Homeಕರ್ನಾಟಕಟಿಕೆಟ್ ಬೇಡವೆಂದ ಶ್ಯಾಮನೂರು, ಪಾಠ ಕಲಿಯಬೇಕಾದವರು ಯಾರು?

ಟಿಕೆಟ್ ಬೇಡವೆಂದ ಶ್ಯಾಮನೂರು, ಪಾಠ ಕಲಿಯಬೇಕಾದವರು ಯಾರು?

- Advertisement -
- Advertisement -

ಕೆಪಿಸಿಸಿ ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು ಕಾಲಕಾಲಕ್ಕೆ ಬದಲಾಗುತ್ತಿದ್ದರೂ, ಬದಲಾಗದ ಒಂದು ಹುದ್ದೆ ಇತ್ತು. ಅದು ರಾಜ್ಯ ಖಜಾಂಚಿಯದ್ದು. ದಶಕಗಳ ಕಾಲ ಈ ಹುದ್ದೆಯಲ್ಲಿ ಕೂತಿದ್ದು ಶಾಮನೂರು ಶಿವಶಂಕರಪ್ಪ. ಬಹುಶಃ ಆ ಕಾಲಕ್ಕೆ ಅವರೇ ದುಡ್ಡಿದ್ದ ಧಣಿಯಿದ್ದಿರಬಹುದು. ಇವರು ಕಾಂಗ್ರೆಸ್ಸಿಗೆ ಅಂತಹ ದೊಡ್ಡ ಕೊಡುಗೆ ಏನು ಕೊಟ್ಟರು ಯಾರಿಗೂ ಗೊತ್ತಿಲ್ಲ. ಆದರೆ, ಶಾಮನೂರು ಮಾತ್ರ ದೊಡ್ಡದಾಗುತ್ತಾ ಹೋದರು. ಎರಡೆರಡು ಮೆಡಿಕಲ್ ಕಾಲೇಜುಗಳ ಒಡೆಯರಾದರು. ಒಂದೇ ಮೆಡಿಕಲ್ ಕಾಲೇಜಿನಲ್ಲೂ ಸರ್ಕಾರೀ ಕಾಲೇಜಿಗಿಂತ ಹೆಚ್ಚು ಸೀಟುಗಳನ್ನು ಹೊಂದಿದ್ದರು.

1984ರಿಂದ ಚನ್ನಯ್ಯ ಒಡೆಯರ್  ರಂತಹ ಸಜ್ಜನ ರಾಜಕಾರಣಿ ಮೂರು ಸಾರಿ ಲೋಕಸಭೆ ಸದಸ್ಯರಾಗಿ ಕಾಂಗ್ರೆಸ್ಸಿನಿಂದಲೇ ಗೆದ್ದು ಬಂದಿದ್ದರು. ಯಾವಾಗ ಶಾಮನೂರು ಫ್ಯಾಮಿಲಿಯ ಹಿಡಿತಕ್ಕೆ ದಾವಣಗೆರೆ ಜಿಲ್ಲೆ ಸಂಪೂರ್ಣವಾಗಿ ಹೋಯಿತೋ ಅಲ್ಲಿಂದಾಚೆಗೆ ಒಮ್ಮೆ ಮಾತ್ರ (ಒಂದೇ ವರ್ಷ ಇದ್ದ 12ನೇ ಲೋಕಸಭೆಗೆ) ಶಿವಶಂಕರಪ್ಪನವರು ಆಯ್ಕೆಯಾಗಿದ್ದು ಬಿಟ್ಟರೆ ಉದ್ದಕ್ಕೂ ಬಿಜೆಪಿಯೇ ಗೆಲ್ಲುತ್ತಾ ಬಂದಿದೆ.

ಅವರ ಕಣ್ಣೆದುರಿಗೇ ದಾವಣಗೆರೆಯಲ್ಲಿ ಕಾಂಗ್ರೆಸ್ ಕುಸಿಯುತ್ತಾ ಹೋಯಿತು. ಶಾಮನೂರರಿಗೆ ಕಿಂಚಿತ್ತೂ ಬೇಸರವಾಗಲಿಲ್ಲ. ಏಕೆಂದರೆ ಆ ಜಾಗದಲ್ಲಿ ಬೆಳೆದ ಬಿಜೆಪಿಯ ಜಿಲ್ಲಾ ನೇತಾರರು ಇವರ ಬೀಗರೇ ಆಗಿದ್ದರು. ಅವರ ಬೀಗರೂ ಇವರಂತೆಯೇ ಫ್ಯೂಡಲ್ ನಡವಳಿಕೆಯ, ಜಾತೀವಾದಿಗಳಾಗಿದ್ದರು ಬಿಟ್ಟರೆ ಮುಸ್ಲಿಂ ದ್ವೇಷ ತುಂಬಿಕೊಂಡ ಕೋಮುವಾದಿಗಳಾಗಿರಲಿಲ್ಲ. ಆದರೆ, ಇದೇ ಫ್ಯೂಡಲ್ ನಡವಳಿಕೆ, ದೊರೆಗಳಂತಹ ಬದುಕು ಮತ್ತು ಧೋರಣೆಯು ಸಮಾಜದಲ್ಲಿ ಒಳಿತನ್ನೇನೂ ಹುಟ್ಟಿಹಾಕುವುದಿಲ್ಲವಲ್ಲಾ? ಅಂತಹ ಒಳಿತು ಹುಟ್ಟಿಹಾಕಬಹುದಾದ ಕಮ್ಯುನಿಸ್ಟ್ ಚಳವಳಿಯು ಅರ್ಧ ತನ್ನದೇ ತಪ್ಪಿನಿಂದ, ಇನ್ನರ್ಧ ದಾವಣಗೆರೆ ಧಣಿಗಳ ಹುನ್ನಾರದಿಂದ ಕುಸಿದು ಹೋಗಿತ್ತು.

ಫ್ಯೂಡಲ್ ಜಾತಿವಾದವು ಮಧ್ಯ ಕರ್ನಾಟಕದಲ್ಲಿ ಕೋಮುವಾದಕ್ಕೆ ನೀರೆರೆದು ಪೋಷಿಸಿತು. ಅದು ತಪ್ಪೆಂದಾಗಲೀ, ಅದನ್ನು ತಡೆಗಟ್ಟಬೇಕೆಂದಾಗಲೀ ‘ಧಣಿ’ಗಳಿಗೆ ಎಂದೂ ಅನಿಸಲಿಲ್ಲ. ಬೀಗರಿಬ್ಬರೂ ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳುತ್ತಲೇ ಹೋದರು. ಇದಕ್ಕೆ ಪರ್ಯಾಯವಾಗಿ ಬೇರೆ ನಾಯಕತ್ವ ಬೆಳೆಸುವ ಕೆಲಸವನ್ನು ಕಾಂಗ್ರೆಸ್ ಎಂದೂ ಮಾಡಲಿಲ್ಲ. ದಾವಣಗೆರೆ ನಗರದ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಶಿವಶಂಕರಪ್ಪನವರಿಗೆ ಟಿಕೆಟ್ ಕೊಟ್ಟು, ಇನ್ನೊಂದರಲ್ಲಿ ಅಲ್ಪಸಂಖ್ಯಾತ ಸಮುದಾಯದ ಸೈಫುಲ್ಲಾ ಅವರಿಗೆ ಬಿ.ಫಾರಂ ನೀಡಿದಾಗ, ಅದನ್ನು ಕಸಿದು ನಾಮಿನೇಷನ್ ಹಾಕದಂತೆ ಮಾಡಿದ ಕುಟುಂಬ ಇದು. ಆಗ ಇವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವ ಬದಲು, ಅವರ ಪರವಾಗಿಯೇ ಕಾಂಗ್ರೆಸ್ ಪಕ್ಷವೂ ನಿಂತಿತು.

ಕರಾವಳಿಯಲ್ಲಿ ಬೆಳೆದ ಕೋಮುವಾದದ ಪ್ರಭಾವವು, ಮಲೆನಾಡಿನಿಂದ ಈಗ ಮಧ್ಯಕರ್ನಾಟಕಕ್ಕೆ ಹರಡಿದೆ. ಬಸವಣ್ಣನ ತತ್ವ ಪಾಲಿಸುತ್ತೇವೆಂದು ಹೇಳುವ ಸಮುದಾಯದ ಅಖಿಲ ಭಾರತ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಶಾಮನೂರರಿಗೆ ಕೋಮುವಾದ ಮತ್ತು ಬಸವ ತತ್ವದ ನಡುವಿನ ವೈರುಧ್ಯ ಅರ್ಥವಾಗಲು ಸಾಧ್ಯವೇ ಇರಲಿಲ್ಲ. ಬದಲಿಗೆ ಲಿಂಗಾಯಿತ ಚಳವಳಿ ಆರಂಭವಾದಾಗ ಅದರ ವಿರುದ್ಧ ಮಾತಾಡಿದ ವೀರಶೈವ ಮಹಾಸಭಾದ ಅಧ್ಯಕ್ಷರು ಅವರೇ ಆಗಿದ್ದರು. ಈ ರೀತಿಯ ಮನೋಭಾವ ಇರುವವರು ಬಿಜೆಪಿಗೆ ವಿರುದ್ಧವಾದ ಒಂದು ವೈಚಾರಿಕ ನೆಲೆಯನ್ನು ಕಟ್ಟುವುದು ಸಾಧ್ಯವೇ ಇಲ್ಲ.

ಯಾವ ಕೊಡುಗೆ ಇಲ್ಲದಿದ್ದರೂ ಹಳೆಯ ಫ್ಯೂಡಲ್ ಕುಟುಂಬಗಳಿಗೆ ಮಣೆ ಹಾಕುತ್ತಾ ಬಂದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಶಾಮನೂರು ಇಕ್ಕಟ್ಟಿಗೆ ಸಿಕ್ಕಿಸಿದ್ದಾರೆ. ಕಳೆದ ಸಾರಿ, ಮೋದಿ ಅಲೆಯ ಹೊರತಾಗಿಯೂ ಕೇವಲ 17,000 ಮತಗಳ ಅಂತರದಲ್ಲಿ ಮಗ ಶಾಮನೂರು ಸೋತಿದ್ದರು. ವಿಧಾನಸಭಾ ಚುನಾವಣೆಯಲ್ಲೂ ಸೋತು ಕುಳಿತಿರುವ ಮಲ್ಲಿಕಾರ್ಜುನ್ ತಾನು ಸ್ಪರ್ಧಿಸುವ ಕುರಿತು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತಾಡುತ್ತಿದ್ದರು. ಅವರಿಗಿಂತ ತಂದೆ ಶಾಮನೂರರಿಗೆ ಕೊಟ್ಟರೆ ಗೆಲುವಿನ ಸಾಧ್ಯತೆ ಹೆಚ್ಚೆಂದು ಬಗೆದ ನಾಯಕರು ಅವರ ಹೆಸರು ಘೋಷಣೆ ಮಾಡಿದರು. ಇದೀಗ ಶಿವಶಂಕರಪ್ಪನವರು ಕುಟುಂಬದಲ್ಲಿ ಯಾರೂ ಸ್ಪರ್ಧಿಸಲ್ಲ. ತಾನು ಸೂಚಿಸುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಟಿಕೆಟ್ ಕೊಡಿ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆ.ಎಚ್.ಪಟೇಲರ ಸಂಬಂಧಿ, ರೈತ ಹೋರಾಟಗಾರ ತೇಜಸ್ವಿ ಪಟೇಲ್‍ರಿಗೆ ಟಿಕೆಟ್ ಕೊಡಲು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಬೇರೆ ಯಾರಿಗೇ ಆದರೂ, ಮುತುವರ್ಜಿ ವಹಿಸಿ ಪ್ರಚಾರ ಮಾಡಲು ಶಾಮನೂರು ಫ್ಯಾಮಿಲಿ ಮುಂದಾಗುವುದು ಅಸಾಧ್ಯ.

ಶಾಮನೂರರಂತೆ ಫ್ಯೂಡಲ್ ಕುಟುಂಬದಿಂದ ಬಂದಿರದಿದ್ದರೂ, ಬಹಳ ಉಡಾಫೆಯಿಂದ ವರ್ತಿಸುತ್ತಿದ್ದ ಅಂಬರೀಷ್‍ರ ವಿಚಾರದಲ್ಲೂ ಕಾಂಗ್ರೆಸ್ ಪೆಟ್ಟು ತಿಂದಿತು. 2013ರ ಚುನಾವಣೆಯಲ್ಲಿ ಗೆದ್ದು ಮಂತ್ರಿಯಾದ ಅಂಬರೀಷ್ ಜನರ ಮನ್ನಣೆ ಕಳೆದುಕೊಂಡಿದ್ದರು. ಅವರು ಮತ್ತೆ ಗೆಲ್ಲುವುದು ಸಾಧ್ಯವಿಲ್ಲ ಎಂದು ಕಾಂಗ್ರೆಸ್ಸಿಗೂ ಗೊತ್ತಿತ್ತು; ಅಂಬರೀಷ್‍ಗೂ ಗೊತ್ತಿತ್ತು. ಅವರು ಟಿಕೆಟ್ ಬೇಕು ಎಂದು ಅರ್ಜಿಯೂ ಹಾಕಲಿಲ್ಲ; ಕೇಳಲೂ ಇಲ್ಲ. ಆದರೆ, ಅವರ ಮನೆ ಬಾಗಿಲಿಗೇ ಬಿ.ಫಾರಂ ತೆಗೆದುಕೊಂಡು ಹೋಗಿ ಕೊಡಲಾಯಿತು. ಅದನ್ನು ಅಂಬರೀಷ್ ತಿರಸ್ಕರಿಸಿದರು.

ವ್ಯಕ್ತಿಗಳಿಗಿಂತ ಪಕ್ಷ ಮುಖ್ಯ ಎನ್ನುವುದು ಕಾಂಗ್ರೆಸ್ ಪಕ್ಷದಲ್ಲೇ ಇಲ್ಲ. ಅದರ ಅತ್ಯಂತ ತುದಿಯಲ್ಲಿರುವ ಕುಟುಂಬವು ಪಕ್ಷಕ್ಕಿಂತ ಮುಖ್ಯ ಎಂದು ಹಲವು ಸಾರಿ ಸಾಬೀತಾಗಿದೆ. ರಾಹುಲ್‍ಗಾಂಧಿ ರಾಜ್ಯ ಪದಾಧಿಕಾರಿಗಳು ಮತ್ತು ಇತರ ಹಿರಿಯ ನಾಯಕರ ಅಭಿಪ್ರಾಯಗಳಿಗೆ ಹೆಚ್ಚಿನ ಗೌರವ ಕೊಡುತ್ತಾರೆಂದೂ, ಅದೇ ಕಾರಣಕ್ಕೆ ತನ್ನ ಅಭಿಪ್ರಾಯಕ್ಕೆ ವಿರುದ್ಧವಾಗಿ ದೆಹಲಿ ಮತ್ತು ಪ.ಬಂಗಾಳಗಳಲ್ಲಿ ಮೈತ್ರಿಯಾಗಲಿಲ್ಲವೆಂದೂ ಹೇಳಬಹುದು. ಆದರೆ, ಇದು ಎಷ್ಟು ದಿನ ಉಳಿಯುತ್ತದೆ ಕಾದು ನೋಡಬೇಕು.

ಸಂಘಟನಾ ಶಕ್ತಿಯನ್ನು ಕಟ್ಟಿಕೊಳ್ಳದ, ತನ್ನದೇ ಆದ ವೈಚಾರಿಕ ನೆಲೆಯನ್ನು ಪಕ್ಷದಲ್ಲೂ, ಸಮಾಜದಲ್ಲೂ ತರದ ಪಕ್ಷವೊಂದು ಹೇಗೆ ತಾನೇ ದೀರ್ಘಕಾಲ ಉಳಿದುಕೊಂಡೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...