Homeಮುಖಪುಟ'ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ' ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

- Advertisement -
- Advertisement -

ಆನ್‌ಲೈನ್ ಮೂಲಕ ನಡೆಯುವ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ. ಆದರೆ, ಅಂತಹ ಒಂದು ವಂಚನೆಯ ಪ್ರಯತ್ನವು ಮಹಿಳೆಯ ಜೀವವನ್ನು ಕಳೆದುಕೊಳ್ಳುವುದಕ್ಕೆ ಕಾರಣವಾಗಿದೆ.

ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಎಂದು ಹೇಳಲಾದ ವ್ಯಕ್ತಿಯಿಂದ ಸೋಮವಾರ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ಕಾಲೇಜಿಗೆ ಹೋಗುತ್ತಿರುವ ನಿಮ್ಮ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ವ್ಯಕ್ತಿ ಶಿಕ್ಷಕಿಗೆ ತಿಳಿಸಿದ್ದು, ಹಣ ನೀಡಿದರೆ ಮನೆಗೆ ಕಳುಹಿಸುವುದಾಗಿ ತಿಳಿಸಿದ್ದಾನೆ.

ಮೃತ ಮಹಿಳೆ ವರ್ಮಾ ಅವರ ಮಗ ದೀಪಾಂಶು ಮಾತನಾಡಿ, “ಮಧ್ಯಾಹ್ನದ ವೇಳೆಗೆ ತಾಯಿಗೆ ಕರೆ ಬಂದಿದ್ದು, ಮಗಳು ಸುರಕ್ಷಿತವಾಗಿ ಮನೆಗೆ ಬರುವುದನ್ನು ಖಚಿತಪಡಿಸಿಕೊಳ್ಳಲು ₹1 ಲಕ್ಷವನ್ನು ನಿರ್ದಿಷ್ಟ ಖಾತೆಗೆ ಜಮಾ ಮಾಡುವಂತೆ ಆ ವ್ಯಕ್ತಿ ಕೇಳಿದ್ದಾನೆ. ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಹೇಳಿದ್ದಾರೆ.

“ನಿಮ್ಮ ಮಗಳು ಸೆಕ್ಸ್ ರಾಕೆಟ್ ಸಂಬಂಧಿತ ಪ್ರಕರಣದಲ್ಲಿ ಸಿಲುಕಿರುವ ವಿಚಾರದಿಂದ ಕುಟುಂಬ ಆಘಾತಕ್ಕೆ ಒಳಗಾಗಬಾರು ಎಂಬ ಕಾರಣಕ್ಕೆ ನಾನು ನಿಮಗೆ ಕರೆ ಮಾಡುತ್ತಿದ್ದೇನೆ” ಎಂದು ಆ ವ್ಯಕ್ತಿ ಎಂಎಸ್ ವರ್ಮಾಗೆ ತಿಳಿಸಿದ್ದಾನೆ.

“ನನ್ನ ತಾಯಿ ಆಗ್ರಾದ ಅಚ್ನೇರಾದಲ್ಲಿರುವ ಸರ್ಕಾರಿ ಬಾಲಕಿಯರ ಜೂನಿಯರ್ ಹೈಸ್ಕೂಲ್‌ನಲ್ಲಿ ಪಾಠ ಮಾಡುತ್ತಿದ್ದರು. ಆ ವ್ಯಕ್ತಿಯಿಂದ ಕರೆ ಬಂದ ನಂತರ ಅವರು ಗಾಬರಿಗೊಂಡು ನನಗೆ ಕರೆ ಮಾಡಿದರು. ಅವರು ಕರೆ ಸ್ವೀಕರಿಸಿದ ಸಂಖ್ಯೆಯನ್ನು ನಾನು ಕೇಳಿದೆ. ನಾನು ಸಂಖ್ಯೆಯನ್ನು ಪರಿಶೀಲಿಸಿದಾಗ , ಇದು +92 ಕೋಡ್ ಹೊಂದಿದೆ ಎಂದು ನಾನು ಕಂಡುಕೊಂಡೆ. ನನ್ನ ತಾಯಿ ತುಂಬಾ ಆತಂಕದಲ್ಲಿದ್ದರು. ಸಾಕಷ್ಟು ಅಸ್ವಸ್ಥರಾಗಿದ್ದರು” ಎಂದು ದೀಪಾಂಶು ಹೇಳಿದರು.

“ನಾನು ಸಹೋದರಿಯೊಂದಿಗೆ ಮಾತನಾಡಿದ್ದು, ಆಕೆ ಕಾಲೇಜಿನಲ್ಲಿ ಸುರಕ್ಷಿತವಾಗಿದ್ದಾಳೆ ಎಂದು ನಾನು ತಾಯಿಯನ್ನು ಸಮಾಧಾನಪಡಿಸಿದೆ. ಆದರೂ ಅವರ ಆರೋಗ್ಯ ಹದಗೆಡುತ್ತಲೇ ಇತ್ತು. ಆಕೆ ಶಾಲೆಯಿಂದ ಹಿಂತಿರುಗಿದಾಗ, ಎದೆಯಲ್ಲಿ ಸ್ವಲ್ಪ ನೋವು ಅನುಭವಿಸುತ್ತಿರುವುದಾಗಿ ಹೇಳಿದರು. ನಾವು ಆಕೆಗೆ ಕುಡಿಯಲು ನೀರು ಕೊಟ್ಟ ನಂತರ ಆಕೆಯ ಆರೋಗ್ಯ ಮತ್ತಷ್ಟು ಹದಗೆಟ್ಟಿತು.. ಸ್ವಲ್ಪ ಹೊತ್ತಿನ ಬಳಿಕ ಅವರು ಪ್ರಾಣಬಿಟ್ಟರು” ಎಂದು ಅವರು ನಡೆದ ಘಟನೆ ಬಗ್ಗೆ ವಿವರಿಸಿದರು.

ಮೃತ ಶಿಕ್ಷಕಿಯ ಕುಟುಂಬದವರು ಗುರುವಾರ ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮಯಾಂಕ್ ತಿವಾರಿ ತಿಳಿಸಿದ್ದಾರೆ.

ವರ್ಮಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ, ಇದಕ್ಕೆ ಕಾರಣ, ತನ್ನ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ತಿಳಿಸುವ ಕರೆ ಬಂದಿತ್ತು ಎಂಬುದು. ಕರೆ ಮಾಡಿದವರು ₹1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಅವರ ಪತಿ ಹೇಳಿದ್ದಾರೆ. ಇದರಿಂದ ಆಕೆ ಚಿಂತಿತಳಾದಳು ಮತ್ತು ಆಕೆಯನ್ನು ಮಂಗಳವಾರ ಮನೆಗೆ ತಲುಪಿದ 15 ನಿಮಿಷಗಳ ನಂತರ ನಾವು ಈ ಕರೆಯನ್ನು ಸ್ವೀಕರಿಸಿದ್ದೇವೆ, ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ; ಪುಣೆ: ಶಾಲಾ ವ್ಯಾನ್‌ನಲ್ಲಿ 6 ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...