Homeಕರ್ನಾಟಕಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು...

ಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು…

- Advertisement -
- Advertisement -

ಖ್ಯಾತ ವಿಜ್ಞಾನ ಬರಹಗಾರ, ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ನಿಧನರಾಗಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮಗಳು, ಲೇಖಕಿ ಮೇಘನಾ ಸುಧೀಂದ್ರ ಅವರು ಅಪ್ಪಂದಿರ ದಿನದಂದು ತಮ್ಮ ಅಪ್ಪನ ಬಗ್ಗೆ ಬರೆದ ಬರಹವನ್ನು ಅವರ ನೆನಪಿನಲ್ಲಿ ಇಂದು ಪ್ರಕಟಿಸುತ್ತಿದ್ದೆವೆ.

’ಅಪ್ಪ ಎಂದಾಗಲ್ಲೆಲ್ಲ ನನಗೆ ಎರಡು ಇಂಸಿಡೆಂಟ್ ನೆನಪಾಗುತ್ತದೆ. ನನ್ನ ಪೂರ್ತಿ ಹೆಸರಿನ ಅರ್ಧ ಭಾಗ ಅಪ್ಪನೇ ತುಂಬಿಕೊಂಡಿದ್ದಾರೆ. ಅರ್ಧ ಜನ ನನ್ನನ್ನು “ಸುಧೀಂದ್ರನ ಮಗಳು” ಎಂದು ಗುರುತಿಸಿ ನನ್ನ ಹೆಸರನ್ನೇ ಮರೆಯುವಷ್ಟು ಅಪ್ಪನ್ನನ್ನು ಪ್ರೀತಿಸುವವರಿದ್ದಾರೆ’.
ಘಟನೆ 1
ಒಮ್ಮೆ ಅಪ್ಪ ಕೆಲಸದ ಮೇಲೆ ರಷ್ಯಾದ ಮಾಸ್ಕೋಗೆ ಹೋಗಿದ್ದರು. ಎಂದಿನಂತೆ ಅಪ್ಪನಿಗೆ ದಿನಾ ಫೋನ್ ಮಾಡಿ, “ಯಾವಾಗ ಬರ್ತ್ಯಾ ಅಪ್ಪ, ಯಾವಾಗ ಬರ್ತ್ಯಾ ಅಪ್ಪ” ಎಂದು ಕೇಳಿ ಕೇಳಿ ಸುಸ್ತು ಮಾಡಿದ್ದೆ. ಅಪ್ಪ “ಒಂದು ವಾರ ಬಿಟ್ಟು, 2 ವಾರ ಬಿಟ್ಟು” ಎಂದು ಅನ್ನುತ್ತಿದ್ದರು. ಇನ್ನು ಮಾಸ್ಕೋದಿಂದ ಹೊರಡುವ ದಿನ ಬಂತು, “ಏನು ಬೇಕು ಮಗಳೇ?” ಎಂದು ಕೇಳಿದ್ದರು, “ಸೂಟ್ ಕೇಸ್ ತುಂಬ ಚಾಕ್ಲೇಟ್ ಬೇಕಪ್ಪ” ಎಂದು ಅಂದಿದ್ದೆ. ಅದನ್ನೆಲ್ಲಾ ಹೇಳಿ ಮರೆತೂ ಹೋಗಿದ್ದೆ.

ಸರಿ ಅಪ್ಪ ಮನೆಗೆ ಬಂದರು, ನಾನು ಸ್ಕೂಲಿಗೆ ಹೋಗಿದ್ದೆ, ಸಂಜೆ ಬಂದರೆ ಒಂದು ರೂಮಿನಲ್ಲಿ ದೊಡ್ಡ ಸೂಟ್ ಕೇಸ್ ಇಟ್ಟಿದ್ದರು. ತೆಗೆದರೆ ನಿಜವಾಗಿಯೂ ಅದರ ಪೂರ್ತಿ ಚಾಕ್ಲೇಟ್ ಇತ್ತು. ಒಂದು 35 ಕೆಜಿಯ ಸೂಟ್ಕೇಸಿನ ತುಂಬಾ ಚಾಕ್ಲೇಟ್ ತಂದಿದ್ದರು ಅಪ್ಪ. ಅವರನ್ನ ಕಸ್ಟಮ್ಸಿನಲ್ಲಿ ಹಿಡಿದ್ದಿದ್ದರೂ ಸಹ. ವೈಟ್ ಪಾಸ್‌ಪೋರ್ಟ್ ಮತ್ತು ಮಗಳಿಗೆ ಚಾಕ್ಲೇಟ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಸಬೂಬಿನೊಂದಿಗೆ ಬಿಟ್ಟಿದ್ದರಂತೆ. ಒಂದು ಸೂಟ್ಕೇಸಿನ ಬಟ್ಟೆಯನ್ನೆಲ್ಲಾ ಬಿಟ್ಟು, ಮಗಳಿಗೆ ಚಾಕ್ಲೇಟ್ ತಂದಿದ್ದರು ಅಪ್ಪ. ನಾನು ಸುಮ್ಮನೆ ಹೇಳುವ ಮಾತನ್ನ ನಿಜ ಮಾಡೋದು ಅಪ್ಪ ಮಾತ್ರ.

ಘಟನೆ 2
ನಾನು ಸೆಕೆಂಡ್ ಪಿಯೂಸಿಯಲ್ಲಿ ಓದೋದು ಬಿಟ್ಟು ಆರಾಮಾಗಿ ಸಂಗೀತ, ನಾಟಕ ಅಂದುಕೊಂಡಿದ್ದೆ. ಹೋಗಲಿ ಅದರಲ್ಲೂ ಏನು ಅಂತಹ ಸಾಧನೆ ಮಾಡಿರಲ್ಲಿಲ್ಲ. ಸುಮ್ಮನೆ ಕ್ಲಾಸ್ ಚಕ್ಕರ್ ಹಾಕೋಕೆ ಒಂದು ನೆಪ ಅಷ್ಟೆ. ಎಸ್ಸೆಸೆಲ್ಸಿಯಲ್ಲಿ ವಿಪರೀತ ಮಾರ್ಕ್ಸ್ ತೆಗೆದುಕೊಂಡ ಓವರ್ ಕಾನ್ಫೆಡೆನ್ಸ್ ನನ್ನಲ್ಲಿತ್ತು. “ಬರತ್ತೆ ಬಿಡು ಮಾರ್ಕ್ಸ್” ಅನ್ನೋ ಕೊಬ್ಬು. ಅಪ್ಪ ಒಂದೆರೆಡು ಬಾರಿ ಮೆತ್ತಗೆ ಹೇಳಿದ್ದರು, “ಹತ್ತನೇ ಕ್ಲಾಸಿನ ಹಾಗಲ್ಲ ಇದು, ಸರಿಯಾಗಿ ಓದು, ಇದು ನಿನ್ನ ಜೀವನದ ಟರ್ನಿಂಗ್ ಪಾಯಿಂಟ್” ಎಂದು. ನಾನು ಆರಾಮಾಗಿಯೇ ಇದ್ದೆ. ಎಕ್ಸಾಮು ಬರೆದೆ. ಅತೀ ಸಾಧಾರಣ ಮಾರ್ಕ್ಸು, ಅತೀ ಸಾಧಾರಣ ಸಿಇಟಿ ರ್ಯಾಂಕು ಬಂತು. ಅಪ್ಪನಿಗೆ ಇದ್ದ ಕನೆಕ್ಷನ್ಸು, ದುಡ್ಡು ಇವೆಲ್ಲವೂ ನನ್ನನ್ನ ಕಾಪಾಡುತ್ತದೆ ಎಂಬ ಕೆಟ್ಟ ಕಾನ್ಫಿಡೆನ್ಸು ನನ್ನಲ್ಲಿತ್ತು. ಅಪ್ಪ ರಿಸೆಲ್ಟ್ ನೋಡಿ ಒಂದೇ ಮಾತು ಹೇಳಿದರು, “ನಿನ್ನ ಯೋಗ್ಯತೆಗೆ ಎಲ್ಲಿ ಸೀಟು ಸಿಗತ್ತೋ ಅಲ್ಲಿ ಸೇರ್ಕೊಂಡು ಇಂಜಿನಿಯರಿಂಗ್ ಮುಗಿಸು, ಗುಡ್ ಲಕ್” ಅಂದರು. “ನೆನೆಪಿರಲಿ ನೀನು ಎಷ್ಟೇ ಮಾರ್ಕ್ಸ್ ತೆಗೆದರೂ ನನ್ನ ಮಗಳೇ ಅದೇನು ಬದಲಾಗಲ್ಲ” ಎಂದು ಸಾಂತ್ವನ ಹೇಳಿ ಹೋದರು.

ನಾನು ಊರಾಚೆ ಕಾಲೇಜಿಗೆ ಸೇರಿದೆ. ದಿನಾ ಬೆಳಗ್ಗೆ 6 ಘಂಟೆಗೆ ಹೊರಟರೆ ಸಂಜೆ 6 ಘಂಟೆಗೆ ಬರುತ್ತಿದ್ದೆ. 1 ವರ್ಷ ಆಟಾಡಿದ್ದಕ್ಕೆ 4 ವರ್ಷ ಒದ್ದಾಡಿದೆ. ಅಪ್ಪ ಸುಮ್ಮನೆ ಮುಗುಳ್ನಗುತ್ತಿದ್ದರು. ಇಂಜಿನಿಯರಿಂಗ್ ಮುಗಿಸಿದ ನಂತರ, “ನೀನು ಯಾರ ಶಿಫಾರಸ್ಸಿನಲ್ಲೋ, ಯಾರ ದುಡ್ಡಲ್ಲೋ ಓದಲ್ಲಿಲ್ಲ ನಿನ್ನ ಯೋಗ್ಯತೆಗೆ ತಕ್ಕ ಹಾಗೆ ಓದಿದೆ, ಯಾವತ್ತೂ ಅಷ್ಟೇ ನೀನು ಕಷ್ಟ ಪಟ್ಟು ನೀನು ದಕ್ಕಿಸಿಕೊಂಡಿದ್ದೇ ನಿನ್ನ ಬಳಿ ಶಾಶ್ವತವಾಗಿ ಉಳಿಯೋದು, ಅಪ್ಪ ಅಮ್ಮ ಫ್ರೀಯಾಗಿ ಕೊಟ್ಟಿದ್ದೂ ಉಳಿಯಲ್ಲ” ಎಂಬ ಅತಿ ದೊಡ್ಡ ಜೀವನದ ಪಾಠವನ್ನು ಹೇಳಿಕೊಟ್ಟರು.

ಇದಾದ ನಂತರ ನಾನು ಯಾವತ್ತೂ ಯಾವುದನ್ನೂ ಲೈಟಾಗಿ ತೆಗೆದುಕೊಳ್ಳಲ್ಲಿಲ್ಲ. ತಲೆ ಬಗ್ಗಿಸಿ ಕೆಲಸ ಮಾಡಿಕೊಂಡು ಹೋಗಿದ್ದೇನೆ. ಅದು ವಿದೇಶದಲ್ಲಿ ಮಾಸ್ಟರ್ಸ್ ಇರಬಹುದು, ಅಥವಾ ಕೆಲಸ ಇರಬಹುದು ಅಥವಾ ಪುಸ್ತಕ-ಲೇಖನ ಬರೆಯೋದಿರಬಹುದು.

ಪ್ರೀತಿ ಮಾಡುತ್ತಲೇ ಅಸಂಖ್ಯಾತ ಜೀವನ ಪಾಠ ಕಲಿಸುತ್ತಿರುವ ಅಪ್ಪನಿಗೆ ಅಪ್ಪನ ದಿನದ ಶುಭಾಶಯಗಳು. ನೀನೆ ನನಗೆ ಸ್ಪೂರ್ತಿ ಅಪ್ಪ. ನನ್ನ ಮೂರನೆಯ ಪುಸ್ತಕವನ್ನ( #AI ಕಥೆಗಳು) ನಿನಗೇ ಅರ್ಪಣೆ ಮಾಡಿದ್ದೇನೆ.

  • ಮೇಘನಾ ಸುಧೀಂದ್ರ

ಇದನ್ನೂ ಓದಿ: ಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...