Homeಕರ್ನಾಟಕಪೊಲೀಸ್ ವಶದಲ್ಲಿದ್ದ RTI ಕಾರ್ಯಕರ್ತನ ಸಾವು: ಕೊಲೆ ಆರೋಪ ಮಾಡಿದ ಪತ್ನಿ

ಪೊಲೀಸ್ ವಶದಲ್ಲಿದ್ದ RTI ಕಾರ್ಯಕರ್ತನ ಸಾವು: ಕೊಲೆ ಆರೋಪ ಮಾಡಿದ ಪತ್ನಿ

- Advertisement -
- Advertisement -

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ RTI ಕಾರ್ಯಕರ್ತನೊಬ್ಬ ಪೊಲೀಸ್ ವಶದಲ್ಲಿದ್ದಾಗ ಸೇತುವೆಯಿಂದ ಬಿದ್ದು ಸಾವನಪ್ಪಿರುವ ಘಟನೆ ಜರುಗಿದೆ. ಇದು ಪೊಲೀಸರೆ ಮಾಡಿರುವ ಕೊಲೆ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ.

ಕಬ್ಬಳ ಗ್ರಾಮದ ಹರೀಶ್ ಹೆಚ್.ಆರ್ ಎಂಬುವವರು ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪ ಎದುರಿಸುತ್ತಿದ್ದರು. ಈ ಕುರಿತು ವಿಚಾರಣೆ ನಡೆಸುತ್ತಿದ್ದ ಪೊಲೀಸರು ಅವರನ್ನು ಕಾಕನೂರಿನಲ್ಲಿ ವಶಕ್ಕೆ ಪಡೆದು ಗಾಂಧಿನಗರ ಪೊಲೀಸ್ ಠಾಣೆಗೆ ಕರೆತರುವ ವೇಳೆ ದಾವಣಗೆರೆ ಹೊರವಲಯದಲ್ಲಿ ಫ್ಲೈಓವರ್ ರಸ್ತೆಯಲ್ಲಿ ಕಾರಿನಿಂದ ಹೊರಬಂದ ಹರೀಶ್ ಸೇತುವೆಯಿಂದ ಕೆಳಕ್ಕೆ ಜಿಗಿದು ಸರ್ವೀಸ್ ರಸ್ತೆಯ ಮೇಲೆ ಬಿದ್ದಿದ್ದಾರೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರೀಶ್ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿರುವ ಅವರ ಪತ್ನಿ ಲತಾ, “ನನ್ನ ಪತಿ ಆತ್ಮಹತ್ಯೆ  ಮಾಡಿಕೊಂಡಿಲ್ಲ. ಬದಲಿಗೆ ಪೊಲೀಸರೆ ಹತ್ಯೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಗಾಂಧಿನಗರ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಕಾನ್ಸ್‌ಸ್ಟೇಬಲ್ ದೇವರಾಜು ಮತ್ತು ಕಾರು ಚಾಲಕ ಇರ್ಷಾದ್‌ರವರು ನನ್ನ ಪತಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ದೌರ್ಜನ್ಯವೆಸಗಿ ಕೊಲೆಗೈದಿದ್ದಾರೆ. ಈ ಕೊಲೆಯಲ್ಲಿ ಕಣಿವೆ ಬಿಳಚಿಯ ಕೆ.ಬಾಬುರಾವ್‌ರವರ ಪಾತ್ರವೂ ಇದೆ ಎಂದು ಆರೋಪಿಸಿ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆವರಗೆರೆ ಗ್ರಾಮದ ಸರ್ವೇ ನಂ 240/2ಬಿರಲ್ಲಿರುವ ಮೂರು ನಿವೇಶನಗಳ ನಕಲಿ ದಾಖಲೆಗಳನ್ನು ಸೃಷ್ಠಿಸಿದ್ದಲ್ಲದೆ, ಬೇರೊಬ್ಬ ಮಹಿಳೆಯೊಬ್ಬರಿಂದ ನಕಲಿ ಕ್ರಯದ ಕರಾರು ಪತ್ರ ನೋಂದಣಿ ಮಾಡಿಸಿದ್ದಾರೆ ಎಂಬ ಆರೋಪ ಹರೀಶ್ ವಿರುದ್ಧ ಕೇಳಿ ಬಂದಿತ್ತು. ಈ ಸಂಬಂಧ ಈಚೆಗೆ ಆಸ್ತಿ ಮೂಲ ಮಾಲೀಕ ಎಂದು ಕೆ ಬಾಬುರಾವ್ ಎಂಬುವರು ಸುದ್ದಿಗೋಷ್ಠಿ‌ ಸಹ ನಡೆಸಿದ್ದರು.

ಇದನ್ನೂ ಓದಿ;  ಪ್ರವೀಣ್ ಪತ್ನಿ ಉದ್ಯೋಗ ರದ್ದಾಗುವುದರಲ್ಲಿ ನಮ್ಮ ಸರ್ಕಾರದ ಹಸ್ತಕ್ಷೇಪವಿಲ್ಲ, ಮರು ನೇಮಕ ಮಾಡಲಾಗುವುದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...