Homeಅಂತರಾಷ್ಟ್ರೀಯದಾವೂದ್, ಹಫೀಜ್ ಹೆಸರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದ ಪಾಕ್!

ದಾವೂದ್, ಹಫೀಜ್ ಹೆಸರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದ ಪಾಕ್!

1993 ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಇಬ್ರಾಹಿಂ ʼಭಯೋತ್ಪಾದಕʼ ಎಂದು ಪಾಕಿಸ್ತಾನ ಒಪ್ಪಿಕೊಂಡಿರುವುದು ಇದೇ ಮೊದಲು.

- Advertisement -
- Advertisement -

ಕಣ್ಮರೆಯಾಗಿರುವ ದರೋಡೆಕೋರ ದಾವೂದ್ ಇಬ್ರಾಹಿಂ, ಲಷ್ಕರ್-ಎ-ತೈಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಇನ್ನೂ ಕೆಲವು ತಾಲಿಬಾನ್ ನಾಯಕರ ಹೆಸರನ್ನು ಪಾಕಿಸ್ತಾನವು ಭಯೋತ್ಪಾದಕರ ಪಟ್ಟಿಗೆ ಸೇರಿಸಿ, ಆಸ್ತಿ ಜಪ್ತಿ, ಶಸ್ತ್ರಾಸ್ತ್ರ ನಿರ್ಬಂಧ ಮತ್ತು ಪ್ರಯಾಣ ನಿಷೇಧವನ್ನು ವಿಧಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

1993 ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಇಬ್ರಾಹಿಂ ʼಭಯೋತ್ಪಾದಕʼ ಎಂದು ಪಾಕಿಸ್ತಾನ ಒಪ್ಪಿಕೊಂಡಿರುವುದು ಇದೇ ಮೊದಲು.

ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ಗೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು ತೋರಿಸುವ ಪ್ರಯತ್ನದಲ್ಲಿ ಪಾಕಿಸ್ತಾನ ಈ ನಿರ್ಧಾರ ತೆಗೆದುಕೊಂಡಿದೆ.

ತನ್ನ ಹೆಸರನ್ನು “ಕಪ್ಪು ಪಟ್ಟಿ” ಗೆ ಸೇರಿಸುವುದನ್ನು ತಡೆಯಲು 27 ಅಂಶಗಳ ಕ್ರಿಯಾ ಯೋಜನೆಯೊಂದಿಗೆ ಸಂಪೂರ್ಣ ಅನುಸರಣೆ ಸಾಧಿಸಲು ಪಾಕ್ ಫೆಬ್ರವರಿಯಲ್ಲಿ ಸಮಯವನ್ನು ನೀಡಿತ್ತು.

ಈ ವಿಷಯದ ಬಗ್ಗೆ ಎರಡು ಅಧಿಸೂಚನೆಗಳನ್ನು ಆಗಸ್ಟ್ 18 ರಂದು ಪಾಕಿಸ್ತಾನ ಸರ್ಕಾರ ಹೊರಡಿಸಿದೆ. ಇದು, ನಿಷೇಧಿತ ಗುಂಪು ಮತ್ತು ವ್ಯಕ್ತಿಗಳ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಆದೇಶಿಸಿವೆ. ಹಣಕಾಸು ಸಂಸ್ಥೆಗಳ ಮೂಲಕ ಹಣದ ವರ್ಗಾವಣೆ ವ್ಯವಹಾರವನ್ನು ನಿಷೇಧಿಸಲಾಗಿದೆ ಎಂದು ದಿ ನ್ಯೂಸ್ ಇಂಟರ್ನ್ಯಾಷನಲ್ ವರದಿ ಮಾಡಿದೆ.

ಜೈಶ್-ಎ-ಮೊಹಮ್ಮದ್‌ ಸಂಘಟನೆಯ ಮೊಹಮ್ಮದ್ ಮಸೂದ್ ಅಜರ್, ಮುಲ್ಲಾ ಫಜ್ಲುಲ್ಲಾ ಮತ್ತು ಜಾಕಿಯೂರ್ ರೆಹಮಾನ್ ಲಖ್ವಿ ಸೇರಿದಂತೆ ಇತರರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಆದೇಶ ಎಲ್‌ಇಟಿ, ಜೈಶ್-ಎ-ಮೊಹಮ್ಮದ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಿದೆ.

ಇದರ ನಡುವೆ ಪಾಕಿಸ್ತಾನವು ಇಬ್ರಾಹಿಂನ ಕೊನೆಯ ಭೇಟಿಯ ಕೆಲವು ವಿಳಾಸಗಳನ್ನು ಪಟ್ಟಿ ಮಾಡಿ, ಐದು ಪಾಸ್‌ಪೋರ್ಟ್‌ಗಳನ್ನು ಹೊಂದಿದೆ ಎಂದು ಉಲ್ಲೇಖಿಸಿದೆ.

ಆದಾಗ್ಯೂ, ಅವೆಲ್ಲವನ್ನೂ ದುರುಪಯೋಗದ ಅಡಿಯಲ್ಲಿ ಟ್ಯಾಗ್ ಮಾಡಿ, ಇಬ್ರಾಹಿಂನ ವಿಳಾಸ ಮತ್ತು ಆತನ ಇತರ ಆಸ್ತಿಗಳನ್ನು ಕರಾಚಿಯಲ್ಲಿ ಪಟ್ಟಿ ಮಾಡಲಾಗಿದೆ.

ವಿಶ್ವಸಂಸ್ಥೆಯು ಮೇ ತಿಂಗಳಲ್ಲಿ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು. ಇದು, ಪ್ರಯಾಣ ನಿಷೇಧ, ಆಸ್ತಿಗಳ ಜಪ್ತಿ ಮತ್ತು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಳ್ಳುವ ನಿರ್ಬಂಧವನ್ನು ಹೇರಿತ್ತು.

ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ಸದಸ್ಯತ್ವ ಹೊಂದಿರುವ ಭಾರತವು, ಆರ್ಥಿಕ ಅಪರಾಧಗಳನ್ನು ತಡೆಯುವಲ್ಲಿ ಅಂತರರಾಷ್ಟ್ರೀಯ ಮಾನದಂಡಗಳನ್ನು ಪೂರೈಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಾಕಿಸ್ತಾನಕ್ಕೆ ಪದೇ ಪದೇ ಹೇಳಿತ್ತು.


ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...