Homeಕರ್ನಾಟಕತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

ತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮದತ್ತಿ ಸಚಿವ ಪಿ ಕೆ ಸೇಕರ್ ಬಾಬು ಅವರ ನವವಿವಾಹಿತ ಪುತ್ರಿ ಜಯಕಲ್ಯಾಣಿ ಸೋಮವಾರ ತನ್ನ ತಂದೆಯಿಂದ ಬೆದರಿಕೆಗೆ ಒಳಗಾಗಿ ಬೆಂಗಳೂರು ನಗರ ಪೊಲೀಸರಿಂದ ರಕ್ಷಣೆ ಕೋರಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಬಾಬು ಅವರು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಪ್ತರಾಗಿದ್ದಾರೆ ಎಂದು ಡಿಎಚ್‌ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ವೈದ್ಯೆಯಾಗಿರುವ ಜಯಕಲ್ಯಾಣಿ ಅವರು ಕುಟುಂಬದವರ ತೀವ್ರ ವಿರೋಧದ ನಡುವೆಯೂ ಡಿಪ್ಲೊಮಾ ಪದವೀಧರರಾಗಿ ಉದ್ಯಮಿಯಾಗಿರುವ ಸತೀಶ್ ಕುಮಾರ್ ಅವರನ್ನು ವಿವಾಹವಾಗಿದ್ದಾರೆ.

ರಾಜ್ಯದ ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲಸ್ವಾಮಿ ಮಠದಲ್ಲಿ ನಡೆದ ವಿವಾಹದ ನಂತರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಜಯಕಲ್ಯಾಣಿ, “ಸತೀಶ್ ಮತ್ತು ನಾನು ಸುಮಾರು ಆರು ವರ್ಷಗಳಿಂದ ಸ್ನೇಹ ಹೊಂದಿದ್ದೇವೆ. ಮದುವೆಯಾಗಲು ನಮ್ಮ ಮನೆಯನ್ನು ತೊರೆದು ಬಂದಿದ್ದೇವೆ. ನಾವಿಬ್ಬರೂ ಪ್ರಾಪ್ತ ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆಯೊಂದಿಗೆ ಮದುವೆಯ ಮಾಡಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

ಸತೀಶ್‌ ಅವರ ಕುಟುಂಬಕ್ಕೆ ಬೆದರಿಕೆ ಹಾಕಬೇಡಿ ಎಂದು ಜಯಕಲ್ಯಾಣಿ ಅವರು ತನ್ನ ತಂದೆಯಾದ ಸಚಿವ ಪಿ.ಕೆ. ಸೇಕರ್ ಬಾಬು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ವರದಿಯ ಪ್ರಕಾರ ಜಯಕಲ್ಯಾಣಿ ಅವರಿಗೆ 24 ವರ್ಷ, ಸತೀಶ್‌ ಅವರಿಗೆ 27 ವರ್ಷ ವಯಸ್ಸಾಗಿದೆ.

ಮೂಲಗಳ ಪ್ರಕಾರ ಹುಡುಗಿಯ ಮನೆಯವರು ಆಕೆಯನ್ನು ಬೇರೆ ಸಮುದಾಯದ ಶ್ರೀಮಂತ ಕುಟುಂಬಕ್ಕೆ ಮದುವೆ ಮಾಡಲು ಬಯಸಿದ್ದರು. ಆದರೆ ಅವರು ಸತೀಶ್ ಜೊತೆ ಮನೆಬಿಟ್ಟು ತೆರಳಿದ್ದರು. ಇದರ ನಂತರ ಚೆನ್ನೈನಲ್ಲಿ ಜಯಕಲ್ಯಾಣಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.

ವಿವಾಹ ನಡೆಸುವ ಮೊದಲು ದಂಪತಿಗಳ ವಿಚಾರಗಳನ್ನು ತಮಿಳುನಾಡಿನ ನಮ್ಮ ಮೂಲಗಳ ಮೂಲಕ ಪರಿಶೀಲಿಸಿದ್ದೇವೆ ಎಂದು ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮಿ ಅವರು ಡೆಕ್ಕನ್‌ ಹೆರಾಲ್ಡ್‌‌ಗೆ ತಿಳಿಸಿದ್ದಾರೆ.

“ನಾವು ಪ್ರೇಮ ವಿವಾಹಗಳನ್ನು ಬೆಂಬಲಿಸುವುದಿಲ್ಲ. ಆದರೆ ವೈದ್ಯೆಯಾಗಿರುವ ಕಲ್ಯಾಣಿ ತನ್ನ ಒಪ್ಪಿಗೆಯ ವಿರುದ್ಧ ಮದುವೆಯಾಗಲು ನಿರಾಕರಿಸಿ ತನ್ನ ಮನೆಯನ್ನು ತೊರೆದಿದ್ದಾರೆ. ಸತ್ಯಾಂಶ ತಿಳಿದುಕೊಂಡ ನಂತರವೇ ಹಿಂದೂ ಸಂಪ್ರದಾಯದಂತೆ ಮದುವೆ ನಡೆಸಿದ್ದೇವೆ” ಎಂದು ಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾತನಾಡಿ, ಸಚಿವರ ಮಗಳು ರಕ್ಷಣೆ ಕೋರಿ ಇದುವರೆಗೆ ಅವರನ್ನು ಅಥವಾ ಅವರ ಕಚೇರಿಯನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಪೊಲೀಸರು ತಮಗೆ ಸಹಾಯ ಮಾಡಿಲ್ಲ ಎಂದು ಜಯಕಲ್ಯಾಣಿ ಆರೋಪಿಸಿದ್ದಾರೆ. ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ತನ್ನ ತಂದೆ ತನಗೆ ಬೆದರಿಕೆ ಹಾಕಲು ಸಚಿವ ಸ್ಥಾನವನ್ನು ಬಳಸುತ್ತಿದ್ದಾರೆ, ಹೀಗಾಗಿ ಅವರು ಪೊಲೀಸರ ಬೆಂಬಲವನ್ನು ಕೋರಿ ಬೆಂಗಳೂರಿಗೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು-ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....