೋಗ್ಯ ಮತ್ತಷ್ಟು ಹದಗೆಟ್ಟಿತು.. ಸ್ವಲ್ಪ ಹೊತ್ತಿನ ಬಳಿಕ ಅವರು ಪ್ರಾಣಬಿಟ್ಟರು” ಎಂದು ಅವರು ನಡೆದ ಘಟನೆ ಬಗ್ಗೆ ವಿವರಿಸಿದರು.

ಮೃತ ಶಿಕ್ಷಕಿಯ ಕುಟುಂಬದವರು ಗುರುವಾರ ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮಯಾಂಕ್ ತಿವಾರಿ ತಿಳಿಸಿದ್ದಾರೆ.

ವರ್ಮಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ, ಇದಕ್ಕೆ ಕಾರಣ, ತನ್ನ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ತಿಳಿಸುವ ಕರೆ ಬಂದಿತ್ತು ಎಂಬುದು. ಕರೆ ಮಾಡಿದವರು ₹1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಅವರ ಪತಿ ಹೇಳಿದ್ದಾರೆ. ಇದರಿಂದ ಆಕೆ ಚಿಂತಿತಳಾದಳು ಮತ್ತು ಆಕೆಯನ್ನು ಮಂಗಳವಾರ ಮನೆಗೆ ತಲುಪಿದ 15 ನಿಮಿಷಗಳ ನಂತರ ನಾವು ಈ ಕರೆಯನ್ನು ಸ್ವೀಕರಿಸಿದ್ದೇವೆ, ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ; ಪುಣೆ: ಶಾಲಾ ವ್ಯಾನ್‌ನಲ್ಲಿ 6 ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...