Homeಮುಖಪುಟಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿತ್ತು.

- Advertisement -
- Advertisement -

ಗೋ ಹತ್ಯೆಯಲ್ಲಿ ಭಾಗಿಯಾಗುವವರು ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತೆ ಘೋಷಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಉನ್ನಾವೊದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.

“ಎಂತಹ ಸ್ಥಿತಿಯಲ್ಲೂ ನಾವು ಹಸುಗಳನ್ನು ರಕ್ಷಿಸಿಯೇ ತಿರುತ್ತೇವೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ. “ಗೋಹತ್ಯೆ ಕೃತ್ಯದಲ್ಲಿ ಭಾಗಿಯಾಗುವವರು ಜೈಲಿಗೆ ಹೋಗುತ್ತಾರೆ. ಸರ್ಕಾರವು ಆರೋಪಿಗಳಿಗೆ ಕಠಿಣವಾದ ಶಿಕ್ಷೆ ಮತ್ತು ಕಠಿಣ ಕಾನೂನಿನ ಅಡಿಯಲ್ಲಿ ಶಿಕ್ಷಿಸುತ್ತದೆ’ ಎಂದು ಆದಿತ್ಯನಾಥ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

1955ರ ಉತ್ತರ ಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ನಿಬಂಧನೆಗಳು “ಆಗಾಗ್ಗೆ ದುರ್ಬಳಕೆ” ಆಗುತ್ತಿವೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಈ ಹೇಳಿಕೆ ಬಂದಿದೆ.

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು. ಕಾಯಿದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಗೋಹತ್ಯೆ ಮತ್ತು ಮಾಂಸ ಮಾರಾಟದ ಆರೋಪ ಹೊತ್ತ ವ್ಯಕ್ತಿಯ ಅರ್ಜಿ ಆಲಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಹಲವು ಪ್ರಕರಣಗಳಲ್ಲಿ ಅಧಿಕಾರಿಗಳು ಪತ್ತೆ ಮಾಡಿದ ಮಾಂಸವನ್ನು ಯಾವುದೇ ರೀತಿಯ ವಿಶ್ಲೇಷಣೆ ಮಾಡದೆ ಹಾಗೂ ದೃಢೀಕರಿಸದೆ ಗೋಮಾಂಸ ಎಂದು ಭಾವಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ ಅವರಿದ್ದ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು.

ನ್ಯಾಯಾಲಯದ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿಗಳು ಗೋವುಗಳನ್ನು ಉಳಿಸಲು ತಮ್ಮ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಮಾತನಾಡಿದ್ದಾರೆ. “ಗೋವುಗಳನ್ನು ಸುರಕ್ಷಿತವಾಗಿಸಲು, ಪ್ರತಿ ಜಿಲ್ಲೆಯಲ್ಲೂ ಗೋಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಹಸುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಮಾತುಗಳನ್ನು ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.

ಮುಖ್ಯಮಂತ್ರಿ ಆದಿತ್ಯನಾಥ್ ಬಿಜೆಪಿಯ ಹಿಂದುತ್ವ ಅಜೆಂಡಾದ ಭಾಗವಾಗಿ ಗೋಹತ್ಯೆ ಮತ್ತು ಸಣ್ಣ ಪ್ರಮಾಣದ ಗೋಮಾಂಸ ವ್ಯಾಪಾರವನ್ನು ಹೆಚ್ಚಾಗಿ ಮುಸ್ಲಿಮರು ಮತ್ತು ದಲಿತರು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಜೂನ್‌ನಲ್ಲಿ ಉತ್ತರ ಪ್ರದೇಶ ಕ್ಯಾಬಿನೆಟ್ ಗೋಹತ್ಯೆಗೆ 10 ವರ್ಷಗಳವರೆಗೆ ಜೈಲುಶಿಕ್ಷೆ ಮತ್ತು 5 ಲಕ್ಷ ರೂ.ವರೆಗೆ ದಂಡವನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ.

ಉತ್ತರಪ್ರದೇಶ ಗೋಹತ್ಯೆ ತಡೆ ಕಾಯ್ದೆ, 1955 ಅನ್ನು ಜನವರಿ 6, 1956 ರಂದು ರಾಜ್ಯದಲ್ಲಿ ಜಾರಿಗೆ ತರಲಾಯಿತು. ಈ ಕಾಯ್ದೆಯನ್ನು 1958, 1961, 1979 ಮತ್ತು 2002 ರಲ್ಲಿ ತಿದ್ದುಪಡಿ ಮಾಡಲಾಗಿದೆ.

ಕೇಂದ್ರ ಸರ್ಕಾರವು 2017 ರ ಮೇ ತಿಂಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಿತ್ತು. ಕೇರಳ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ ಮತ್ತು ಸಿಕ್ಕಿಂ ಹೊರತುಪಡಿಸಿ ಭಾರತದ ಉಳಿದ ರಾಜ್ಯಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಜಾರ್ಖಂಡ್: ಗೋಹತ್ಯೆ ನಿಲ್ಲಿಸಬೇಕೆಂದು ಯುವಕನ ಕೊರಳು ಕೊಯ್ದ ಸ್ನೇಹಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...