Homeಕರ್ನಾಟಕತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

ತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮದತ್ತಿ ಸಚಿವ ಪಿ ಕೆ ಸೇಕರ್ ಬಾಬು ಅವರ ನವವಿವಾಹಿತ ಪುತ್ರಿ ಜಯಕಲ್ಯಾಣಿ ಸೋಮವಾರ ತನ್ನ ತಂದೆಯಿಂದ ಬೆದರಿಕೆಗೆ ಒಳಗಾಗಿ ಬೆಂಗಳೂರು ನಗರ ಪೊಲೀಸರಿಂದ ರಕ್ಷಣೆ ಕೋರಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಬಾಬು ಅವರು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಪ್ತರಾಗಿದ್ದಾರೆ ಎಂದು ಡಿಎಚ್‌ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ವೈದ್ಯೆಯಾಗಿರುವ ಜಯಕಲ್ಯಾಣಿ ಅವರು ಕುಟುಂಬದವರ ತೀವ್ರ ವಿರೋಧದ ನಡುವೆಯೂ ಡಿಪ್ಲೊಮಾ ಪದವೀಧರರಾಗಿ ಉದ್ಯಮಿಯಾಗಿರುವ ಸತೀಶ್ ಕುಮಾರ್ ಅವರನ್ನು ವಿವಾಹವಾಗಿದ್ದಾರೆ.

ರಾಜ್ಯದ ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲಸ್ವಾಮಿ ಮಠದಲ್ಲಿ ನಡೆದ ವಿವಾಹದ ನಂತರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಜಯಕಲ್ಯಾಣಿ, “ಸತೀಶ್ ಮತ್ತು ನಾನು ಸುಮಾರು ಆರು ವರ್ಷಗಳಿಂದ ಸ್ನೇಹ ಹೊಂದಿದ್ದೇವೆ. ಮದುವೆಯಾಗಲು ನಮ್ಮ ಮನೆಯನ್ನು ತೊರೆದು ಬಂದಿದ್ದೇವೆ. ನಾವಿಬ್ಬರೂ ಪ್ರಾಪ್ತ ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆಯೊಂದಿಗೆ ಮದುವೆಯ ಮಾಡಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

ಸತೀಶ್‌ ಅವರ ಕುಟುಂಬಕ್ಕೆ ಬೆದರಿಕೆ ಹಾಕಬೇಡಿ ಎಂದು ಜಯಕಲ್ಯಾಣಿ ಅವರು ತನ್ನ ತಂದೆಯಾದ ಸಚಿವ ಪಿ.ಕೆ. ಸೇಕರ್ ಬಾಬು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ವರದಿಯ ಪ್ರಕಾರ ಜಯಕಲ್ಯಾಣಿ ಅವರಿಗೆ 24 ವರ್ಷ, ಸತೀಶ್‌ ಅವರಿಗೆ 27 ವರ್ಷ ವಯಸ್ಸಾಗಿದೆ.

ಮೂಲಗಳ ಪ್ರಕಾರ ಹುಡುಗಿಯ ಮನೆಯವರು ಆಕೆಯನ್ನು ಬೇರೆ ಸಮುದಾಯದ ಶ್ರೀಮಂತ ಕುಟುಂಬಕ್ಕೆ ಮದುವೆ ಮಾಡಲು ಬಯಸಿದ್ದರು. ಆದರೆ ಅವರು ಸತೀಶ್ ಜೊತೆ ಮನೆಬಿಟ್ಟು ತೆರಳಿದ್ದರು. ಇದರ ನಂತರ ಚೆನ್ನೈನಲ್ಲಿ ಜಯಕಲ್ಯಾಣಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.

ವಿವಾಹ ನಡೆಸುವ ಮೊದಲು ದಂಪತಿಗಳ ವಿಚಾರಗಳನ್ನು ತಮಿಳುನಾಡಿನ ನಮ್ಮ ಮೂಲಗಳ ಮೂಲಕ ಪರಿಶೀಲಿಸಿದ್ದೇವೆ ಎಂದು ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮಿ ಅವರು ಡೆಕ್ಕನ್‌ ಹೆರಾಲ್ಡ್‌‌ಗೆ ತಿಳಿಸಿದ್ದಾರೆ.

“ನಾವು ಪ್ರೇಮ ವಿವಾಹಗಳನ್ನು ಬೆಂಬಲಿಸುವುದಿಲ್ಲ. ಆದರೆ ವೈದ್ಯೆಯಾಗಿರುವ ಕಲ್ಯಾಣಿ ತನ್ನ ಒಪ್ಪಿಗೆಯ ವಿರುದ್ಧ ಮದುವೆಯಾಗಲು ನಿರಾಕರಿಸಿ ತನ್ನ ಮನೆಯನ್ನು ತೊರೆದಿದ್ದಾರೆ. ಸತ್ಯಾಂಶ ತಿಳಿದುಕೊಂಡ ನಂತರವೇ ಹಿಂದೂ ಸಂಪ್ರದಾಯದಂತೆ ಮದುವೆ ನಡೆಸಿದ್ದೇವೆ” ಎಂದು ಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾತನಾಡಿ, ಸಚಿವರ ಮಗಳು ರಕ್ಷಣೆ ಕೋರಿ ಇದುವರೆಗೆ ಅವರನ್ನು ಅಥವಾ ಅವರ ಕಚೇರಿಯನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಪೊಲೀಸರು ತಮಗೆ ಸಹಾಯ ಮಾಡಿಲ್ಲ ಎಂದು ಜಯಕಲ್ಯಾಣಿ ಆರೋಪಿಸಿದ್ದಾರೆ. ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ತನ್ನ ತಂದೆ ತನಗೆ ಬೆದರಿಕೆ ಹಾಕಲು ಸಚಿವ ಸ್ಥಾನವನ್ನು ಬಳಸುತ್ತಿದ್ದಾರೆ, ಹೀಗಾಗಿ ಅವರು ಪೊಲೀಸರ ಬೆಂಬಲವನ್ನು ಕೋರಿ ಬೆಂಗಳೂರಿಗೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು-ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...