Homeಕರ್ನಾಟಕಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ

ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ

- Advertisement -
- Advertisement -

‘ಜಸ್ಟೀಸ್ ಎಚ್.ಎನ್.ನಾಗಮೋಹನ್‌ದಾಸ್ ರವರ ಸಮೀಕ್ಷಾ ವರದಿ ಜುಲೈ 30ರೊಳಗೆ ಸಲ್ಲಿಕೆಯಾಗಲಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಧಿವೇಶನದಲ್ಲಿ ಒಳಮೀಸಲಾತಿ ಈಡೇರಿಕೆಗಾಗಿ ತಮ್ಮ ಬದ್ಧತೆಯನ್ನು ಪ್ರಕಟಿಸಬೇಕು. ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕಸಬೇಕು ಎಂದು ಆಗ್ರಹಿಸಿ ಆಗಸ್ಟ್ 11 ರಿಂದ ಅನಿರ್ಧಿಷ್ಟ ಅಹೋರಾತ್ರಿ ಸತ್ಯಾಗ್ರಹ ಆರಂಭ ಮಾಡಲಾಗುವುದು” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ ಸಂಚಾಲಕರಾದ ಬಸವರಾಜ್ ಕೌತಾಳ್ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 1, 2024 ರಂದು ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರಗಳು ಆದ್ಯತೆಯ ಮೇರೆಗೆ ಜಾರಿಗೊಳಿಸಬಹುದು ಎಂಬ ಐತಿಹಾಸಿಕ ತೀರ್ಪನ್ನು ನೀಡಿ ಒಂದುವರ್ಷ ಗತಿಸುತ್ತಿದೆ. ಎರಡೇ ತಿಂಗಳಲ್ಲಿ ಪರಿಶಿಷ್ಠ ಜಾತಿ ಸಮುದಾಯಗಳ ಜನಸಂಖ್ಯಾ ಸಮೀಕ್ಷೆಯನ್ನು ಪೂರ್ಣಗೊಳಿಸಿ ತಮ್ಮ ನೈತಿಕ ಜವಾಬ್ದಾರಿಯನ್ನು ಪೂರೈಸಿದ್ದರೆ, 30 ವರ್ಷಗಳ ಒಳಮೀಸಲಾತಿ ಹೋರಾಟವು ಮತ್ತೊಂದು ಸುತ್ತಿನ ಹೋರಾಟವಾಗಿ ಪರಿವರ್ತನೆಯಾಗುವ ಅಗತ್ಯವಿರಲಿಲ್ಲ” ಎಂದು ಹೇಳಿದರು.

“ಈಗಲಾದರೂ ಇಂತಹ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರೆಸದೇ, ಆಡಳಿತರೂಢ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸುವ ಮೂಲಕ ತಮ್ಮ ಬದ್ಧತೆಯನ್ನು ಪ್ರಕಟಿಸಬೇಕಾಗಿದೆ. ಏಕೆಂದರೆ, ಜಸ್ಟಿಸ್ ನಾಗಮೋಹನ್ ದಾಸ್‌ರವರ ನೇತೃತ್ವದಲ್ಲಿ ನೇಮಕವಾದ ಏಕಸದಸ್ಯ ಆಯೋಗವು ಪರಿಶಿಷ್ಠ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವೈಜ್ಞಾನಿಕ ಹಾಗೂ ವಸ್ತುನಿಷ್ಠ ವರದಿಯನ್ನು ಜುಲೈ 30ರೊಳಗಡೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ” ಎಂದರು.

“ವರದಿಯನ್ನು ಆದಷ್ಟು ಬೇಗ ಪಡೆದು ಆಗಸ್ಟ್ 11 ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಸರ್ವಪಕ್ಷಗಳ ಅನುಮೋದನೆಯೊಂದಿಗೆ ಒಳಮೀಸಲಾತಿ ಬೇಡಿಕೆಯನ್ನು ಅಂಗೀಕರಿಸಿದರೆ, ನೇಮಕಾತಿ ಆಗಬೇಕಾದ 30 ಸಾವಿರಕ್ಕೂ ಅಧಿಕ ಹುದ್ದೆಗಳು ವಂಚಿತ ನಿರುದ್ಯೋಗಿ ಯುವಕ, ಯುವತಿಯರು ಪಡೆಯಬಹುದಾಗಿದೆ. ವಿಷಾದಕರ ಸಂಗತಿ ಎಂದರೆ, ಕಳೆದ 30ವರ್ಷಗಳಲ್ಲಿ ಆಯೋಗ ನೇಮಕವಾಗಲು, ನೇಮಕವಾದ ಆಯೋಗಕ್ಕೆ ಅನುದಾನ ನೀಡಲು, ಸರ್ಕಾರಕ್ಕೆ ಒಪ್ಪಿಸಿದ ವರದಿಯನ್ನು ಅನುಷ್ಠಾನಗೊಳಿಸಲು 3 ದಶಕಗಳ ವಿಳಂಬ ಮುಂದುವರೆದಿರುವುದರಿಂದ ನೊಂದ ಸಮುದಾಯಗಳು ಯಾವುದೇ ಸರ್ಕಾರಗಳನ್ನು ನಂಬುವ ಸ್ಥಿತಿಯಲ್ಲಿಲ್ಲ” ಎಂದು ಬೇಸರ ಹೊರಹಾಕಿದರು.

“ಈ ಎಲ್ಲ ಕಹಿ ಅನುಭವಗಳು ಮುಂದುವರೆಯದಂತೆ ಸರ್ಕಾರವು ಆಗಸ್ಟ್ 11 ರಿಂದ ಆರಂಭವಾಗಲಿರುವ ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆಯಲು ಆಗ್ರಹಿಸಿ ದಿನಾಂಕ: 11-08-2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟ ಅಹೋರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ, ಎಲ್ಲ ಸಂಘ- ಸಂಸ್ಥೆಗಳ ಮುಖಂಡರುಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಈ ಹೋರಾಟದಲ್ಲಿ ಭಾಗವಹಿಸಬೇಕೆಂದು ವಿನಂತಿಸುತ್ತೇವೆ” ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್‌ ಕೌತಾಳ್‌, ಚಂದ್ರು ತರಹುಣಿಸೆ, ಮೂರ್ತಿ ಅಂಬೇಡ್ಕರ್‌, ವೇಣುಗೋಪಾಲ್‌ ಮೌರ್ಯ, ಮಂಜುನಾಥ ಮರಾಟ, ಪೌರಕಾರ್ಮಿಕರ ಸಂಘದ ಶ್ರೀನಿವಾಸ್‌ ಹಾಜರಿದ್ದರು.

‘ಕರ್ನಾಟಕ ಹೈಕೋರ್ಟ್‌ ಆದೇಶ ಸ್ವೀಕಾರಾರ್ಹವಲ್ಲ..’; ನಟ ದರ್ಶನ್ ಜಾಮೀನಿಗೆ ಸುಪ್ರೀಂ ಕೋರ್ಟ್ ಮತ್ತೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...