Homeಮುಖಪುಟಕೇರಳ | ಸಿಪಿಐ(ಎಂ) ನಾಯಕಿಯಿಂದ ಟೀಕೆಗೊಳಗಾದ ಮರುದಿನ ಶವವಾಗಿ ಪತ್ತೆಯಾದ ಹೆಚ್ಚುವರಿ ಜಿಲ್ಲಾಧಿಕಾರಿ

ಕೇರಳ | ಸಿಪಿಐ(ಎಂ) ನಾಯಕಿಯಿಂದ ಟೀಕೆಗೊಳಗಾದ ಮರುದಿನ ಶವವಾಗಿ ಪತ್ತೆಯಾದ ಹೆಚ್ಚುವರಿ ಜಿಲ್ಲಾಧಿಕಾರಿ

- Advertisement -
- Advertisement -

ಸಿಪಿಐ(ಎಂ) ನಾಯಕಿ ಮತ್ತು ಕಣ್ಣೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ ಪಿ ದಿವ್ಯಾ ಅವರಿಂದ ಸಾರ್ವಜನಿಕ ಸಮಾರಂಭದಲ್ಲಿ ಟೀಕೆಗೊಳಗಾದ ಮರುದಿನವೇ, ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ನವೀನ್ ಬಾಬು ಮಂಗಳವಾರ ಅವರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಬಾಬು ಅವರ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ಅವರು ನಾಳೆ ಪತ್ತನಂತಿಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದರು.

ಸೋಮವಾರ ಕಣ್ಣೂರಿನಲ್ಲಿ ಬಾಬು ಅವರ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಅರ್ಜುನ್ ಪಾಂಡನ್ ಮುಖ್ಯ ಅತಿಥಿಯಾಗಿದ್ದ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದಿವ್ಯಾ ಅವರನ್ನು ಆಹ್ವಾನಿಸಿರಲಿಲ್ಲ.

ಆದರೆ, ದಿವ್ಯಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಮಾತನಾಡಿದ್ದ ಅವರು, “ಬೇರೆ ಜಿಲ್ಲೆಗೆ ತೆರಳುತ್ತಿರುವ ಎಡಿಎಂಗೆ ನಾನು ಎಲ್ಲಾ ರೀತಿಯ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಮಾಜಿ ಎಡಿಎಂ ಅಧಿಕಾರಾವಧಿಯಲ್ಲಿ ಹಲವು ಬಾರಿ ನಾನು ಅವರ ಜೊತೆ ಮಾತನಾಡಿದ್ದೆ. ಆದರೆ, ಈ ಎಡಿಎಂ ಜೊತೆ ನನಗೆ ಅಂತಹ ಅವಕಾಶ ಸಿಕ್ಕಿಲ್ಲ. ಚೆಂಗಲೈನಲ್ಲಿ ಪೆಟ್ರೋಲ್ ಬಂಕ್ ಒಂದಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ಕೊಡಿಸುವ ಬಗ್ಗೆ ಮಾತನಾಡಲು ಇವರಿಗೆ ನಾನು ಒಮ್ಮೆ ಕರೆ ಮಾಡಿದ್ದೆ. ಎಡಿಎಂ ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಲು ನಾನು ಬಯಸಿದ್ದೆ. ಬಳಿಕ ಎಡಿಎಂ ಪೆಟ್ರೋಲ್ ಬಂಕ್‌ಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದರು. ಆದರೆ, ಪೆಟ್ರೋಲ್ ಬಂಕ್ ಮಾಲೀಕ ಎಡಿಎಂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ನನ್ನ ಬಳಿ ಹಲವು ಬಾರಿ ಬಂದಿದ್ದರು. ಈ ಬಗ್ಗೆ ಎಡಿಎಂ ಅವರನ್ನು ಕೇಳಿದಾಗ, ಅಂಕುಡೊಂಕು ರಸ್ತೆಯಿಂದ ಕೆಲವು ಸಮಸ್ಯೆಗಳಿದ್ದು, ಎನ್‌ಒಸಿ ನೀಡಲು ಸಮಸ್ಯೆ ಇದೆ ಎಂದಿದ್ದರು. ನೀವು ಆಗಾಗ ಎಡಿಎಂ ಅವರನ್ನು ಭೇಟಿ ಮಾಡುವ ಅಗತ್ಯ ಇಲ್ಲ ಎಂದು ಬಂಕ್ ಮಾಲೀಕರಿಗೆ ಹೇಳಿದ್ದ ನಾನು, ಎನ್‌ಒಸಿ ಪಡೆಯಲು ಅವರಿಗೆ ಸಹಾಯ ಮಾಡಲು ಮುಂದಾಗಿದ್ದೆ” ಎಂದಿದ್ದರು.

“ಈಗ ಎಡಿಎಂ ಇಲ್ಲಿಂದ ಬಿಟ್ಟು ಹೋಗುವಾಗ ಎನ್‌ಒಸಿ ನೀಡಲಾಗಿದೆ ಎನ್ನುತ್ತಿದ್ದಾರೆ. ಎನ್‌ಒಸಿ ಕೊಟ್ಟಿದ್ದು ಹೇಗೆ ಅಂತ ನನಗೆ ಗೊತ್ತು. ಆ ಎನ್‌ಒಸಿ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಜೀವನದಲ್ಲಿ ನಾವು ಪ್ರಾಮಾಣಿಕರಾಗಿರಬೇಕು. ಹೊಸ ಪೋಸ್ಟಿಂಗ್ ಜಾಗದಲ್ಲಿ ಕಣ್ಣೂರಿನಲ್ಲಿ ಮಾಡಿದ ರೀತಿಯಲ್ಲಿ ಕೆಲಸ ಮಾಡಬೇಡಿ. ನೀವು ಜನರಿಗೆ ಉತ್ತಮ ರೀತಿಯಲ್ಲಿ ಸಹಾಯ ಮಾಡಿ. ಇದು ಸರ್ಕಾರಿ ಸೇವೆ ಮತ್ತು ಏನಾದರೂ ಆಗಲು ಒಂದು ಕ್ಷಣ ಸಾಕು” ಎಂದು ಹೇಳಿದ್ದರು.

ಎಡಿಎಂಗೆ ಉಡುಗೊರೆ ನೀಡುವಾಗ ಅಲ್ಲಿ ತಾನು ಇರಬಾರದು ಎಂದು ಹೇಳಿದ ದಿವ್ಯಾ ಅವರು, ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅವರ ಸಹೋದ್ಯೋಗಿಗಳು ಹಾಜರಿದ್ದಾಗಲೇ ಸ್ಥಳದಿಂದ ನಿರ್ಗಮಿಸಿದ್ದರು. ಅವರು ಕಾರ್ಯಕ್ರಮದಿಂದ ಅರ್ಧಕ್ಕೆ ಹೋಗಲು ಕಾರಣ ಏನು ಎಂಬುವುದನ್ನು ಎರಡು ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದಿದ್ದರು.

ಈ ನಡುವೆ ಇಂದು ಬಾಬು ಅವರು ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಕುರಿತು ಸಿಪಿಐ(ಎಂ) ಕಣ್ಣೂರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದಿವ್ಯಾ ಅವರು ಸಿಪಿಐ(ಎಂ) ಮಹಿಳಾ ಘಟಕ, ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.

ದಿವ್ಯಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ಓದಿ : ಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...