Homeಅಂತರಾಷ್ಟ್ರೀಯದಾವೂದ್, ಹಫೀಜ್ ಹೆಸರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದ ಪಾಕ್!

ದಾವೂದ್, ಹಫೀಜ್ ಹೆಸರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದ ಪಾಕ್!

1993 ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಇಬ್ರಾಹಿಂ ʼಭಯೋತ್ಪಾದಕʼ ಎಂದು ಪಾಕಿಸ್ತಾನ ಒಪ್ಪಿಕೊಂಡಿರುವುದು ಇದೇ ಮೊದಲು.

- Advertisement -
- Advertisement -

ಕಣ್ಮರೆಯಾಗಿರುವ ದರೋಡೆಕೋರ ದಾವೂದ್ ಇಬ್ರಾಹಿಂ, ಲಷ್ಕರ್-ಎ-ತೈಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಇನ್ನೂ ಕೆಲವು ತಾಲಿಬಾನ್ ನಾಯಕರ ಹೆಸರನ್ನು ಪಾಕಿಸ್ತಾನವು ಭಯೋತ್ಪಾದಕರ ಪಟ್ಟಿಗೆ ಸೇರಿಸಿ, ಆಸ್ತಿ ಜಪ್ತಿ, ಶಸ್ತ್ರಾಸ್ತ್ರ ನಿರ್ಬಂಧ ಮತ್ತು ಪ್ರಯಾಣ ನಿಷೇಧವನ್ನು ವಿಧಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

1993 ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಇಬ್ರಾಹಿಂ ʼಭಯೋತ್ಪಾದಕʼ ಎಂದು ಪಾಕಿಸ್ತಾನ ಒಪ್ಪಿಕೊಂಡಿರುವುದು ಇದೇ ಮೊದಲು.

ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ಗೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು ತೋರಿಸುವ ಪ್ರಯತ್ನದಲ್ಲಿ ಪಾಕಿಸ್ತಾನ ಈ ನಿರ್ಧಾರ ತೆಗೆದುಕೊಂಡಿದೆ.

ತನ್ನ ಹೆಸರನ್ನು “ಕಪ್ಪು ಪಟ್ಟಿ” ಗೆ ಸೇರಿಸುವುದನ್ನು ತಡೆಯಲು 27 ಅಂಶಗಳ ಕ್ರಿಯಾ ಯೋಜನೆಯೊಂದಿಗೆ ಸಂಪೂರ್ಣ ಅನುಸರಣೆ ಸಾಧಿಸಲು ಪಾಕ್ ಫೆಬ್ರವರಿಯಲ್ಲಿ ಸಮಯವನ್ನು ನೀಡಿತ್ತು.

ಈ ವಿಷಯದ ಬಗ್ಗೆ ಎರಡು ಅಧಿಸೂಚನೆಗಳನ್ನು ಆಗಸ್ಟ್ 18 ರಂದು ಪಾಕಿಸ್ತಾನ ಸರ್ಕಾರ ಹೊರಡಿಸಿದೆ. ಇದು, ನಿಷೇಧಿತ ಗುಂಪು ಮತ್ತು ವ್ಯಕ್ತಿಗಳ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಆದೇಶಿಸಿವೆ. ಹಣಕಾಸು ಸಂಸ್ಥೆಗಳ ಮೂಲಕ ಹಣದ ವರ್ಗಾವಣೆ ವ್ಯವಹಾರವನ್ನು ನಿಷೇಧಿಸಲಾಗಿದೆ ಎಂದು ದಿ ನ್ಯೂಸ್ ಇಂಟರ್ನ್ಯಾಷನಲ್ ವರದಿ ಮಾಡಿದೆ.

ಜೈಶ್-ಎ-ಮೊಹಮ್ಮದ್‌ ಸಂಘಟನೆಯ ಮೊಹಮ್ಮದ್ ಮಸೂದ್ ಅಜರ್, ಮುಲ್ಲಾ ಫಜ್ಲುಲ್ಲಾ ಮತ್ತು ಜಾಕಿಯೂರ್ ರೆಹಮಾನ್ ಲಖ್ವಿ ಸೇರಿದಂತೆ ಇತರರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಆದೇಶ ಎಲ್‌ಇಟಿ, ಜೈಶ್-ಎ-ಮೊಹಮ್ಮದ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಿದೆ.

ಇದರ ನಡುವೆ ಪಾಕಿಸ್ತಾನವು ಇಬ್ರಾಹಿಂನ ಕೊನೆಯ ಭೇಟಿಯ ಕೆಲವು ವಿಳಾಸಗಳನ್ನು ಪಟ್ಟಿ ಮಾಡಿ, ಐದು ಪಾಸ್‌ಪೋರ್ಟ್‌ಗಳನ್ನು ಹೊಂದಿದೆ ಎಂದು ಉಲ್ಲೇಖಿಸಿದೆ.

ಆದಾಗ್ಯೂ, ಅವೆಲ್ಲವನ್ನೂ ದುರುಪಯೋಗದ ಅಡಿಯಲ್ಲಿ ಟ್ಯಾಗ್ ಮಾಡಿ, ಇಬ್ರಾಹಿಂನ ವಿಳಾಸ ಮತ್ತು ಆತನ ಇತರ ಆಸ್ತಿಗಳನ್ನು ಕರಾಚಿಯಲ್ಲಿ ಪಟ್ಟಿ ಮಾಡಲಾಗಿದೆ.

ವಿಶ್ವಸಂಸ್ಥೆಯು ಮೇ ತಿಂಗಳಲ್ಲಿ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು. ಇದು, ಪ್ರಯಾಣ ನಿಷೇಧ, ಆಸ್ತಿಗಳ ಜಪ್ತಿ ಮತ್ತು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಳ್ಳುವ ನಿರ್ಬಂಧವನ್ನು ಹೇರಿತ್ತು.

ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ಸದಸ್ಯತ್ವ ಹೊಂದಿರುವ ಭಾರತವು, ಆರ್ಥಿಕ ಅಪರಾಧಗಳನ್ನು ತಡೆಯುವಲ್ಲಿ ಅಂತರರಾಷ್ಟ್ರೀಯ ಮಾನದಂಡಗಳನ್ನು ಪೂರೈಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಾಕಿಸ್ತಾನಕ್ಕೆ ಪದೇ ಪದೇ ಹೇಳಿತ್ತು.


ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...