Homeಮುಖಪುಟ'ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ' ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

- Advertisement -
- Advertisement -

ಆನ್‌ಲೈನ್ ಮೂಲಕ ನಡೆಯುವ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ. ಆದರೆ, ಅಂತಹ ಒಂದು ವಂಚನೆಯ ಪ್ರಯತ್ನವು ಮಹಿಳೆಯ ಜೀವವನ್ನು ಕಳೆದುಕೊಳ್ಳುವುದಕ್ಕೆ ಕಾರಣವಾಗಿದೆ.

ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಎಂದು ಹೇಳಲಾದ ವ್ಯಕ್ತಿಯಿಂದ ಸೋಮವಾರ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ಕಾಲೇಜಿಗೆ ಹೋಗುತ್ತಿರುವ ನಿಮ್ಮ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ವ್ಯಕ್ತಿ ಶಿಕ್ಷಕಿಗೆ ತಿಳಿಸಿದ್ದು, ಹಣ ನೀಡಿದರೆ ಮನೆಗೆ ಕಳುಹಿಸುವುದಾಗಿ ತಿಳಿಸಿದ್ದಾನೆ.

ಮೃತ ಮಹಿಳೆ ವರ್ಮಾ ಅವರ ಮಗ ದೀಪಾಂಶು ಮಾತನಾಡಿ, “ಮಧ್ಯಾಹ್ನದ ವೇಳೆಗೆ ತಾಯಿಗೆ ಕರೆ ಬಂದಿದ್ದು, ಮಗಳು ಸುರಕ್ಷಿತವಾಗಿ ಮನೆಗೆ ಬರುವುದನ್ನು ಖಚಿತಪಡಿಸಿಕೊಳ್ಳಲು ₹1 ಲಕ್ಷವನ್ನು ನಿರ್ದಿಷ್ಟ ಖಾತೆಗೆ ಜಮಾ ಮಾಡುವಂತೆ ಆ ವ್ಯಕ್ತಿ ಕೇಳಿದ್ದಾನೆ. ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಹೇಳಿದ್ದಾರೆ.

“ನಿಮ್ಮ ಮಗಳು ಸೆಕ್ಸ್ ರಾಕೆಟ್ ಸಂಬಂಧಿತ ಪ್ರಕರಣದಲ್ಲಿ ಸಿಲುಕಿರುವ ವಿಚಾರದಿಂದ ಕುಟುಂಬ ಆಘಾತಕ್ಕೆ ಒಳಗಾಗಬಾರು ಎಂಬ ಕಾರಣಕ್ಕೆ ನಾನು ನಿಮಗೆ ಕರೆ ಮಾಡುತ್ತಿದ್ದೇನೆ” ಎಂದು ಆ ವ್ಯಕ್ತಿ ಎಂಎಸ್ ವರ್ಮಾಗೆ ತಿಳಿಸಿದ್ದಾನೆ.

“ನನ್ನ ತಾಯಿ ಆಗ್ರಾದ ಅಚ್ನೇರಾದಲ್ಲಿರುವ ಸರ್ಕಾರಿ ಬಾಲಕಿಯರ ಜೂನಿಯರ್ ಹೈಸ್ಕೂಲ್‌ನಲ್ಲಿ ಪಾಠ ಮಾಡುತ್ತಿದ್ದರು. ಆ ವ್ಯಕ್ತಿಯಿಂದ ಕರೆ ಬಂದ ನಂತರ ಅವರು ಗಾಬರಿಗೊಂಡು ನನಗೆ ಕರೆ ಮಾಡಿದರು. ಅವರು ಕರೆ ಸ್ವೀಕರಿಸಿದ ಸಂಖ್ಯೆಯನ್ನು ನಾನು ಕೇಳಿದೆ. ನಾನು ಸಂಖ್ಯೆಯನ್ನು ಪರಿಶೀಲಿಸಿದಾಗ , ಇದು +92 ಕೋಡ್ ಹೊಂದಿದೆ ಎಂದು ನಾನು ಕಂಡುಕೊಂಡೆ. ನನ್ನ ತಾಯಿ ತುಂಬಾ ಆತಂಕದಲ್ಲಿದ್ದರು. ಸಾಕಷ್ಟು ಅಸ್ವಸ್ಥರಾಗಿದ್ದರು” ಎಂದು ದೀಪಾಂಶು ಹೇಳಿದರು.

“ನಾನು ಸಹೋದರಿಯೊಂದಿಗೆ ಮಾತನಾಡಿದ್ದು, ಆಕೆ ಕಾಲೇಜಿನಲ್ಲಿ ಸುರಕ್ಷಿತವಾಗಿದ್ದಾಳೆ ಎಂದು ನಾನು ತಾಯಿಯನ್ನು ಸಮಾಧಾನಪಡಿಸಿದೆ. ಆದರೂ ಅವರ ಆರೋಗ್ಯ ಹದಗೆಡುತ್ತಲೇ ಇತ್ತು. ಆಕೆ ಶಾಲೆಯಿಂದ ಹಿಂತಿರುಗಿದಾಗ, ಎದೆಯಲ್ಲಿ ಸ್ವಲ್ಪ ನೋವು ಅನುಭವಿಸುತ್ತಿರುವುದಾಗಿ ಹೇಳಿದರು. ನಾವು ಆಕೆಗೆ ಕುಡಿಯಲು ನೀರು ಕೊಟ್ಟ ನಂತರ ಆಕೆಯ ಆರೋಗ್ಯ ಮತ್ತಷ್ಟು ಹದಗೆಟ್ಟಿತು.. ಸ್ವಲ್ಪ ಹೊತ್ತಿನ ಬಳಿಕ ಅವರು ಪ್ರಾಣಬಿಟ್ಟರು” ಎಂದು ಅವರು ನಡೆದ ಘಟನೆ ಬಗ್ಗೆ ವಿವರಿಸಿದರು.

ಮೃತ ಶಿಕ್ಷಕಿಯ ಕುಟುಂಬದವರು ಗುರುವಾರ ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮಯಾಂಕ್ ತಿವಾರಿ ತಿಳಿಸಿದ್ದಾರೆ.

ವರ್ಮಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ, ಇದಕ್ಕೆ ಕಾರಣ, ತನ್ನ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ತಿಳಿಸುವ ಕರೆ ಬಂದಿತ್ತು ಎಂಬುದು. ಕರೆ ಮಾಡಿದವರು ₹1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಅವರ ಪತಿ ಹೇಳಿದ್ದಾರೆ. ಇದರಿಂದ ಆಕೆ ಚಿಂತಿತಳಾದಳು ಮತ್ತು ಆಕೆಯನ್ನು ಮಂಗಳವಾರ ಮನೆಗೆ ತಲುಪಿದ 15 ನಿಮಿಷಗಳ ನಂತರ ನಾವು ಈ ಕರೆಯನ್ನು ಸ್ವೀಕರಿಸಿದ್ದೇವೆ, ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ; ಪುಣೆ: ಶಾಲಾ ವ್ಯಾನ್‌ನಲ್ಲಿ 6 ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...