Homeಕರ್ನಾಟಕಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು...

ಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು…

- Advertisement -
- Advertisement -

ಖ್ಯಾತ ವಿಜ್ಞಾನ ಬರಹಗಾರ, ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ನಿಧನರಾಗಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮಗಳು, ಲೇಖಕಿ ಮೇಘನಾ ಸುಧೀಂದ್ರ ಅವರು ಅಪ್ಪಂದಿರ ದಿನದಂದು ತಮ್ಮ ಅಪ್ಪನ ಬಗ್ಗೆ ಬರೆದ ಬರಹವನ್ನು ಅವರ ನೆನಪಿನಲ್ಲಿ ಇಂದು ಪ್ರಕಟಿಸುತ್ತಿದ್ದೆವೆ.

’ಅಪ್ಪ ಎಂದಾಗಲ್ಲೆಲ್ಲ ನನಗೆ ಎರಡು ಇಂಸಿಡೆಂಟ್ ನೆನಪಾಗುತ್ತದೆ. ನನ್ನ ಪೂರ್ತಿ ಹೆಸರಿನ ಅರ್ಧ ಭಾಗ ಅಪ್ಪನೇ ತುಂಬಿಕೊಂಡಿದ್ದಾರೆ. ಅರ್ಧ ಜನ ನನ್ನನ್ನು “ಸುಧೀಂದ್ರನ ಮಗಳು” ಎಂದು ಗುರುತಿಸಿ ನನ್ನ ಹೆಸರನ್ನೇ ಮರೆಯುವಷ್ಟು ಅಪ್ಪನ್ನನ್ನು ಪ್ರೀತಿಸುವವರಿದ್ದಾರೆ’.
ಘಟನೆ 1
ಒಮ್ಮೆ ಅಪ್ಪ ಕೆಲಸದ ಮೇಲೆ ರಷ್ಯಾದ ಮಾಸ್ಕೋಗೆ ಹೋಗಿದ್ದರು. ಎಂದಿನಂತೆ ಅಪ್ಪನಿಗೆ ದಿನಾ ಫೋನ್ ಮಾಡಿ, “ಯಾವಾಗ ಬರ್ತ್ಯಾ ಅಪ್ಪ, ಯಾವಾಗ ಬರ್ತ್ಯಾ ಅಪ್ಪ” ಎಂದು ಕೇಳಿ ಕೇಳಿ ಸುಸ್ತು ಮಾಡಿದ್ದೆ. ಅಪ್ಪ “ಒಂದು ವಾರ ಬಿಟ್ಟು, 2 ವಾರ ಬಿಟ್ಟು” ಎಂದು ಅನ್ನುತ್ತಿದ್ದರು. ಇನ್ನು ಮಾಸ್ಕೋದಿಂದ ಹೊರಡುವ ದಿನ ಬಂತು, “ಏನು ಬೇಕು ಮಗಳೇ?” ಎಂದು ಕೇಳಿದ್ದರು, “ಸೂಟ್ ಕೇಸ್ ತುಂಬ ಚಾಕ್ಲೇಟ್ ಬೇಕಪ್ಪ” ಎಂದು ಅಂದಿದ್ದೆ. ಅದನ್ನೆಲ್ಲಾ ಹೇಳಿ ಮರೆತೂ ಹೋಗಿದ್ದೆ.

ಸರಿ ಅಪ್ಪ ಮನೆಗೆ ಬಂದರು, ನಾನು ಸ್ಕೂಲಿಗೆ ಹೋಗಿದ್ದೆ, ಸಂಜೆ ಬಂದರೆ ಒಂದು ರೂಮಿನಲ್ಲಿ ದೊಡ್ಡ ಸೂಟ್ ಕೇಸ್ ಇಟ್ಟಿದ್ದರು. ತೆಗೆದರೆ ನಿಜವಾಗಿಯೂ ಅದರ ಪೂರ್ತಿ ಚಾಕ್ಲೇಟ್ ಇತ್ತು. ಒಂದು 35 ಕೆಜಿಯ ಸೂಟ್ಕೇಸಿನ ತುಂಬಾ ಚಾಕ್ಲೇಟ್ ತಂದಿದ್ದರು ಅಪ್ಪ. ಅವರನ್ನ ಕಸ್ಟಮ್ಸಿನಲ್ಲಿ ಹಿಡಿದ್ದಿದ್ದರೂ ಸಹ. ವೈಟ್ ಪಾಸ್‌ಪೋರ್ಟ್ ಮತ್ತು ಮಗಳಿಗೆ ಚಾಕ್ಲೇಟ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಸಬೂಬಿನೊಂದಿಗೆ ಬಿಟ್ಟಿದ್ದರಂತೆ. ಒಂದು ಸೂಟ್ಕೇಸಿನ ಬಟ್ಟೆಯನ್ನೆಲ್ಲಾ ಬಿಟ್ಟು, ಮಗಳಿಗೆ ಚಾಕ್ಲೇಟ್ ತಂದಿದ್ದರು ಅಪ್ಪ. ನಾನು ಸುಮ್ಮನೆ ಹೇಳುವ ಮಾತನ್ನ ನಿಜ ಮಾಡೋದು ಅಪ್ಪ ಮಾತ್ರ.

ಘಟನೆ 2
ನಾನು ಸೆಕೆಂಡ್ ಪಿಯೂಸಿಯಲ್ಲಿ ಓದೋದು ಬಿಟ್ಟು ಆರಾಮಾಗಿ ಸಂಗೀತ, ನಾಟಕ ಅಂದುಕೊಂಡಿದ್ದೆ. ಹೋಗಲಿ ಅದರಲ್ಲೂ ಏನು ಅಂತಹ ಸಾಧನೆ ಮಾಡಿರಲ್ಲಿಲ್ಲ. ಸುಮ್ಮನೆ ಕ್ಲಾಸ್ ಚಕ್ಕರ್ ಹಾಕೋಕೆ ಒಂದು ನೆಪ ಅಷ್ಟೆ. ಎಸ್ಸೆಸೆಲ್ಸಿಯಲ್ಲಿ ವಿಪರೀತ ಮಾರ್ಕ್ಸ್ ತೆಗೆದುಕೊಂಡ ಓವರ್ ಕಾನ್ಫೆಡೆನ್ಸ್ ನನ್ನಲ್ಲಿತ್ತು. “ಬರತ್ತೆ ಬಿಡು ಮಾರ್ಕ್ಸ್” ಅನ್ನೋ ಕೊಬ್ಬು. ಅಪ್ಪ ಒಂದೆರೆಡು ಬಾರಿ ಮೆತ್ತಗೆ ಹೇಳಿದ್ದರು, “ಹತ್ತನೇ ಕ್ಲಾಸಿನ ಹಾಗಲ್ಲ ಇದು, ಸರಿಯಾಗಿ ಓದು, ಇದು ನಿನ್ನ ಜೀವನದ ಟರ್ನಿಂಗ್ ಪಾಯಿಂಟ್” ಎಂದು. ನಾನು ಆರಾಮಾಗಿಯೇ ಇದ್ದೆ. ಎಕ್ಸಾಮು ಬರೆದೆ. ಅತೀ ಸಾಧಾರಣ ಮಾರ್ಕ್ಸು, ಅತೀ ಸಾಧಾರಣ ಸಿಇಟಿ ರ್ಯಾಂಕು ಬಂತು. ಅಪ್ಪನಿಗೆ ಇದ್ದ ಕನೆಕ್ಷನ್ಸು, ದುಡ್ಡು ಇವೆಲ್ಲವೂ ನನ್ನನ್ನ ಕಾಪಾಡುತ್ತದೆ ಎಂಬ ಕೆಟ್ಟ ಕಾನ್ಫಿಡೆನ್ಸು ನನ್ನಲ್ಲಿತ್ತು. ಅಪ್ಪ ರಿಸೆಲ್ಟ್ ನೋಡಿ ಒಂದೇ ಮಾತು ಹೇಳಿದರು, “ನಿನ್ನ ಯೋಗ್ಯತೆಗೆ ಎಲ್ಲಿ ಸೀಟು ಸಿಗತ್ತೋ ಅಲ್ಲಿ ಸೇರ್ಕೊಂಡು ಇಂಜಿನಿಯರಿಂಗ್ ಮುಗಿಸು, ಗುಡ್ ಲಕ್” ಅಂದರು. “ನೆನೆಪಿರಲಿ ನೀನು ಎಷ್ಟೇ ಮಾರ್ಕ್ಸ್ ತೆಗೆದರೂ ನನ್ನ ಮಗಳೇ ಅದೇನು ಬದಲಾಗಲ್ಲ” ಎಂದು ಸಾಂತ್ವನ ಹೇಳಿ ಹೋದರು.

ನಾನು ಊರಾಚೆ ಕಾಲೇಜಿಗೆ ಸೇರಿದೆ. ದಿನಾ ಬೆಳಗ್ಗೆ 6 ಘಂಟೆಗೆ ಹೊರಟರೆ ಸಂಜೆ 6 ಘಂಟೆಗೆ ಬರುತ್ತಿದ್ದೆ. 1 ವರ್ಷ ಆಟಾಡಿದ್ದಕ್ಕೆ 4 ವರ್ಷ ಒದ್ದಾಡಿದೆ. ಅಪ್ಪ ಸುಮ್ಮನೆ ಮುಗುಳ್ನಗುತ್ತಿದ್ದರು. ಇಂಜಿನಿಯರಿಂಗ್ ಮುಗಿಸಿದ ನಂತರ, “ನೀನು ಯಾರ ಶಿಫಾರಸ್ಸಿನಲ್ಲೋ, ಯಾರ ದುಡ್ಡಲ್ಲೋ ಓದಲ್ಲಿಲ್ಲ ನಿನ್ನ ಯೋಗ್ಯತೆಗೆ ತಕ್ಕ ಹಾಗೆ ಓದಿದೆ, ಯಾವತ್ತೂ ಅಷ್ಟೇ ನೀನು ಕಷ್ಟ ಪಟ್ಟು ನೀನು ದಕ್ಕಿಸಿಕೊಂಡಿದ್ದೇ ನಿನ್ನ ಬಳಿ ಶಾಶ್ವತವಾಗಿ ಉಳಿಯೋದು, ಅಪ್ಪ ಅಮ್ಮ ಫ್ರೀಯಾಗಿ ಕೊಟ್ಟಿದ್ದೂ ಉಳಿಯಲ್ಲ” ಎಂಬ ಅತಿ ದೊಡ್ಡ ಜೀವನದ ಪಾಠವನ್ನು ಹೇಳಿಕೊಟ್ಟರು.

ಇದಾದ ನಂತರ ನಾನು ಯಾವತ್ತೂ ಯಾವುದನ್ನೂ ಲೈಟಾಗಿ ತೆಗೆದುಕೊಳ್ಳಲ್ಲಿಲ್ಲ. ತಲೆ ಬಗ್ಗಿಸಿ ಕೆಲಸ ಮಾಡಿಕೊಂಡು ಹೋಗಿದ್ದೇನೆ. ಅದು ವಿದೇಶದಲ್ಲಿ ಮಾಸ್ಟರ್ಸ್ ಇರಬಹುದು, ಅಥವಾ ಕೆಲಸ ಇರಬಹುದು ಅಥವಾ ಪುಸ್ತಕ-ಲೇಖನ ಬರೆಯೋದಿರಬಹುದು.

ಪ್ರೀತಿ ಮಾಡುತ್ತಲೇ ಅಸಂಖ್ಯಾತ ಜೀವನ ಪಾಠ ಕಲಿಸುತ್ತಿರುವ ಅಪ್ಪನಿಗೆ ಅಪ್ಪನ ದಿನದ ಶುಭಾಶಯಗಳು. ನೀನೆ ನನಗೆ ಸ್ಪೂರ್ತಿ ಅಪ್ಪ. ನನ್ನ ಮೂರನೆಯ ಪುಸ್ತಕವನ್ನ( #AI ಕಥೆಗಳು) ನಿನಗೇ ಅರ್ಪಣೆ ಮಾಡಿದ್ದೇನೆ.

  • ಮೇಘನಾ ಸುಧೀಂದ್ರ

ಇದನ್ನೂ ಓದಿ: ಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....