Homeಮುಖಪುಟಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿತ್ತು.

- Advertisement -
- Advertisement -

ಗೋ ಹತ್ಯೆಯಲ್ಲಿ ಭಾಗಿಯಾಗುವವರು ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತೆ ಘೋಷಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಉನ್ನಾವೊದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.

“ಎಂತಹ ಸ್ಥಿತಿಯಲ್ಲೂ ನಾವು ಹಸುಗಳನ್ನು ರಕ್ಷಿಸಿಯೇ ತಿರುತ್ತೇವೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ. “ಗೋಹತ್ಯೆ ಕೃತ್ಯದಲ್ಲಿ ಭಾಗಿಯಾಗುವವರು ಜೈಲಿಗೆ ಹೋಗುತ್ತಾರೆ. ಸರ್ಕಾರವು ಆರೋಪಿಗಳಿಗೆ ಕಠಿಣವಾದ ಶಿಕ್ಷೆ ಮತ್ತು ಕಠಿಣ ಕಾನೂನಿನ ಅಡಿಯಲ್ಲಿ ಶಿಕ್ಷಿಸುತ್ತದೆ’ ಎಂದು ಆದಿತ್ಯನಾಥ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

1955ರ ಉತ್ತರ ಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ನಿಬಂಧನೆಗಳು “ಆಗಾಗ್ಗೆ ದುರ್ಬಳಕೆ” ಆಗುತ್ತಿವೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಈ ಹೇಳಿಕೆ ಬಂದಿದೆ.

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು. ಕಾಯಿದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಗೋಹತ್ಯೆ ಮತ್ತು ಮಾಂಸ ಮಾರಾಟದ ಆರೋಪ ಹೊತ್ತ ವ್ಯಕ್ತಿಯ ಅರ್ಜಿ ಆಲಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಹಲವು ಪ್ರಕರಣಗಳಲ್ಲಿ ಅಧಿಕಾರಿಗಳು ಪತ್ತೆ ಮಾಡಿದ ಮಾಂಸವನ್ನು ಯಾವುದೇ ರೀತಿಯ ವಿಶ್ಲೇಷಣೆ ಮಾಡದೆ ಹಾಗೂ ದೃಢೀಕರಿಸದೆ ಗೋಮಾಂಸ ಎಂದು ಭಾವಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ ಅವರಿದ್ದ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು.

ನ್ಯಾಯಾಲಯದ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿಗಳು ಗೋವುಗಳನ್ನು ಉಳಿಸಲು ತಮ್ಮ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಮಾತನಾಡಿದ್ದಾರೆ. “ಗೋವುಗಳನ್ನು ಸುರಕ್ಷಿತವಾಗಿಸಲು, ಪ್ರತಿ ಜಿಲ್ಲೆಯಲ್ಲೂ ಗೋಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಹಸುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಮಾತುಗಳನ್ನು ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.

ಮುಖ್ಯಮಂತ್ರಿ ಆದಿತ್ಯನಾಥ್ ಬಿಜೆಪಿಯ ಹಿಂದುತ್ವ ಅಜೆಂಡಾದ ಭಾಗವಾಗಿ ಗೋಹತ್ಯೆ ಮತ್ತು ಸಣ್ಣ ಪ್ರಮಾಣದ ಗೋಮಾಂಸ ವ್ಯಾಪಾರವನ್ನು ಹೆಚ್ಚಾಗಿ ಮುಸ್ಲಿಮರು ಮತ್ತು ದಲಿತರು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಜೂನ್‌ನಲ್ಲಿ ಉತ್ತರ ಪ್ರದೇಶ ಕ್ಯಾಬಿನೆಟ್ ಗೋಹತ್ಯೆಗೆ 10 ವರ್ಷಗಳವರೆಗೆ ಜೈಲುಶಿಕ್ಷೆ ಮತ್ತು 5 ಲಕ್ಷ ರೂ.ವರೆಗೆ ದಂಡವನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ.

ಉತ್ತರಪ್ರದೇಶ ಗೋಹತ್ಯೆ ತಡೆ ಕಾಯ್ದೆ, 1955 ಅನ್ನು ಜನವರಿ 6, 1956 ರಂದು ರಾಜ್ಯದಲ್ಲಿ ಜಾರಿಗೆ ತರಲಾಯಿತು. ಈ ಕಾಯ್ದೆಯನ್ನು 1958, 1961, 1979 ಮತ್ತು 2002 ರಲ್ಲಿ ತಿದ್ದುಪಡಿ ಮಾಡಲಾಗಿದೆ.

ಕೇಂದ್ರ ಸರ್ಕಾರವು 2017 ರ ಮೇ ತಿಂಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಿತ್ತು. ಕೇರಳ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ ಮತ್ತು ಸಿಕ್ಕಿಂ ಹೊರತುಪಡಿಸಿ ಭಾರತದ ಉಳಿದ ರಾಜ್ಯಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಜಾರ್ಖಂಡ್: ಗೋಹತ್ಯೆ ನಿಲ್ಲಿಸಬೇಕೆಂದು ಯುವಕನ ಕೊರಳು ಕೊಯ್ದ ಸ್ನೇಹಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...