Homeಮುಖಪುಟ'ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ' ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

- Advertisement -
- Advertisement -

ಆನ್‌ಲೈನ್ ಮೂಲಕ ನಡೆಯುವ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ. ಆದರೆ, ಅಂತಹ ಒಂದು ವಂಚನೆಯ ಪ್ರಯತ್ನವು ಮಹಿಳೆಯ ಜೀವವನ್ನು ಕಳೆದುಕೊಳ್ಳುವುದಕ್ಕೆ ಕಾರಣವಾಗಿದೆ.

ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಎಂದು ಹೇಳಲಾದ ವ್ಯಕ್ತಿಯಿಂದ ಸೋಮವಾರ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ಕಾಲೇಜಿಗೆ ಹೋಗುತ್ತಿರುವ ನಿಮ್ಮ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ವ್ಯಕ್ತಿ ಶಿಕ್ಷಕಿಗೆ ತಿಳಿಸಿದ್ದು, ಹಣ ನೀಡಿದರೆ ಮನೆಗೆ ಕಳುಹಿಸುವುದಾಗಿ ತಿಳಿಸಿದ್ದಾನೆ.

ಮೃತ ಮಹಿಳೆ ವರ್ಮಾ ಅವರ ಮಗ ದೀಪಾಂಶು ಮಾತನಾಡಿ, “ಮಧ್ಯಾಹ್ನದ ವೇಳೆಗೆ ತಾಯಿಗೆ ಕರೆ ಬಂದಿದ್ದು, ಮಗಳು ಸುರಕ್ಷಿತವಾಗಿ ಮನೆಗೆ ಬರುವುದನ್ನು ಖಚಿತಪಡಿಸಿಕೊಳ್ಳಲು ₹1 ಲಕ್ಷವನ್ನು ನಿರ್ದಿಷ್ಟ ಖಾತೆಗೆ ಜಮಾ ಮಾಡುವಂತೆ ಆ ವ್ಯಕ್ತಿ ಕೇಳಿದ್ದಾನೆ. ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಹೇಳಿದ್ದಾರೆ.

“ನಿಮ್ಮ ಮಗಳು ಸೆಕ್ಸ್ ರಾಕೆಟ್ ಸಂಬಂಧಿತ ಪ್ರಕರಣದಲ್ಲಿ ಸಿಲುಕಿರುವ ವಿಚಾರದಿಂದ ಕುಟುಂಬ ಆಘಾತಕ್ಕೆ ಒಳಗಾಗಬಾರು ಎಂಬ ಕಾರಣಕ್ಕೆ ನಾನು ನಿಮಗೆ ಕರೆ ಮಾಡುತ್ತಿದ್ದೇನೆ” ಎಂದು ಆ ವ್ಯಕ್ತಿ ಎಂಎಸ್ ವರ್ಮಾಗೆ ತಿಳಿಸಿದ್ದಾನೆ.

“ನನ್ನ ತಾಯಿ ಆಗ್ರಾದ ಅಚ್ನೇರಾದಲ್ಲಿರುವ ಸರ್ಕಾರಿ ಬಾಲಕಿಯರ ಜೂನಿಯರ್ ಹೈಸ್ಕೂಲ್‌ನಲ್ಲಿ ಪಾಠ ಮಾಡುತ್ತಿದ್ದರು. ಆ ವ್ಯಕ್ತಿಯಿಂದ ಕರೆ ಬಂದ ನಂತರ ಅವರು ಗಾಬರಿಗೊಂಡು ನನಗೆ ಕರೆ ಮಾಡಿದರು. ಅವರು ಕರೆ ಸ್ವೀಕರಿಸಿದ ಸಂಖ್ಯೆಯನ್ನು ನಾನು ಕೇಳಿದೆ. ನಾನು ಸಂಖ್ಯೆಯನ್ನು ಪರಿಶೀಲಿಸಿದಾಗ , ಇದು +92 ಕೋಡ್ ಹೊಂದಿದೆ ಎಂದು ನಾನು ಕಂಡುಕೊಂಡೆ. ನನ್ನ ತಾಯಿ ತುಂಬಾ ಆತಂಕದಲ್ಲಿದ್ದರು. ಸಾಕಷ್ಟು ಅಸ್ವಸ್ಥರಾಗಿದ್ದರು” ಎಂದು ದೀಪಾಂಶು ಹೇಳಿದರು.

“ನಾನು ಸಹೋದರಿಯೊಂದಿಗೆ ಮಾತನಾಡಿದ್ದು, ಆಕೆ ಕಾಲೇಜಿನಲ್ಲಿ ಸುರಕ್ಷಿತವಾಗಿದ್ದಾಳೆ ಎಂದು ನಾನು ತಾಯಿಯನ್ನು ಸಮಾಧಾನಪಡಿಸಿದೆ. ಆದರೂ ಅವರ ಆರೋಗ್ಯ ಹದಗೆಡುತ್ತಲೇ ಇತ್ತು. ಆಕೆ ಶಾಲೆಯಿಂದ ಹಿಂತಿರುಗಿದಾಗ, ಎದೆಯಲ್ಲಿ ಸ್ವಲ್ಪ ನೋವು ಅನುಭವಿಸುತ್ತಿರುವುದಾಗಿ ಹೇಳಿದರು. ನಾವು ಆಕೆಗೆ ಕುಡಿಯಲು ನೀರು ಕೊಟ್ಟ ನಂತರ ಆಕೆಯ ಆರೋಗ್ಯ ಮತ್ತಷ್ಟು ಹದಗೆಟ್ಟಿತು.. ಸ್ವಲ್ಪ ಹೊತ್ತಿನ ಬಳಿಕ ಅವರು ಪ್ರಾಣಬಿಟ್ಟರು” ಎಂದು ಅವರು ನಡೆದ ಘಟನೆ ಬಗ್ಗೆ ವಿವರಿಸಿದರು.

ಮೃತ ಶಿಕ್ಷಕಿಯ ಕುಟುಂಬದವರು ಗುರುವಾರ ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮಯಾಂಕ್ ತಿವಾರಿ ತಿಳಿಸಿದ್ದಾರೆ.

ವರ್ಮಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ, ಇದಕ್ಕೆ ಕಾರಣ, ತನ್ನ ಮಗಳು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಿಬಿದ್ದಿದ್ದಾಳೆ ಎಂದು ತಿಳಿಸುವ ಕರೆ ಬಂದಿತ್ತು ಎಂಬುದು. ಕರೆ ಮಾಡಿದವರು ₹1 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಅವರ ಪತಿ ಹೇಳಿದ್ದಾರೆ. ಇದರಿಂದ ಆಕೆ ಚಿಂತಿತಳಾದಳು ಮತ್ತು ಆಕೆಯನ್ನು ಮಂಗಳವಾರ ಮನೆಗೆ ತಲುಪಿದ 15 ನಿಮಿಷಗಳ ನಂತರ ನಾವು ಈ ಕರೆಯನ್ನು ಸ್ವೀಕರಿಸಿದ್ದೇವೆ, ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ; ಪುಣೆ: ಶಾಲಾ ವ್ಯಾನ್‌ನಲ್ಲಿ 6 ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...