Homeಕರ್ನಾಟಕದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ‌ ಗಾಳಿ ಸೇವಿಸಿ ಇಬ್ಬರು ದಿನಗೂಲಿ ಕಾರ್ಮಿಕರ ಸಾವು

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ‌ ಗಾಳಿ ಸೇವಿಸಿ ಇಬ್ಬರು ದಿನಗೂಲಿ ಕಾರ್ಮಿಕರ ಸಾವು

- Advertisement -
- Advertisement -

ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಕಾರಿ‌ ಗಾಳಿ ಸೇವಿಸಿ ಇಬ್ಬರು ದಿನಗೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ, ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಸತ್ಯಪ್ಪ (45) ಹಾಗೂ ಮೈಲಪ್ಪ (42) ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ.

ಯುಗಾದಿ ಹಬ್ಬದ ನಿಮಿತ್ತ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ಪಿಡಿಒ ಮತ್ತು ಅಧ್ಯಕ್ಷರ ಸೂಚನೆ ಮೇರೆಗೆ ಚರಂಡಿಗಳ ಸ್ವಚ್ಛತೆಗೆ ಬಸವನಕೋಟೆ ಗ್ರಾಮ ಪಂಚಾಯಿತಿ ಓರ್ವ ಪೌರ ಕಾರ್ಮಿಕ ಹಾಗೂ ಮೂವರು ದಿನಗೂಲಿ ಕಾರ್ಮಿಕರನ್ನು ಸ್ವಚ್ಛತಾ ಕಾರ್ಯಕ್ಕೆ ನಿಯೋಜನೆ ಮಾಡಿತ್ತು.

ಚರಂಡಿಯಲ್ಲಿ ತ್ಯಾಜ್ಯ ಕಟ್ಟಿಕೊಂಡಿದೆ ಎಂದು ಸ್ವಚ್ಛತೆಗೆ ಇಳಿದಿದ್ದ ಈ ಇಬ್ಬರೂ ದಿನಗೂಲಿ ಕಾರ್ಮಿಕರು ವಿಷಗಾಳಿ ಸೇವಿಸಿ ಅಸ್ವಸ್ಥರಾಗಿದ್ದರು. ಅವರಿಗೆ ಚಿಕಿತ್ಸೆ ಕೊಡಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರೂ ಮೃತಪಟ್ಟಿದ್ದಾರೆ.

”ಯಾವುದೇ ಮುಂಜಾಗ್ರತ ಕ್ರಮ ವಹಿಸದೆ ಏಕಾಏಕಿ ಚರಂಡಿ ಸ್ವಚ್ಛಗೊಳಿಸಲು ಇಳಿಸಿದ್ದೇ ಈ ಕಾರ್ಮಿಕರ ಸಾವಿಗೆ ಕಾರಣ. ಇದಕ್ಕೆ ಪಿಡಿಓ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗುಜರಾತ್‌: ಕಳ್ಳರೆಂದು ಶಂಕಿಸಿ ಇಬ್ಬರು ವಲಸೆ ಕಾರ್ಮಿಕರ ಕೊಲೆ

ಈ ಘಟನೆ ಬಗ್ಗೆ ದಲಿತ ಸಂಘಟನೆ ಮುಖಂಡ ಮಂಜುನಾಥ್ ಮಾತನಾಡಿ, ”ಈ ಇಬ್ಬರು ದಿನಗೂಲಿ ಕಾರ್ಮಿಕರಿಗೆ ಸರಿಯಾದ ಊಟ ನೀಡದೆ, ಅವರಿಗೆ ಮದ್ಯಪಾನ ನೀಡಲಾಗಿದೆ. ನಂತರ ಚರಂಡಿಯ ವಿಷಗಾಳಿ ಸೇವನೆಯಿಂದ ಈ ದುರಂತ ನಡೆದಿದೆ. ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದರು ಸಹ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ಮಿಕರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ಎರಡು ಕುಟುಂಬದ ಒಬ್ಬೊಬ್ಬರಿಗೆ ಸರ್ಕಾರಿ ಕೆಲಸ ಕೊಡಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಬಸವನಕೋಟೆ ಗ್ರಾಪಂ ಅಧ್ಯಕ್ಷ ಭೀಮಪ್ಪ ಮಾತನಾಡಿ, ”ಕಳೆದ ಮೂರ್ನಾಲ್ಕು ದಿನಗಳಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ. ಗ್ರಾಮ ಪಂಚಾಯಿತಿಯಲ್ಲಿ ಒಬ್ಬರು ಮಾತ್ರ ಖಾಯಂ ಪೌರ ಕಾರ್ಮಿಕರಿರುವುದರಿಂದ ಮೂವರು ದಿನಗೂಲಿ ಕಾರ್ಮಿಕರನ್ನು ಕರೆಸಿಕೊಂಡು ಸ್ವಚ್ಛತೆ ಕೆಲಸ ಮಾಡಿಸುತ್ತಿದ್ದೇವೆ. ಅವರಿಗೆ ಚರಂಡಿ ಸ್ವಚ್ಛಗೊಳಿಸುವ ವೇಳೆ ಯಾರೋ ಮದ್ಯವನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಮದ್ಯ ಸೇವಿಸಿದ ಇಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈಗ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬ ಬೇಡಿಕೆ ಬಂದಿದೆ. ಪರಿಹಾರ ನೀಡಲು ಗ್ರಾಮ ಪಂಚಾಯಿತಿ ಒಪ್ಪಿಕೊಂಡಿದೆ ಮತ್ತು ಗ್ರಾ. ಪಂ ಯಲ್ಲಿ ಖಾಲಿ ಇರುವ ಇಬ್ಬರು ಪೌರ ಕಾರ್ಮಿಕರ ಹುದ್ದೆಯನ್ನು ಅವರ ಕುಟುಂಬಕ್ಕೆ ನೀಡಲು ತೀರ್ಮಾನ ಮಾಡುತ್ತೇವೆ ಎಂದರು. ಆದರೆ ಕಾರ್ಮಿಕರ ಸಾವಿಗೆ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವೇ ತಿಳಿದುಬರುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...