Homeಕರ್ನಾಟಕದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ‌ ಗಾಳಿ ಸೇವಿಸಿ ಇಬ್ಬರು ದಿನಗೂಲಿ ಕಾರ್ಮಿಕರ ಸಾವು

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ‌ ಗಾಳಿ ಸೇವಿಸಿ ಇಬ್ಬರು ದಿನಗೂಲಿ ಕಾರ್ಮಿಕರ ಸಾವು

- Advertisement -
- Advertisement -

ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ‌ ಗಾಳಿ ಸೇವಿಸಿ ಇಬ್ಬರು ದಿನಗೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ, ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಸತ್ಯಪ್ಪ (45) ಹಾಗೂ ಮೈಲಪ್ಪ (42) ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ.

ಯುಗಾದಿ ಹಬ್ಬದ ನಿಮಿತ್ತ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ಪಿಡಿಒ ಮತ್ತು ಅಧ್ಯಕ್ಷರ ಸೂಚನೆ ಮೇರೆಗೆ ಚರಂಡಿಗಳ ಸ್ವಚ್ಛತೆಗೆ ಬಸವನಕೋಟೆ ಗ್ರಾಮ ಪಂಚಾಯಿತಿ ಓರ್ವ ಪೌರ ಕಾರ್ಮಿಕ ಹಾಗೂ ಮೂವರು ದಿನಗೂಲಿ ಕಾರ್ಮಿಕರನ್ನು ಸ್ವಚ್ಛತಾ ಕಾರ್ಯಕ್ಕೆ ನಿಯೋಜನೆ ಮಾಡಿತ್ತು.

ಚರಂಡಿಯಲ್ಲಿ ತ್ಯಾಜ್ಯ ಕಟ್ಟಿಕೊಂಡಿದೆ ಎಂದು ಸ್ವಚ್ಛತೆಗೆ ಇಳಿದಿದ್ದ ಈ ಇಬ್ಬರೂ ದಿನಗೂಲಿ ಕಾರ್ಮಿಕರು ವಿಷಗಾಳಿ ಸೇವಿಸಿ ಅಸ್ವಸ್ಥರಾಗಿದ್ದರು. ಅವರಿಗೆ ಚಿಕಿತ್ಸೆ ಕೊಡಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರೂ ಮೃತಪಟ್ಟಿದ್ದಾರೆ.

”ಯಾವುದೇ ಮುಂಜಾಗ್ರತ ಕ್ರಮ ವಹಿಸದೆ ಏಕಾಏಕಿ ಚರಂಡಿ ಸ್ವಚ್ಛಗೊಳಿಸಲು ಇಳಿಸಿದ್ದೇ ಈ ಕಾರ್ಮಿಕರ ಸಾವಿಗೆ ಕಾರಣ. ಇದಕ್ಕೆ ಪಿಡಿಓ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗುಜರಾತ್‌: ಕಳ್ಳರೆಂದು ಶಂಕಿಸಿ ಇಬ್ಬರು ವಲಸೆ ಕಾರ್ಮಿಕರ ಕೊಲೆ

ಈ ಘಟನೆ ಬಗ್ಗೆ ದಲಿತ ಸಂಘಟನೆ ಮುಖಂಡ ಮಂಜುನಾಥ್ ಮಾತನಾಡಿ, ”ಈ ಇಬ್ಬರು ದಿನಗೂಲಿ ಕಾರ್ಮಿಕರಿಗೆ ಸರಿಯಾದ ಊಟ ನೀಡದೆ, ಅವರಿಗೆ ಮದ್ಯಪಾನ ನೀಡಲಾಗಿದೆ. ನಂತರ ಚರಂಡಿಯ ವಿಷಗಾಳಿ ಸೇವನೆಯಿಂದ ಈ ದುರಂತ ನಡೆದಿದೆ. ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದರು ಸಹ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ಮಿಕರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ಎರಡು ಕುಟುಂಬದ ಒಬ್ಬೊಬ್ಬರಿಗೆ ಸರ್ಕಾರಿ ಕೆಲಸ ಕೊಡಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಬಸವನಕೋಟೆ ಗ್ರಾಪಂ ಅಧ್ಯಕ್ಷ ಭೀಮಪ್ಪ ಮಾತನಾಡಿ, ”ಕಳೆದ ಮೂರ್ನಾಲ್ಕು ದಿನಗಳಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ. ಗ್ರಾಮ ಪಂಚಾಯಿತಿಯಲ್ಲಿ ಒಬ್ಬರು ಮಾತ್ರ ಖಾಯಂ ಪೌರ ಕಾರ್ಮಿಕರಿರುವುದರಿಂದ ಮೂವರು ದಿನಗೂಲಿ ಕಾರ್ಮಿಕರನ್ನು ಕರೆಸಿಕೊಂಡು ಸ್ವಚ್ಛತೆ ಕೆಲಸ ಮಾಡಿಸುತ್ತಿದ್ದೇವೆ. ಅವರಿಗೆ ಚರಂಡಿ ಸ್ವಚ್ಛಗೊಳಿಸುವ ವೇಳೆ ಯಾರೋ ಮದ್ಯವನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಮದ್ಯ ಸೇವಿಸಿದ ಇಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈಗ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬ ಬೇಡಿಕೆ ಬಂದಿದೆ. ಪರಿಹಾರ ನೀಡಲು ಗ್ರಾಮ ಪಂಚಾಯಿತಿ ಒಪ್ಪಿಕೊಂಡಿದೆ ಮತ್ತು ಗ್ರಾ. ಪಂ ಯಲ್ಲಿ ಖಾಲಿ ಇರುವ ಇಬ್ಬರು ಪೌರ ಕಾರ್ಮಿಕರ ಹುದ್ದೆಯನ್ನು ಅವರ ಕುಟುಂಬಕ್ಕೆ ನೀಡಲು ತೀರ್ಮಾನ ಮಾಡುತ್ತೇವೆ ಎಂದರು. ಆದರೆ ಕಾರ್ಮಿಕರ ಸಾವಿಗೆ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವೇ ತಿಳಿದುಬರುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...