Homeಕರ್ನಾಟಕಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು...

ಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು…

- Advertisement -
- Advertisement -

ಖ್ಯಾತ ವಿಜ್ಞಾನ ಬರಹಗಾರ, ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ನಿಧನರಾಗಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮಗಳು, ಲೇಖಕಿ ಮೇಘನಾ ಸುಧೀಂದ್ರ ಅವರು ಅಪ್ಪಂದಿರ ದಿನದಂದು ತಮ್ಮ ಅಪ್ಪನ ಬಗ್ಗೆ ಬರೆದ ಬರಹವನ್ನು ಅವರ ನೆನಪಿನಲ್ಲಿ ಇಂದು ಪ್ರಕಟಿಸುತ್ತಿದ್ದೆವೆ.

’ಅಪ್ಪ ಎಂದಾಗಲ್ಲೆಲ್ಲ ನನಗೆ ಎರಡು ಇಂಸಿಡೆಂಟ್ ನೆನಪಾಗುತ್ತದೆ. ನನ್ನ ಪೂರ್ತಿ ಹೆಸರಿನ ಅರ್ಧ ಭಾಗ ಅಪ್ಪನೇ ತುಂಬಿಕೊಂಡಿದ್ದಾರೆ. ಅರ್ಧ ಜನ ನನ್ನನ್ನು “ಸುಧೀಂದ್ರನ ಮಗಳು” ಎಂದು ಗುರುತಿಸಿ ನನ್ನ ಹೆಸರನ್ನೇ ಮರೆಯುವಷ್ಟು ಅಪ್ಪನ್ನನ್ನು ಪ್ರೀತಿಸುವವರಿದ್ದಾರೆ’.
ಘಟನೆ 1
ಒಮ್ಮೆ ಅಪ್ಪ ಕೆಲಸದ ಮೇಲೆ ರಷ್ಯಾದ ಮಾಸ್ಕೋಗೆ ಹೋಗಿದ್ದರು. ಎಂದಿನಂತೆ ಅಪ್ಪನಿಗೆ ದಿನಾ ಫೋನ್ ಮಾಡಿ, “ಯಾವಾಗ ಬರ್ತ್ಯಾ ಅಪ್ಪ, ಯಾವಾಗ ಬರ್ತ್ಯಾ ಅಪ್ಪ” ಎಂದು ಕೇಳಿ ಕೇಳಿ ಸುಸ್ತು ಮಾಡಿದ್ದೆ. ಅಪ್ಪ “ಒಂದು ವಾರ ಬಿಟ್ಟು, 2 ವಾರ ಬಿಟ್ಟು” ಎಂದು ಅನ್ನುತ್ತಿದ್ದರು. ಇನ್ನು ಮಾಸ್ಕೋದಿಂದ ಹೊರಡುವ ದಿನ ಬಂತು, “ಏನು ಬೇಕು ಮಗಳೇ?” ಎಂದು ಕೇಳಿದ್ದರು, “ಸೂಟ್ ಕೇಸ್ ತುಂಬ ಚಾಕ್ಲೇಟ್ ಬೇಕಪ್ಪ” ಎಂದು ಅಂದಿದ್ದೆ. ಅದನ್ನೆಲ್ಲಾ ಹೇಳಿ ಮರೆತೂ ಹೋಗಿದ್ದೆ.

ಸರಿ ಅಪ್ಪ ಮನೆಗೆ ಬಂದರು, ನಾನು ಸ್ಕೂಲಿಗೆ ಹೋಗಿದ್ದೆ, ಸಂಜೆ ಬಂದರೆ ಒಂದು ರೂಮಿನಲ್ಲಿ ದೊಡ್ಡ ಸೂಟ್ ಕೇಸ್ ಇಟ್ಟಿದ್ದರು. ತೆಗೆದರೆ ನಿಜವಾಗಿಯೂ ಅದರ ಪೂರ್ತಿ ಚಾಕ್ಲೇಟ್ ಇತ್ತು. ಒಂದು 35 ಕೆಜಿಯ ಸೂಟ್ಕೇಸಿನ ತುಂಬಾ ಚಾಕ್ಲೇಟ್ ತಂದಿದ್ದರು ಅಪ್ಪ. ಅವರನ್ನ ಕಸ್ಟಮ್ಸಿನಲ್ಲಿ ಹಿಡಿದ್ದಿದ್ದರೂ ಸಹ. ವೈಟ್ ಪಾಸ್‌ಪೋರ್ಟ್ ಮತ್ತು ಮಗಳಿಗೆ ಚಾಕ್ಲೇಟ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಸಬೂಬಿನೊಂದಿಗೆ ಬಿಟ್ಟಿದ್ದರಂತೆ. ಒಂದು ಸೂಟ್ಕೇಸಿನ ಬಟ್ಟೆಯನ್ನೆಲ್ಲಾ ಬಿಟ್ಟು, ಮಗಳಿಗೆ ಚಾಕ್ಲೇಟ್ ತಂದಿದ್ದರು ಅಪ್ಪ. ನಾನು ಸುಮ್ಮನೆ ಹೇಳುವ ಮಾತನ್ನ ನಿಜ ಮಾಡೋದು ಅಪ್ಪ ಮಾತ್ರ.

ಘಟನೆ 2
ನಾನು ಸೆಕೆಂಡ್ ಪಿಯೂಸಿಯಲ್ಲಿ ಓದೋದು ಬಿಟ್ಟು ಆರಾಮಾಗಿ ಸಂಗೀತ, ನಾಟಕ ಅಂದುಕೊಂಡಿದ್ದೆ. ಹೋಗಲಿ ಅದರಲ್ಲೂ ಏನು ಅಂತಹ ಸಾಧನೆ ಮಾಡಿರಲ್ಲಿಲ್ಲ. ಸುಮ್ಮನೆ ಕ್ಲಾಸ್ ಚಕ್ಕರ್ ಹಾಕೋಕೆ ಒಂದು ನೆಪ ಅಷ್ಟೆ. ಎಸ್ಸೆಸೆಲ್ಸಿಯಲ್ಲಿ ವಿಪರೀತ ಮಾರ್ಕ್ಸ್ ತೆಗೆದುಕೊಂಡ ಓವರ್ ಕಾನ್ಫೆಡೆನ್ಸ್ ನನ್ನಲ್ಲಿತ್ತು. “ಬರತ್ತೆ ಬಿಡು ಮಾರ್ಕ್ಸ್” ಅನ್ನೋ ಕೊಬ್ಬು. ಅಪ್ಪ ಒಂದೆರೆಡು ಬಾರಿ ಮೆತ್ತಗೆ ಹೇಳಿದ್ದರು, “ಹತ್ತನೇ ಕ್ಲಾಸಿನ ಹಾಗಲ್ಲ ಇದು, ಸರಿಯಾಗಿ ಓದು, ಇದು ನಿನ್ನ ಜೀವನದ ಟರ್ನಿಂಗ್ ಪಾಯಿಂಟ್” ಎಂದು. ನಾನು ಆರಾಮಾಗಿಯೇ ಇದ್ದೆ. ಎಕ್ಸಾಮು ಬರೆದೆ. ಅತೀ ಸಾಧಾರಣ ಮಾರ್ಕ್ಸು, ಅತೀ ಸಾಧಾರಣ ಸಿಇಟಿ ರ್ಯಾಂಕು ಬಂತು. ಅಪ್ಪನಿಗೆ ಇದ್ದ ಕನೆಕ್ಷನ್ಸು, ದುಡ್ಡು ಇವೆಲ್ಲವೂ ನನ್ನನ್ನ ಕಾಪಾಡುತ್ತದೆ ಎಂಬ ಕೆಟ್ಟ ಕಾನ್ಫಿಡೆನ್ಸು ನನ್ನಲ್ಲಿತ್ತು. ಅಪ್ಪ ರಿಸೆಲ್ಟ್ ನೋಡಿ ಒಂದೇ ಮಾತು ಹೇಳಿದರು, “ನಿನ್ನ ಯೋಗ್ಯತೆಗೆ ಎಲ್ಲಿ ಸೀಟು ಸಿಗತ್ತೋ ಅಲ್ಲಿ ಸೇರ್ಕೊಂಡು ಇಂಜಿನಿಯರಿಂಗ್ ಮುಗಿಸು, ಗುಡ್ ಲಕ್” ಅಂದರು. “ನೆನೆಪಿರಲಿ ನೀನು ಎಷ್ಟೇ ಮಾರ್ಕ್ಸ್ ತೆಗೆದರೂ ನನ್ನ ಮಗಳೇ ಅದೇನು ಬದಲಾಗಲ್ಲ” ಎಂದು ಸಾಂತ್ವನ ಹೇಳಿ ಹೋದರು.

ನಾನು ಊರಾಚೆ ಕಾಲೇಜಿಗೆ ಸೇರಿದೆ. ದಿನಾ ಬೆಳಗ್ಗೆ 6 ಘಂಟೆಗೆ ಹೊರಟರೆ ಸಂಜೆ 6 ಘಂಟೆಗೆ ಬರುತ್ತಿದ್ದೆ. 1 ವರ್ಷ ಆಟಾಡಿದ್ದಕ್ಕೆ 4 ವರ್ಷ ಒದ್ದಾಡಿದೆ. ಅಪ್ಪ ಸುಮ್ಮನೆ ಮುಗುಳ್ನಗುತ್ತಿದ್ದರು. ಇಂಜಿನಿಯರಿಂಗ್ ಮುಗಿಸಿದ ನಂತರ, “ನೀನು ಯಾರ ಶಿಫಾರಸ್ಸಿನಲ್ಲೋ, ಯಾರ ದುಡ್ಡಲ್ಲೋ ಓದಲ್ಲಿಲ್ಲ ನಿನ್ನ ಯೋಗ್ಯತೆಗೆ ತಕ್ಕ ಹಾಗೆ ಓದಿದೆ, ಯಾವತ್ತೂ ಅಷ್ಟೇ ನೀನು ಕಷ್ಟ ಪಟ್ಟು ನೀನು ದಕ್ಕಿಸಿಕೊಂಡಿದ್ದೇ ನಿನ್ನ ಬಳಿ ಶಾಶ್ವತವಾಗಿ ಉಳಿಯೋದು, ಅಪ್ಪ ಅಮ್ಮ ಫ್ರೀಯಾಗಿ ಕೊಟ್ಟಿದ್ದೂ ಉಳಿಯಲ್ಲ” ಎಂಬ ಅತಿ ದೊಡ್ಡ ಜೀವನದ ಪಾಠವನ್ನು ಹೇಳಿಕೊಟ್ಟರು.

ಇದಾದ ನಂತರ ನಾನು ಯಾವತ್ತೂ ಯಾವುದನ್ನೂ ಲೈಟಾಗಿ ತೆಗೆದುಕೊಳ್ಳಲ್ಲಿಲ್ಲ. ತಲೆ ಬಗ್ಗಿಸಿ ಕೆಲಸ ಮಾಡಿಕೊಂಡು ಹೋಗಿದ್ದೇನೆ. ಅದು ವಿದೇಶದಲ್ಲಿ ಮಾಸ್ಟರ್ಸ್ ಇರಬಹುದು, ಅಥವಾ ಕೆಲಸ ಇರಬಹುದು ಅಥವಾ ಪುಸ್ತಕ-ಲೇಖನ ಬರೆಯೋದಿರಬಹುದು.

ಪ್ರೀತಿ ಮಾಡುತ್ತಲೇ ಅಸಂಖ್ಯಾತ ಜೀವನ ಪಾಠ ಕಲಿಸುತ್ತಿರುವ ಅಪ್ಪನಿಗೆ ಅಪ್ಪನ ದಿನದ ಶುಭಾಶಯಗಳು. ನೀನೆ ನನಗೆ ಸ್ಪೂರ್ತಿ ಅಪ್ಪ. ನನ್ನ ಮೂರನೆಯ ಪುಸ್ತಕವನ್ನ( #AI ಕಥೆಗಳು) ನಿನಗೇ ಅರ್ಪಣೆ ಮಾಡಿದ್ದೇನೆ.

  • ಮೇಘನಾ ಸುಧೀಂದ್ರ

ಇದನ್ನೂ ಓದಿ: ಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...