Homeಕರ್ನಾಟಕಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು...

ಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು…

- Advertisement -
- Advertisement -

ಖ್ಯಾತ ವಿಜ್ಞಾನ ಬರಹಗಾರ, ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ನಿಧನರಾಗಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮಗಳು, ಲೇಖಕಿ ಮೇಘನಾ ಸುಧೀಂದ್ರ ಅವರು ಅಪ್ಪಂದಿರ ದಿನದಂದು ತಮ್ಮ ಅಪ್ಪನ ಬಗ್ಗೆ ಬರೆದ ಬರಹವನ್ನು ಅವರ ನೆನಪಿನಲ್ಲಿ ಇಂದು ಪ್ರಕಟಿಸುತ್ತಿದ್ದೆವೆ.

’ಅಪ್ಪ ಎಂದಾಗಲ್ಲೆಲ್ಲ ನನಗೆ ಎರಡು ಇಂಸಿಡೆಂಟ್ ನೆನಪಾಗುತ್ತದೆ. ನನ್ನ ಪೂರ್ತಿ ಹೆಸರಿನ ಅರ್ಧ ಭಾಗ ಅಪ್ಪನೇ ತುಂಬಿಕೊಂಡಿದ್ದಾರೆ. ಅರ್ಧ ಜನ ನನ್ನನ್ನು “ಸುಧೀಂದ್ರನ ಮಗಳು” ಎಂದು ಗುರುತಿಸಿ ನನ್ನ ಹೆಸರನ್ನೇ ಮರೆಯುವಷ್ಟು ಅಪ್ಪನ್ನನ್ನು ಪ್ರೀತಿಸುವವರಿದ್ದಾರೆ’.
ಘಟನೆ 1
ಒಮ್ಮೆ ಅಪ್ಪ ಕೆಲಸದ ಮೇಲೆ ರಷ್ಯಾದ ಮಾಸ್ಕೋಗೆ ಹೋಗಿದ್ದರು. ಎಂದಿನಂತೆ ಅಪ್ಪನಿಗೆ ದಿನಾ ಫೋನ್ ಮಾಡಿ, “ಯಾವಾಗ ಬರ್ತ್ಯಾ ಅಪ್ಪ, ಯಾವಾಗ ಬರ್ತ್ಯಾ ಅಪ್ಪ” ಎಂದು ಕೇಳಿ ಕೇಳಿ ಸುಸ್ತು ಮಾಡಿದ್ದೆ. ಅಪ್ಪ “ಒಂದು ವಾರ ಬಿಟ್ಟು, 2 ವಾರ ಬಿಟ್ಟು” ಎಂದು ಅನ್ನುತ್ತಿದ್ದರು. ಇನ್ನು ಮಾಸ್ಕೋದಿಂದ ಹೊರಡುವ ದಿನ ಬಂತು, “ಏನು ಬೇಕು ಮಗಳೇ?” ಎಂದು ಕೇಳಿದ್ದರು, “ಸೂಟ್ ಕೇಸ್ ತುಂಬ ಚಾಕ್ಲೇಟ್ ಬೇಕಪ್ಪ” ಎಂದು ಅಂದಿದ್ದೆ. ಅದನ್ನೆಲ್ಲಾ ಹೇಳಿ ಮರೆತೂ ಹೋಗಿದ್ದೆ.

ಸರಿ ಅಪ್ಪ ಮನೆಗೆ ಬಂದರು, ನಾನು ಸ್ಕೂಲಿಗೆ ಹೋಗಿದ್ದೆ, ಸಂಜೆ ಬಂದರೆ ಒಂದು ರೂಮಿನಲ್ಲಿ ದೊಡ್ಡ ಸೂಟ್ ಕೇಸ್ ಇಟ್ಟಿದ್ದರು. ತೆಗೆದರೆ ನಿಜವಾಗಿಯೂ ಅದರ ಪೂರ್ತಿ ಚಾಕ್ಲೇಟ್ ಇತ್ತು. ಒಂದು 35 ಕೆಜಿಯ ಸೂಟ್ಕೇಸಿನ ತುಂಬಾ ಚಾಕ್ಲೇಟ್ ತಂದಿದ್ದರು ಅಪ್ಪ. ಅವರನ್ನ ಕಸ್ಟಮ್ಸಿನಲ್ಲಿ ಹಿಡಿದ್ದಿದ್ದರೂ ಸಹ. ವೈಟ್ ಪಾಸ್‌ಪೋರ್ಟ್ ಮತ್ತು ಮಗಳಿಗೆ ಚಾಕ್ಲೇಟ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಸಬೂಬಿನೊಂದಿಗೆ ಬಿಟ್ಟಿದ್ದರಂತೆ. ಒಂದು ಸೂಟ್ಕೇಸಿನ ಬಟ್ಟೆಯನ್ನೆಲ್ಲಾ ಬಿಟ್ಟು, ಮಗಳಿಗೆ ಚಾಕ್ಲೇಟ್ ತಂದಿದ್ದರು ಅಪ್ಪ. ನಾನು ಸುಮ್ಮನೆ ಹೇಳುವ ಮಾತನ್ನ ನಿಜ ಮಾಡೋದು ಅಪ್ಪ ಮಾತ್ರ.

ಘಟನೆ 2
ನಾನು ಸೆಕೆಂಡ್ ಪಿಯೂಸಿಯಲ್ಲಿ ಓದೋದು ಬಿಟ್ಟು ಆರಾಮಾಗಿ ಸಂಗೀತ, ನಾಟಕ ಅಂದುಕೊಂಡಿದ್ದೆ. ಹೋಗಲಿ ಅದರಲ್ಲೂ ಏನು ಅಂತಹ ಸಾಧನೆ ಮಾಡಿರಲ್ಲಿಲ್ಲ. ಸುಮ್ಮನೆ ಕ್ಲಾಸ್ ಚಕ್ಕರ್ ಹಾಕೋಕೆ ಒಂದು ನೆಪ ಅಷ್ಟೆ. ಎಸ್ಸೆಸೆಲ್ಸಿಯಲ್ಲಿ ವಿಪರೀತ ಮಾರ್ಕ್ಸ್ ತೆಗೆದುಕೊಂಡ ಓವರ್ ಕಾನ್ಫೆಡೆನ್ಸ್ ನನ್ನಲ್ಲಿತ್ತು. “ಬರತ್ತೆ ಬಿಡು ಮಾರ್ಕ್ಸ್” ಅನ್ನೋ ಕೊಬ್ಬು. ಅಪ್ಪ ಒಂದೆರೆಡು ಬಾರಿ ಮೆತ್ತಗೆ ಹೇಳಿದ್ದರು, “ಹತ್ತನೇ ಕ್ಲಾಸಿನ ಹಾಗಲ್ಲ ಇದು, ಸರಿಯಾಗಿ ಓದು, ಇದು ನಿನ್ನ ಜೀವನದ ಟರ್ನಿಂಗ್ ಪಾಯಿಂಟ್” ಎಂದು. ನಾನು ಆರಾಮಾಗಿಯೇ ಇದ್ದೆ. ಎಕ್ಸಾಮು ಬರೆದೆ. ಅತೀ ಸಾಧಾರಣ ಮಾರ್ಕ್ಸು, ಅತೀ ಸಾಧಾರಣ ಸಿಇಟಿ ರ್ಯಾಂಕು ಬಂತು. ಅಪ್ಪನಿಗೆ ಇದ್ದ ಕನೆಕ್ಷನ್ಸು, ದುಡ್ಡು ಇವೆಲ್ಲವೂ ನನ್ನನ್ನ ಕಾಪಾಡುತ್ತದೆ ಎಂಬ ಕೆಟ್ಟ ಕಾನ್ಫಿಡೆನ್ಸು ನನ್ನಲ್ಲಿತ್ತು. ಅಪ್ಪ ರಿಸೆಲ್ಟ್ ನೋಡಿ ಒಂದೇ ಮಾತು ಹೇಳಿದರು, “ನಿನ್ನ ಯೋಗ್ಯತೆಗೆ ಎಲ್ಲಿ ಸೀಟು ಸಿಗತ್ತೋ ಅಲ್ಲಿ ಸೇರ್ಕೊಂಡು ಇಂಜಿನಿಯರಿಂಗ್ ಮುಗಿಸು, ಗುಡ್ ಲಕ್” ಅಂದರು. “ನೆನೆಪಿರಲಿ ನೀನು ಎಷ್ಟೇ ಮಾರ್ಕ್ಸ್ ತೆಗೆದರೂ ನನ್ನ ಮಗಳೇ ಅದೇನು ಬದಲಾಗಲ್ಲ” ಎಂದು ಸಾಂತ್ವನ ಹೇಳಿ ಹೋದರು.

ನಾನು ಊರಾಚೆ ಕಾಲೇಜಿಗೆ ಸೇರಿದೆ. ದಿನಾ ಬೆಳಗ್ಗೆ 6 ಘಂಟೆಗೆ ಹೊರಟರೆ ಸಂಜೆ 6 ಘಂಟೆಗೆ ಬರುತ್ತಿದ್ದೆ. 1 ವರ್ಷ ಆಟಾಡಿದ್ದಕ್ಕೆ 4 ವರ್ಷ ಒದ್ದಾಡಿದೆ. ಅಪ್ಪ ಸುಮ್ಮನೆ ಮುಗುಳ್ನಗುತ್ತಿದ್ದರು. ಇಂಜಿನಿಯರಿಂಗ್ ಮುಗಿಸಿದ ನಂತರ, “ನೀನು ಯಾರ ಶಿಫಾರಸ್ಸಿನಲ್ಲೋ, ಯಾರ ದುಡ್ಡಲ್ಲೋ ಓದಲ್ಲಿಲ್ಲ ನಿನ್ನ ಯೋಗ್ಯತೆಗೆ ತಕ್ಕ ಹಾಗೆ ಓದಿದೆ, ಯಾವತ್ತೂ ಅಷ್ಟೇ ನೀನು ಕಷ್ಟ ಪಟ್ಟು ನೀನು ದಕ್ಕಿಸಿಕೊಂಡಿದ್ದೇ ನಿನ್ನ ಬಳಿ ಶಾಶ್ವತವಾಗಿ ಉಳಿಯೋದು, ಅಪ್ಪ ಅಮ್ಮ ಫ್ರೀಯಾಗಿ ಕೊಟ್ಟಿದ್ದೂ ಉಳಿಯಲ್ಲ” ಎಂಬ ಅತಿ ದೊಡ್ಡ ಜೀವನದ ಪಾಠವನ್ನು ಹೇಳಿಕೊಟ್ಟರು.

ಇದಾದ ನಂತರ ನಾನು ಯಾವತ್ತೂ ಯಾವುದನ್ನೂ ಲೈಟಾಗಿ ತೆಗೆದುಕೊಳ್ಳಲ್ಲಿಲ್ಲ. ತಲೆ ಬಗ್ಗಿಸಿ ಕೆಲಸ ಮಾಡಿಕೊಂಡು ಹೋಗಿದ್ದೇನೆ. ಅದು ವಿದೇಶದಲ್ಲಿ ಮಾಸ್ಟರ್ಸ್ ಇರಬಹುದು, ಅಥವಾ ಕೆಲಸ ಇರಬಹುದು ಅಥವಾ ಪುಸ್ತಕ-ಲೇಖನ ಬರೆಯೋದಿರಬಹುದು.

ಪ್ರೀತಿ ಮಾಡುತ್ತಲೇ ಅಸಂಖ್ಯಾತ ಜೀವನ ಪಾಠ ಕಲಿಸುತ್ತಿರುವ ಅಪ್ಪನಿಗೆ ಅಪ್ಪನ ದಿನದ ಶುಭಾಶಯಗಳು. ನೀನೆ ನನಗೆ ಸ್ಪೂರ್ತಿ ಅಪ್ಪ. ನನ್ನ ಮೂರನೆಯ ಪುಸ್ತಕವನ್ನ( #AI ಕಥೆಗಳು) ನಿನಗೇ ಅರ್ಪಣೆ ಮಾಡಿದ್ದೇನೆ.

  • ಮೇಘನಾ ಸುಧೀಂದ್ರ

ಇದನ್ನೂ ಓದಿ: ಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...