Homeಮುಖಪುಟಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿತ್ತು.

- Advertisement -
- Advertisement -

ಗೋ ಹತ್ಯೆಯಲ್ಲಿ ಭಾಗಿಯಾಗುವವರು ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತೆ ಘೋಷಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಉನ್ನಾವೊದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.

“ಎಂತಹ ಸ್ಥಿತಿಯಲ್ಲೂ ನಾವು ಹಸುಗಳನ್ನು ರಕ್ಷಿಸಿಯೇ ತಿರುತ್ತೇವೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ. “ಗೋಹತ್ಯೆ ಕೃತ್ಯದಲ್ಲಿ ಭಾಗಿಯಾಗುವವರು ಜೈಲಿಗೆ ಹೋಗುತ್ತಾರೆ. ಸರ್ಕಾರವು ಆರೋಪಿಗಳಿಗೆ ಕಠಿಣವಾದ ಶಿಕ್ಷೆ ಮತ್ತು ಕಠಿಣ ಕಾನೂನಿನ ಅಡಿಯಲ್ಲಿ ಶಿಕ್ಷಿಸುತ್ತದೆ’ ಎಂದು ಆದಿತ್ಯನಾಥ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

1955ರ ಉತ್ತರ ಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ನಿಬಂಧನೆಗಳು “ಆಗಾಗ್ಗೆ ದುರ್ಬಳಕೆ” ಆಗುತ್ತಿವೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಈ ಹೇಳಿಕೆ ಬಂದಿದೆ.

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು. ಕಾಯಿದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಗೋಹತ್ಯೆ ಮತ್ತು ಮಾಂಸ ಮಾರಾಟದ ಆರೋಪ ಹೊತ್ತ ವ್ಯಕ್ತಿಯ ಅರ್ಜಿ ಆಲಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಹಲವು ಪ್ರಕರಣಗಳಲ್ಲಿ ಅಧಿಕಾರಿಗಳು ಪತ್ತೆ ಮಾಡಿದ ಮಾಂಸವನ್ನು ಯಾವುದೇ ರೀತಿಯ ವಿಶ್ಲೇಷಣೆ ಮಾಡದೆ ಹಾಗೂ ದೃಢೀಕರಿಸದೆ ಗೋಮಾಂಸ ಎಂದು ಭಾವಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ ಅವರಿದ್ದ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು.

ನ್ಯಾಯಾಲಯದ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿಗಳು ಗೋವುಗಳನ್ನು ಉಳಿಸಲು ತಮ್ಮ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಮಾತನಾಡಿದ್ದಾರೆ. “ಗೋವುಗಳನ್ನು ಸುರಕ್ಷಿತವಾಗಿಸಲು, ಪ್ರತಿ ಜಿಲ್ಲೆಯಲ್ಲೂ ಗೋಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಹಸುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಮಾತುಗಳನ್ನು ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.

ಮುಖ್ಯಮಂತ್ರಿ ಆದಿತ್ಯನಾಥ್ ಬಿಜೆಪಿಯ ಹಿಂದುತ್ವ ಅಜೆಂಡಾದ ಭಾಗವಾಗಿ ಗೋಹತ್ಯೆ ಮತ್ತು ಸಣ್ಣ ಪ್ರಮಾಣದ ಗೋಮಾಂಸ ವ್ಯಾಪಾರವನ್ನು ಹೆಚ್ಚಾಗಿ ಮುಸ್ಲಿಮರು ಮತ್ತು ದಲಿತರು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಜೂನ್‌ನಲ್ಲಿ ಉತ್ತರ ಪ್ರದೇಶ ಕ್ಯಾಬಿನೆಟ್ ಗೋಹತ್ಯೆಗೆ 10 ವರ್ಷಗಳವರೆಗೆ ಜೈಲುಶಿಕ್ಷೆ ಮತ್ತು 5 ಲಕ್ಷ ರೂ.ವರೆಗೆ ದಂಡವನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ.

ಉತ್ತರಪ್ರದೇಶ ಗೋಹತ್ಯೆ ತಡೆ ಕಾಯ್ದೆ, 1955 ಅನ್ನು ಜನವರಿ 6, 1956 ರಂದು ರಾಜ್ಯದಲ್ಲಿ ಜಾರಿಗೆ ತರಲಾಯಿತು. ಈ ಕಾಯ್ದೆಯನ್ನು 1958, 1961, 1979 ಮತ್ತು 2002 ರಲ್ಲಿ ತಿದ್ದುಪಡಿ ಮಾಡಲಾಗಿದೆ.

ಕೇಂದ್ರ ಸರ್ಕಾರವು 2017 ರ ಮೇ ತಿಂಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಿತ್ತು. ಕೇರಳ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ ಮತ್ತು ಸಿಕ್ಕಿಂ ಹೊರತುಪಡಿಸಿ ಭಾರತದ ಉಳಿದ ರಾಜ್ಯಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಜಾರ್ಖಂಡ್: ಗೋಹತ್ಯೆ ನಿಲ್ಲಿಸಬೇಕೆಂದು ಯುವಕನ ಕೊರಳು ಕೊಯ್ದ ಸ್ನೇಹಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...