Homeಅಂತರಾಷ್ಟ್ರೀಯದಾವೂದ್, ಹಫೀಜ್ ಹೆಸರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದ ಪಾಕ್!

ದಾವೂದ್, ಹಫೀಜ್ ಹೆಸರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದ ಪಾಕ್!

1993 ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಇಬ್ರಾಹಿಂ ʼಭಯೋತ್ಪಾದಕʼ ಎಂದು ಪಾಕಿಸ್ತಾನ ಒಪ್ಪಿಕೊಂಡಿರುವುದು ಇದೇ ಮೊದಲು.

- Advertisement -
- Advertisement -

ಕಣ್ಮರೆಯಾಗಿರುವ ದರೋಡೆಕೋರ ದಾವೂದ್ ಇಬ್ರಾಹಿಂ, ಲಷ್ಕರ್-ಎ-ತೈಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಇನ್ನೂ ಕೆಲವು ತಾಲಿಬಾನ್ ನಾಯಕರ ಹೆಸರನ್ನು ಪಾಕಿಸ್ತಾನವು ಭಯೋತ್ಪಾದಕರ ಪಟ್ಟಿಗೆ ಸೇರಿಸಿ, ಆಸ್ತಿ ಜಪ್ತಿ, ಶಸ್ತ್ರಾಸ್ತ್ರ ನಿರ್ಬಂಧ ಮತ್ತು ಪ್ರಯಾಣ ನಿಷೇಧವನ್ನು ವಿಧಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

1993 ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಇಬ್ರಾಹಿಂ ʼಭಯೋತ್ಪಾದಕʼ ಎಂದು ಪಾಕಿಸ್ತಾನ ಒಪ್ಪಿಕೊಂಡಿರುವುದು ಇದೇ ಮೊದಲು.

ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ಗೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು ತೋರಿಸುವ ಪ್ರಯತ್ನದಲ್ಲಿ ಪಾಕಿಸ್ತಾನ ಈ ನಿರ್ಧಾರ ತೆಗೆದುಕೊಂಡಿದೆ.

ತನ್ನ ಹೆಸರನ್ನು “ಕಪ್ಪು ಪಟ್ಟಿ” ಗೆ ಸೇರಿಸುವುದನ್ನು ತಡೆಯಲು 27 ಅಂಶಗಳ ಕ್ರಿಯಾ ಯೋಜನೆಯೊಂದಿಗೆ ಸಂಪೂರ್ಣ ಅನುಸರಣೆ ಸಾಧಿಸಲು ಪಾಕ್ ಫೆಬ್ರವರಿಯಲ್ಲಿ ಸಮಯವನ್ನು ನೀಡಿತ್ತು.

ಈ ವಿಷಯದ ಬಗ್ಗೆ ಎರಡು ಅಧಿಸೂಚನೆಗಳನ್ನು ಆಗಸ್ಟ್ 18 ರಂದು ಪಾಕಿಸ್ತಾನ ಸರ್ಕಾರ ಹೊರಡಿಸಿದೆ. ಇದು, ನಿಷೇಧಿತ ಗುಂಪು ಮತ್ತು ವ್ಯಕ್ತಿಗಳ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಆದೇಶಿಸಿವೆ. ಹಣಕಾಸು ಸಂಸ್ಥೆಗಳ ಮೂಲಕ ಹಣದ ವರ್ಗಾವಣೆ ವ್ಯವಹಾರವನ್ನು ನಿಷೇಧಿಸಲಾಗಿದೆ ಎಂದು ದಿ ನ್ಯೂಸ್ ಇಂಟರ್ನ್ಯಾಷನಲ್ ವರದಿ ಮಾಡಿದೆ.

ಜೈಶ್-ಎ-ಮೊಹಮ್ಮದ್‌ ಸಂಘಟನೆಯ ಮೊಹಮ್ಮದ್ ಮಸೂದ್ ಅಜರ್, ಮುಲ್ಲಾ ಫಜ್ಲುಲ್ಲಾ ಮತ್ತು ಜಾಕಿಯೂರ್ ರೆಹಮಾನ್ ಲಖ್ವಿ ಸೇರಿದಂತೆ ಇತರರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಆದೇಶ ಎಲ್‌ಇಟಿ, ಜೈಶ್-ಎ-ಮೊಹಮ್ಮದ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಿದೆ.

ಇದರ ನಡುವೆ ಪಾಕಿಸ್ತಾನವು ಇಬ್ರಾಹಿಂನ ಕೊನೆಯ ಭೇಟಿಯ ಕೆಲವು ವಿಳಾಸಗಳನ್ನು ಪಟ್ಟಿ ಮಾಡಿ, ಐದು ಪಾಸ್‌ಪೋರ್ಟ್‌ಗಳನ್ನು ಹೊಂದಿದೆ ಎಂದು ಉಲ್ಲೇಖಿಸಿದೆ.

ಆದಾಗ್ಯೂ, ಅವೆಲ್ಲವನ್ನೂ ದುರುಪಯೋಗದ ಅಡಿಯಲ್ಲಿ ಟ್ಯಾಗ್ ಮಾಡಿ, ಇಬ್ರಾಹಿಂನ ವಿಳಾಸ ಮತ್ತು ಆತನ ಇತರ ಆಸ್ತಿಗಳನ್ನು ಕರಾಚಿಯಲ್ಲಿ ಪಟ್ಟಿ ಮಾಡಲಾಗಿದೆ.

ವಿಶ್ವಸಂಸ್ಥೆಯು ಮೇ ತಿಂಗಳಲ್ಲಿ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು. ಇದು, ಪ್ರಯಾಣ ನಿಷೇಧ, ಆಸ್ತಿಗಳ ಜಪ್ತಿ ಮತ್ತು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಳ್ಳುವ ನಿರ್ಬಂಧವನ್ನು ಹೇರಿತ್ತು.

ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ಸದಸ್ಯತ್ವ ಹೊಂದಿರುವ ಭಾರತವು, ಆರ್ಥಿಕ ಅಪರಾಧಗಳನ್ನು ತಡೆಯುವಲ್ಲಿ ಅಂತರರಾಷ್ಟ್ರೀಯ ಮಾನದಂಡಗಳನ್ನು ಪೂರೈಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಾಕಿಸ್ತಾನಕ್ಕೆ ಪದೇ ಪದೇ ಹೇಳಿತ್ತು.


ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...