Homeಮುಖಪುಟಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿತ್ತು.

- Advertisement -
- Advertisement -

ಗೋ ಹತ್ಯೆಯಲ್ಲಿ ಭಾಗಿಯಾಗುವವರು ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತೆ ಘೋಷಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಉನ್ನಾವೊದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.

“ಎಂತಹ ಸ್ಥಿತಿಯಲ್ಲೂ ನಾವು ಹಸುಗಳನ್ನು ರಕ್ಷಿಸಿಯೇ ತಿರುತ್ತೇವೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ. “ಗೋಹತ್ಯೆ ಕೃತ್ಯದಲ್ಲಿ ಭಾಗಿಯಾಗುವವರು ಜೈಲಿಗೆ ಹೋಗುತ್ತಾರೆ. ಸರ್ಕಾರವು ಆರೋಪಿಗಳಿಗೆ ಕಠಿಣವಾದ ಶಿಕ್ಷೆ ಮತ್ತು ಕಠಿಣ ಕಾನೂನಿನ ಅಡಿಯಲ್ಲಿ ಶಿಕ್ಷಿಸುತ್ತದೆ’ ಎಂದು ಆದಿತ್ಯನಾಥ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

1955ರ ಉತ್ತರ ಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ನಿಬಂಧನೆಗಳು “ಆಗಾಗ್ಗೆ ದುರ್ಬಳಕೆ” ಆಗುತ್ತಿವೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಈ ಹೇಳಿಕೆ ಬಂದಿದೆ.

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು. ಕಾಯಿದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಗೋಹತ್ಯೆ ಮತ್ತು ಮಾಂಸ ಮಾರಾಟದ ಆರೋಪ ಹೊತ್ತ ವ್ಯಕ್ತಿಯ ಅರ್ಜಿ ಆಲಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಹಲವು ಪ್ರಕರಣಗಳಲ್ಲಿ ಅಧಿಕಾರಿಗಳು ಪತ್ತೆ ಮಾಡಿದ ಮಾಂಸವನ್ನು ಯಾವುದೇ ರೀತಿಯ ವಿಶ್ಲೇಷಣೆ ಮಾಡದೆ ಹಾಗೂ ದೃಢೀಕರಿಸದೆ ಗೋಮಾಂಸ ಎಂದು ಭಾವಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ ಅವರಿದ್ದ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು.

ನ್ಯಾಯಾಲಯದ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿಗಳು ಗೋವುಗಳನ್ನು ಉಳಿಸಲು ತಮ್ಮ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಮಾತನಾಡಿದ್ದಾರೆ. “ಗೋವುಗಳನ್ನು ಸುರಕ್ಷಿತವಾಗಿಸಲು, ಪ್ರತಿ ಜಿಲ್ಲೆಯಲ್ಲೂ ಗೋಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಹಸುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಮಾತುಗಳನ್ನು ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.

ಮುಖ್ಯಮಂತ್ರಿ ಆದಿತ್ಯನಾಥ್ ಬಿಜೆಪಿಯ ಹಿಂದುತ್ವ ಅಜೆಂಡಾದ ಭಾಗವಾಗಿ ಗೋಹತ್ಯೆ ಮತ್ತು ಸಣ್ಣ ಪ್ರಮಾಣದ ಗೋಮಾಂಸ ವ್ಯಾಪಾರವನ್ನು ಹೆಚ್ಚಾಗಿ ಮುಸ್ಲಿಮರು ಮತ್ತು ದಲಿತರು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಜೂನ್‌ನಲ್ಲಿ ಉತ್ತರ ಪ್ರದೇಶ ಕ್ಯಾಬಿನೆಟ್ ಗೋಹತ್ಯೆಗೆ 10 ವರ್ಷಗಳವರೆಗೆ ಜೈಲುಶಿಕ್ಷೆ ಮತ್ತು 5 ಲಕ್ಷ ರೂ.ವರೆಗೆ ದಂಡವನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ.

ಉತ್ತರಪ್ರದೇಶ ಗೋಹತ್ಯೆ ತಡೆ ಕಾಯ್ದೆ, 1955 ಅನ್ನು ಜನವರಿ 6, 1956 ರಂದು ರಾಜ್ಯದಲ್ಲಿ ಜಾರಿಗೆ ತರಲಾಯಿತು. ಈ ಕಾಯ್ದೆಯನ್ನು 1958, 1961, 1979 ಮತ್ತು 2002 ರಲ್ಲಿ ತಿದ್ದುಪಡಿ ಮಾಡಲಾಗಿದೆ.

ಕೇಂದ್ರ ಸರ್ಕಾರವು 2017 ರ ಮೇ ತಿಂಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಿತ್ತು. ಕೇರಳ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ ಮತ್ತು ಸಿಕ್ಕಿಂ ಹೊರತುಪಡಿಸಿ ಭಾರತದ ಉಳಿದ ರಾಜ್ಯಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಜಾರ್ಖಂಡ್: ಗೋಹತ್ಯೆ ನಿಲ್ಲಿಸಬೇಕೆಂದು ಯುವಕನ ಕೊರಳು ಕೊಯ್ದ ಸ್ನೇಹಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...