Homeಕರ್ನಾಟಕಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು...

ಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು…

- Advertisement -
- Advertisement -

ಖ್ಯಾತ ವಿಜ್ಞಾನ ಬರಹಗಾರ, ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ನಿಧನರಾಗಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮಗಳು, ಲೇಖಕಿ ಮೇಘನಾ ಸುಧೀಂದ್ರ ಅವರು ಅಪ್ಪಂದಿರ ದಿನದಂದು ತಮ್ಮ ಅಪ್ಪನ ಬಗ್ಗೆ ಬರೆದ ಬರಹವನ್ನು ಅವರ ನೆನಪಿನಲ್ಲಿ ಇಂದು ಪ್ರಕಟಿಸುತ್ತಿದ್ದೆವೆ.

’ಅಪ್ಪ ಎಂದಾಗಲ್ಲೆಲ್ಲ ನನಗೆ ಎರಡು ಇಂಸಿಡೆಂಟ್ ನೆನಪಾಗುತ್ತದೆ. ನನ್ನ ಪೂರ್ತಿ ಹೆಸರಿನ ಅರ್ಧ ಭಾಗ ಅಪ್ಪನೇ ತುಂಬಿಕೊಂಡಿದ್ದಾರೆ. ಅರ್ಧ ಜನ ನನ್ನನ್ನು “ಸುಧೀಂದ್ರನ ಮಗಳು” ಎಂದು ಗುರುತಿಸಿ ನನ್ನ ಹೆಸರನ್ನೇ ಮರೆಯುವಷ್ಟು ಅಪ್ಪನ್ನನ್ನು ಪ್ರೀತಿಸುವವರಿದ್ದಾರೆ’.
ಘಟನೆ 1
ಒಮ್ಮೆ ಅಪ್ಪ ಕೆಲಸದ ಮೇಲೆ ರಷ್ಯಾದ ಮಾಸ್ಕೋಗೆ ಹೋಗಿದ್ದರು. ಎಂದಿನಂತೆ ಅಪ್ಪನಿಗೆ ದಿನಾ ಫೋನ್ ಮಾಡಿ, “ಯಾವಾಗ ಬರ್ತ್ಯಾ ಅಪ್ಪ, ಯಾವಾಗ ಬರ್ತ್ಯಾ ಅಪ್ಪ” ಎಂದು ಕೇಳಿ ಕೇಳಿ ಸುಸ್ತು ಮಾಡಿದ್ದೆ. ಅಪ್ಪ “ಒಂದು ವಾರ ಬಿಟ್ಟು, 2 ವಾರ ಬಿಟ್ಟು” ಎಂದು ಅನ್ನುತ್ತಿದ್ದರು. ಇನ್ನು ಮಾಸ್ಕೋದಿಂದ ಹೊರಡುವ ದಿನ ಬಂತು, “ಏನು ಬೇಕು ಮಗಳೇ?” ಎಂದು ಕೇಳಿದ್ದರು, “ಸೂಟ್ ಕೇಸ್ ತುಂಬ ಚಾಕ್ಲೇಟ್ ಬೇಕಪ್ಪ” ಎಂದು ಅಂದಿದ್ದೆ. ಅದನ್ನೆಲ್ಲಾ ಹೇಳಿ ಮರೆತೂ ಹೋಗಿದ್ದೆ.

ಸರಿ ಅಪ್ಪ ಮನೆಗೆ ಬಂದರು, ನಾನು ಸ್ಕೂಲಿಗೆ ಹೋಗಿದ್ದೆ, ಸಂಜೆ ಬಂದರೆ ಒಂದು ರೂಮಿನಲ್ಲಿ ದೊಡ್ಡ ಸೂಟ್ ಕೇಸ್ ಇಟ್ಟಿದ್ದರು. ತೆಗೆದರೆ ನಿಜವಾಗಿಯೂ ಅದರ ಪೂರ್ತಿ ಚಾಕ್ಲೇಟ್ ಇತ್ತು. ಒಂದು 35 ಕೆಜಿಯ ಸೂಟ್ಕೇಸಿನ ತುಂಬಾ ಚಾಕ್ಲೇಟ್ ತಂದಿದ್ದರು ಅಪ್ಪ. ಅವರನ್ನ ಕಸ್ಟಮ್ಸಿನಲ್ಲಿ ಹಿಡಿದ್ದಿದ್ದರೂ ಸಹ. ವೈಟ್ ಪಾಸ್‌ಪೋರ್ಟ್ ಮತ್ತು ಮಗಳಿಗೆ ಚಾಕ್ಲೇಟ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಸಬೂಬಿನೊಂದಿಗೆ ಬಿಟ್ಟಿದ್ದರಂತೆ. ಒಂದು ಸೂಟ್ಕೇಸಿನ ಬಟ್ಟೆಯನ್ನೆಲ್ಲಾ ಬಿಟ್ಟು, ಮಗಳಿಗೆ ಚಾಕ್ಲೇಟ್ ತಂದಿದ್ದರು ಅಪ್ಪ. ನಾನು ಸುಮ್ಮನೆ ಹೇಳುವ ಮಾತನ್ನ ನಿಜ ಮಾಡೋದು ಅಪ್ಪ ಮಾತ್ರ.

ಘಟನೆ 2
ನಾನು ಸೆಕೆಂಡ್ ಪಿಯೂಸಿಯಲ್ಲಿ ಓದೋದು ಬಿಟ್ಟು ಆರಾಮಾಗಿ ಸಂಗೀತ, ನಾಟಕ ಅಂದುಕೊಂಡಿದ್ದೆ. ಹೋಗಲಿ ಅದರಲ್ಲೂ ಏನು ಅಂತಹ ಸಾಧನೆ ಮಾಡಿರಲ್ಲಿಲ್ಲ. ಸುಮ್ಮನೆ ಕ್ಲಾಸ್ ಚಕ್ಕರ್ ಹಾಕೋಕೆ ಒಂದು ನೆಪ ಅಷ್ಟೆ. ಎಸ್ಸೆಸೆಲ್ಸಿಯಲ್ಲಿ ವಿಪರೀತ ಮಾರ್ಕ್ಸ್ ತೆಗೆದುಕೊಂಡ ಓವರ್ ಕಾನ್ಫೆಡೆನ್ಸ್ ನನ್ನಲ್ಲಿತ್ತು. “ಬರತ್ತೆ ಬಿಡು ಮಾರ್ಕ್ಸ್” ಅನ್ನೋ ಕೊಬ್ಬು. ಅಪ್ಪ ಒಂದೆರೆಡು ಬಾರಿ ಮೆತ್ತಗೆ ಹೇಳಿದ್ದರು, “ಹತ್ತನೇ ಕ್ಲಾಸಿನ ಹಾಗಲ್ಲ ಇದು, ಸರಿಯಾಗಿ ಓದು, ಇದು ನಿನ್ನ ಜೀವನದ ಟರ್ನಿಂಗ್ ಪಾಯಿಂಟ್” ಎಂದು. ನಾನು ಆರಾಮಾಗಿಯೇ ಇದ್ದೆ. ಎಕ್ಸಾಮು ಬರೆದೆ. ಅತೀ ಸಾಧಾರಣ ಮಾರ್ಕ್ಸು, ಅತೀ ಸಾಧಾರಣ ಸಿಇಟಿ ರ್ಯಾಂಕು ಬಂತು. ಅಪ್ಪನಿಗೆ ಇದ್ದ ಕನೆಕ್ಷನ್ಸು, ದುಡ್ಡು ಇವೆಲ್ಲವೂ ನನ್ನನ್ನ ಕಾಪಾಡುತ್ತದೆ ಎಂಬ ಕೆಟ್ಟ ಕಾನ್ಫಿಡೆನ್ಸು ನನ್ನಲ್ಲಿತ್ತು. ಅಪ್ಪ ರಿಸೆಲ್ಟ್ ನೋಡಿ ಒಂದೇ ಮಾತು ಹೇಳಿದರು, “ನಿನ್ನ ಯೋಗ್ಯತೆಗೆ ಎಲ್ಲಿ ಸೀಟು ಸಿಗತ್ತೋ ಅಲ್ಲಿ ಸೇರ್ಕೊಂಡು ಇಂಜಿನಿಯರಿಂಗ್ ಮುಗಿಸು, ಗುಡ್ ಲಕ್” ಅಂದರು. “ನೆನೆಪಿರಲಿ ನೀನು ಎಷ್ಟೇ ಮಾರ್ಕ್ಸ್ ತೆಗೆದರೂ ನನ್ನ ಮಗಳೇ ಅದೇನು ಬದಲಾಗಲ್ಲ” ಎಂದು ಸಾಂತ್ವನ ಹೇಳಿ ಹೋದರು.

ನಾನು ಊರಾಚೆ ಕಾಲೇಜಿಗೆ ಸೇರಿದೆ. ದಿನಾ ಬೆಳಗ್ಗೆ 6 ಘಂಟೆಗೆ ಹೊರಟರೆ ಸಂಜೆ 6 ಘಂಟೆಗೆ ಬರುತ್ತಿದ್ದೆ. 1 ವರ್ಷ ಆಟಾಡಿದ್ದಕ್ಕೆ 4 ವರ್ಷ ಒದ್ದಾಡಿದೆ. ಅಪ್ಪ ಸುಮ್ಮನೆ ಮುಗುಳ್ನಗುತ್ತಿದ್ದರು. ಇಂಜಿನಿಯರಿಂಗ್ ಮುಗಿಸಿದ ನಂತರ, “ನೀನು ಯಾರ ಶಿಫಾರಸ್ಸಿನಲ್ಲೋ, ಯಾರ ದುಡ್ಡಲ್ಲೋ ಓದಲ್ಲಿಲ್ಲ ನಿನ್ನ ಯೋಗ್ಯತೆಗೆ ತಕ್ಕ ಹಾಗೆ ಓದಿದೆ, ಯಾವತ್ತೂ ಅಷ್ಟೇ ನೀನು ಕಷ್ಟ ಪಟ್ಟು ನೀನು ದಕ್ಕಿಸಿಕೊಂಡಿದ್ದೇ ನಿನ್ನ ಬಳಿ ಶಾಶ್ವತವಾಗಿ ಉಳಿಯೋದು, ಅಪ್ಪ ಅಮ್ಮ ಫ್ರೀಯಾಗಿ ಕೊಟ್ಟಿದ್ದೂ ಉಳಿಯಲ್ಲ” ಎಂಬ ಅತಿ ದೊಡ್ಡ ಜೀವನದ ಪಾಠವನ್ನು ಹೇಳಿಕೊಟ್ಟರು.

ಇದಾದ ನಂತರ ನಾನು ಯಾವತ್ತೂ ಯಾವುದನ್ನೂ ಲೈಟಾಗಿ ತೆಗೆದುಕೊಳ್ಳಲ್ಲಿಲ್ಲ. ತಲೆ ಬಗ್ಗಿಸಿ ಕೆಲಸ ಮಾಡಿಕೊಂಡು ಹೋಗಿದ್ದೇನೆ. ಅದು ವಿದೇಶದಲ್ಲಿ ಮಾಸ್ಟರ್ಸ್ ಇರಬಹುದು, ಅಥವಾ ಕೆಲಸ ಇರಬಹುದು ಅಥವಾ ಪುಸ್ತಕ-ಲೇಖನ ಬರೆಯೋದಿರಬಹುದು.

ಪ್ರೀತಿ ಮಾಡುತ್ತಲೇ ಅಸಂಖ್ಯಾತ ಜೀವನ ಪಾಠ ಕಲಿಸುತ್ತಿರುವ ಅಪ್ಪನಿಗೆ ಅಪ್ಪನ ದಿನದ ಶುಭಾಶಯಗಳು. ನೀನೆ ನನಗೆ ಸ್ಪೂರ್ತಿ ಅಪ್ಪ. ನನ್ನ ಮೂರನೆಯ ಪುಸ್ತಕವನ್ನ( #AI ಕಥೆಗಳು) ನಿನಗೇ ಅರ್ಪಣೆ ಮಾಡಿದ್ದೇನೆ.

  • ಮೇಘನಾ ಸುಧೀಂದ್ರ

ಇದನ್ನೂ ಓದಿ: ಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...