Homeಚಳವಳಿದಾವಣಗೆರೆ: ಹೈವೆ ಬಂದ್ ಮಾಡಿ ರಸ್ತೆ ಮಧ್ಯದಲ್ಲಿಯೇ ರಕ್ತದಾನ ಮಾಡಿದ ರೈತರು

ದಾವಣಗೆರೆ: ಹೈವೆ ಬಂದ್ ಮಾಡಿ ರಸ್ತೆ ಮಧ್ಯದಲ್ಲಿಯೇ ರಕ್ತದಾನ ಮಾಡಿದ ರೈತರು

ಒಂದು ಟನ್ ಕಬ್ಬಿಗೆ ಕನಿಷ್ಟ 3500 ರೂ ನಿಗಧಿ ಮಾಡಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಒಂದು ಟನ್ ಕಬ್ಬಿಗೆ ಕನಿಷ್ಟ 3500 ರೂ ನಿಗಧಿ ಮಾಡಬೇಕು, ಎಲ್ಲಾ ಬೆಳೆಗಳಿಗೂ ನ್ಯಾಯಯುತ ಬೆಲೆ ನಿಗಧಿಯಾಗಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ಇಂದು ದಾವಣಗೆರೆಯಲ್ಲಿ ಹೈವೆ ಬಂದ್ ಮಾಡಿ, ರಸ್ತೆ ಮಧ್ಯದಲ್ಲಿಯೇ ರಕ್ತದಾನ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷರಾದ ತೇಜಸ್ವಿ ಪಟೇಲ್‌ರವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ರೈತರ ಆದಾಯ ದ್ವಿಗುಣ ಮಾಡ್ತೀವಿ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ರೈತರು ಬೆಳೆದ ಬೆಳೆಗಳಿಗೆ ಯಾವುದೇ ಬೆಲೆ ಹೆಚ್ಚಳ ಆಗುತ್ತಿಲ್ಲ. ಈಗ ಎಫ್‌ ಆರ್‌ ಪಿ ರೇಟ್ ಹೆಚ್ಚು ಮಾಡಿದ್ದೀವಿ ಎನ್ನುತ್ತಾರೆ. ಆದರೆ ಅದರಿಂದ ರೈತರಿಗೆ ಯಾವುದೇ ಲಾಭವಾಗುತ್ತಿಲ್ಲ” ಎಂದು ಕಿಡಿಕಾರಿದರು.

ಮೊದಲು ಒಂದು ಟನ್ ಕಬ್ಬಿಗೆ 90 ಕೆಜಿ ಸಕ್ಕರೆ ಇಳುವರಿ ಬಂದರೆ ಕನಿಷ್ಟ ದರ ನಿಗಧಿ ಮಾಡುತ್ತಿದ್ದರು. ಆದರೆ ಈಗ ಎನ್‌ಡಿಎ ಸರ್ಕಾರ ಕನಿಷ್ಟ ಸಕ್ಕರೆ ಇಳುವರಿಯನ್ನು 102 ಕೆಜಿಗೆ ಏರಿಸಿದೆ. ಹಾಗಾಗಿ ಎಫ್‌ ಆರ್‌ ಪಿ ರೇಟ್ ಹೆಚ್ಚು ಮಾಡುವುದರಿಂದ ಅದು ಸಕ್ಕರೆ ಕಾರ್ಖಾನೆಗೆ ಲಾಭ ಹೊರತು ಬೆಳೆಗಾರರಿಗಲ್ಲ. ರೈತರ ಹೆಸರೇಳಿಕೊಂಡು ಕಾರ್ಖಾನೆಗಳು ಲಾಭ ಮಾಡಿಕೊಳ್ಳುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ರೈತರಿಗೆ ಚಿಲ್ಲರೆ ದುಡ್ಡು ಕೊಡುವುದನ್ನು ಸರ್ಕಾರ ದೊಡ್ಡ ಪ್ರಚಾರ ಮಾಡುತ್ತದೆ. ಆದರೆ ಬಂಡವಾಳಶಾಹಿಗಳಿಗೆ 10 ಲಕ್ಷ ಕೋಟಿ ರೂ ಸಾಲ ಮನ್ನಾ ಮಾಡುವುದನ್ನು ಗೌಪ್ಯವಿಡುತ್ತಾರೆ ಏಕೆ ಎಂದು ಪ್ರಶ್ನಿಸಿದರು.

ಭಾರೀ ಮಳೆಗೆ 10 ಎಕರೆ ಕಬ್ಬು ನಷ್ಟ ಮಾಡಿಕೊಂಡ ರೈತ ಪೂಜಾರಿ ಕಲ್ಲೇಶ್ವಪ್ಪ ಮತ್ತು 6 ಎಕರೆ ಕಬ್ಬು ನಷ್ಟ ಮಾಡಿಕೊಂಡ ಪ್ರಸನ್ನ ಕುಮಾರ್ ಎಂಬುವವರು ರಕ್ತದಾನ ಮಾಡಿ ಪ್ರತಿಭಟಿಸಿದರು. ಸರ್ಕಾರ ಕೂಡಲೇ ಪರಿಹಾರ ನೀಡಬೇಕೆಂದು 6 ಕ್ಕೂ ಹೆಚ್ಚು ಜನ ನಡು ರಸ್ತೆಯಲ್ಲಿಯೇ ರಕ್ತದಾನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲವಾರು ರೈತರು ತಾವು ಬೆಳೆದಿರುವ ಕಡಲೆ ಬೀಜವನ್ನು ಜನರಿಗೆ ಉಚಿತವಾಗಿ ವಿತರಣೆ ಮಾಡುವ ಮೂಲಕ ಸರ್ಕಾರದ ಮೇಲಿನ ಅಸಮಾಧಾನ ಹೊರ ಹಾಕಿದ್ದಾರೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಹಕ್ಕೊತ್ತಾಯ ಪತ್ರ ಸ್ವೀಕರಿಸುವವಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ; ತೀರ್ಥಹಳ್ಳಿ: ಸಮಾಜವಾದಿ-ಗಾಂಧಿವಾದಿ-ವಿಶ್ವಮಾನವರ ಕರ್ಮಭೂಮಿಯಲ್ಲಿ ಸಂಕುಚಿತ ರಾಜಕೀಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...