Homeಚಳವಳಿದಾವಣಗೆರೆ: ಹೈವೆ ಬಂದ್ ಮಾಡಿ ರಸ್ತೆ ಮಧ್ಯದಲ್ಲಿಯೇ ರಕ್ತದಾನ ಮಾಡಿದ ರೈತರು

ದಾವಣಗೆರೆ: ಹೈವೆ ಬಂದ್ ಮಾಡಿ ರಸ್ತೆ ಮಧ್ಯದಲ್ಲಿಯೇ ರಕ್ತದಾನ ಮಾಡಿದ ರೈತರು

ಒಂದು ಟನ್ ಕಬ್ಬಿಗೆ ಕನಿಷ್ಟ 3500 ರೂ ನಿಗಧಿ ಮಾಡಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಒಂದು ಟನ್ ಕಬ್ಬಿಗೆ ಕನಿಷ್ಟ 3500 ರೂ ನಿಗಧಿ ಮಾಡಬೇಕು, ಎಲ್ಲಾ ಬೆಳೆಗಳಿಗೂ ನ್ಯಾಯಯುತ ಬೆಲೆ ನಿಗಧಿಯಾಗಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ಇಂದು ದಾವಣಗೆರೆಯಲ್ಲಿ ಹೈವೆ ಬಂದ್ ಮಾಡಿ, ರಸ್ತೆ ಮಧ್ಯದಲ್ಲಿಯೇ ರಕ್ತದಾನ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷರಾದ ತೇಜಸ್ವಿ ಪಟೇಲ್‌ರವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ರೈತರ ಆದಾಯ ದ್ವಿಗುಣ ಮಾಡ್ತೀವಿ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ರೈತರು ಬೆಳೆದ ಬೆಳೆಗಳಿಗೆ ಯಾವುದೇ ಬೆಲೆ ಹೆಚ್ಚಳ ಆಗುತ್ತಿಲ್ಲ. ಈಗ ಎಫ್‌ ಆರ್‌ ಪಿ ರೇಟ್ ಹೆಚ್ಚು ಮಾಡಿದ್ದೀವಿ ಎನ್ನುತ್ತಾರೆ. ಆದರೆ ಅದರಿಂದ ರೈತರಿಗೆ ಯಾವುದೇ ಲಾಭವಾಗುತ್ತಿಲ್ಲ” ಎಂದು ಕಿಡಿಕಾರಿದರು.

ಮೊದಲು ಒಂದು ಟನ್ ಕಬ್ಬಿಗೆ 90 ಕೆಜಿ ಸಕ್ಕರೆ ಇಳುವರಿ ಬಂದರೆ ಕನಿಷ್ಟ ದರ ನಿಗಧಿ ಮಾಡುತ್ತಿದ್ದರು. ಆದರೆ ಈಗ ಎನ್‌ಡಿಎ ಸರ್ಕಾರ ಕನಿಷ್ಟ ಸಕ್ಕರೆ ಇಳುವರಿಯನ್ನು 102 ಕೆಜಿಗೆ ಏರಿಸಿದೆ. ಹಾಗಾಗಿ ಎಫ್‌ ಆರ್‌ ಪಿ ರೇಟ್ ಹೆಚ್ಚು ಮಾಡುವುದರಿಂದ ಅದು ಸಕ್ಕರೆ ಕಾರ್ಖಾನೆಗೆ ಲಾಭ ಹೊರತು ಬೆಳೆಗಾರರಿಗಲ್ಲ. ರೈತರ ಹೆಸರೇಳಿಕೊಂಡು ಕಾರ್ಖಾನೆಗಳು ಲಾಭ ಮಾಡಿಕೊಳ್ಳುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ರೈತರಿಗೆ ಚಿಲ್ಲರೆ ದುಡ್ಡು ಕೊಡುವುದನ್ನು ಸರ್ಕಾರ ದೊಡ್ಡ ಪ್ರಚಾರ ಮಾಡುತ್ತದೆ. ಆದರೆ ಬಂಡವಾಳಶಾಹಿಗಳಿಗೆ 10 ಲಕ್ಷ ಕೋಟಿ ರೂ ಸಾಲ ಮನ್ನಾ ಮಾಡುವುದನ್ನು ಗೌಪ್ಯವಿಡುತ್ತಾರೆ ಏಕೆ ಎಂದು ಪ್ರಶ್ನಿಸಿದರು.

ಭಾರೀ ಮಳೆಗೆ 10 ಎಕರೆ ಕಬ್ಬು ನಷ್ಟ ಮಾಡಿಕೊಂಡ ರೈತ ಪೂಜಾರಿ ಕಲ್ಲೇಶ್ವಪ್ಪ ಮತ್ತು 6 ಎಕರೆ ಕಬ್ಬು ನಷ್ಟ ಮಾಡಿಕೊಂಡ ಪ್ರಸನ್ನ ಕುಮಾರ್ ಎಂಬುವವರು ರಕ್ತದಾನ ಮಾಡಿ ಪ್ರತಿಭಟಿಸಿದರು. ಸರ್ಕಾರ ಕೂಡಲೇ ಪರಿಹಾರ ನೀಡಬೇಕೆಂದು 6 ಕ್ಕೂ ಹೆಚ್ಚು ಜನ ನಡು ರಸ್ತೆಯಲ್ಲಿಯೇ ರಕ್ತದಾನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲವಾರು ರೈತರು ತಾವು ಬೆಳೆದಿರುವ ಕಡಲೆ ಬೀಜವನ್ನು ಜನರಿಗೆ ಉಚಿತವಾಗಿ ವಿತರಣೆ ಮಾಡುವ ಮೂಲಕ ಸರ್ಕಾರದ ಮೇಲಿನ ಅಸಮಾಧಾನ ಹೊರ ಹಾಕಿದ್ದಾರೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಹಕ್ಕೊತ್ತಾಯ ಪತ್ರ ಸ್ವೀಕರಿಸುವವಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ; ತೀರ್ಥಹಳ್ಳಿ: ಸಮಾಜವಾದಿ-ಗಾಂಧಿವಾದಿ-ವಿಶ್ವಮಾನವರ ಕರ್ಮಭೂಮಿಯಲ್ಲಿ ಸಂಕುಚಿತ ರಾಜಕೀಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...